Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಜತೆ ಮಧ್ಯರಾತ್ರಿ ಬರ್ತ್​​ಡೇ ಆಚರಿಸಿಕೊಂಡ ಉಪೇಂದ್ರ: ಸಾಹಸ ಸಿಂಹನನ್ನು ನೆನೆದ ರಿಯಲ್ ಸ್ಟಾರ್​

ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿವಾಸ ಹೊಂದಿದ್ದಾರೆ. ಉಪ್ಪಿ ನಿವಾಸಕ್ಕೆ ತಡರಾತ್ರಿಯೇ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಟನಿಗೆ ಎಲ್ಲರೂ ಬರ್ತ್​​​ಡೇ ವಿಶ್ ತಿಳಿಸಿದ್ದಾರೆ.

ಅಭಿಮಾನಿಗಳ ಜತೆ ಮಧ್ಯರಾತ್ರಿ ಬರ್ತ್​​ಡೇ ಆಚರಿಸಿಕೊಂಡ ಉಪೇಂದ್ರ: ಸಾಹಸ ಸಿಂಹನನ್ನು ನೆನೆದ ರಿಯಲ್ ಸ್ಟಾರ್​
ಉಪೇಂದ್ರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 18, 2022 | 7:08 AM

ನಟ ಉಪೇಂದ್ರ (Upendra) ಅವರಿಗೆ ಇಂದು (ಸೆಪ್ಟೆಂಬರ್ 18) ಬರ್ತ್​ಡೇ ಸಂಭ್ರಮ. ಅವರು ತಮ್ಮ 54ನೇ ಜನ್ಮದಿನವನ್ನು ಅಭಿಮಾನಿಗಳ ಜತೆ ಆಚರಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷ ಕೊವಿಡ್ ಕಾರಣದಿಂದ ಸರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಈಗ ಕೊವಿಡ್ ಕಡಿಮೆಯಾಗಿದೆ. ಈ ಕಾರಣದಿಂದ ಉಪೇಂದ್ರ (Upendra Birthday) ಅವರು ಅಭಿಮಾನಿಗಳ ಜತೆಗೂಡಿ ವಿಶೇಷ ದಿನವನ್ನು ಆಚರಿಸಿಕೊಂಡಿದ್ದಾರೆ. ಉಪೇಂದ್ರ ಅವರಿಗೆ ಅನೇಕ ಸೆಲೆಬ್ರಿಟಿಗಳು ಬರ್ತ್​ಡೇ ವಿಶ್ ಮಾಡುತ್ತಿದ್ದಾರೆ.

ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿವಾಸ ಹೊಂದಿದ್ದಾರೆ. ಉಪ್ಪಿ ನಿವಾಸಕ್ಕೆ ತಡರಾತ್ರಿಯೇ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಟನಿಗೆ ಎಲ್ಲರೂ ಬರ್ತ್​​​ಡೇ ವಿಶ್ ತಿಳಿಸಿದ್ದಾರೆ. ಅಭಿಮಾನಿಗಳಿಗೆ ಉಪೇಂದ್ರ ಸಿಹಿ ಹಂಚಿದ್ದಾರೆ. ಈ ವೇಳೆ ಫ್ಯಾನ್ಸ್ ಸಂಭ್ರಮ ಮುಗಿಲುಮುಟ್ಟಿತ್ತು.

ಇದನ್ನೂ ಓದಿ
Image
Upendra: ‘ಈ ಕೆಲಸ ಮಾಡಿ, ನಮ್ಮ ಮನೆಗೆ ಬನ್ನಿ’; ಫ್ಯಾನ್ಸ್​ಗೆ ಆಹ್ವಾನ ನೀಡಿದ ಉಪೇಂದ್ರ: ಏನಿದು ಟಾಸ್ಕ್​?
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ
Image
‘ಗಂಧದ ಗುಡಿ’ ಬಳಿಕ ರಾಜ್​ಕುಮಾರ್​-ವಿಷ್ಣುವರ್ಧನ್​ ಏಕೆ ಒಟ್ಟಾಗಿ ನಟಿಸಲಿಲ್ಲ? ಕಾರಣ ನೀಡಿದ ಹಿರಿಯ ನಟ
Image
‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ಉಪೇಂದ್ರ ಅವರಿಗೆ ಅನೇಕ ಸೆಲೆಬ್ರಿಟಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟನ ಜತೆ ಇರುವ ಫೋಟೋ ಪೋಸ್ಟ್​ ಮಾಡಿ ಅಭಿಮಾನಿಗಳು ಉಪ್ಪಿಗೆ ಹ್ಯಾಪಿ ಬರ್ತ್​ಡೇ ಎನ್ನುತ್ತಿದ್ದಾರೆ. ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಕಾರಣದಿಂದಲೂ ಉಪೇಂದ್ರ ಅವರಿಗೆ ಬರ್ತ್​ಡೇ ವಿಶೇಷ ಎನಿಸಿದೆ.

ಟೀಸರ್ ಗಿಫ್ಟ್:

ಸೆಲೆಬ್ರಿಟಿಗಳ ಬರ್ತ್​ಡೇ ಸಂದರ್ಭದಲ್ಲಿ ಸಿನಿಮಾ ತಂಡದ ಕಡೆಯಿಂದ ಫ್ಯಾನ್ಸ್​​ಗೆ ಗಿಫ್ಟ್ ಸಿಗುತ್ತದೆ. ಅದೇ ರೀತಿ, ‘ಕಬ್ಜ’ ತಂಡದವರು ಟೀಸರ್ ರಿಲೀಸ್ ಮಾಡಿದ್ದಾರೆ. ಈ ಟೀಸರ್ ನೋಡಿದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದು, ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಕಾರಣದಿಂದಲೂ ಫ್ಯಾನ್ಸ್​ಗೆ ಉಪ್ಪಿ ಬರ್ತ್​ಡೇ ವಿಶೇಷ ಎನಿಸಿದೆ. ಆರ್​.ಚಂದ್ರು ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಕಾದಿದೆ ಮತ್ತೊಂದು ಗಿಫ್ಟ್?

‘ಯುಐ’ ಚಿತ್ರದಲ್ಲಿ ಉಪೇಂದ್ರ ಅವರು ನಟಿಸುವುದರ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಈ ಮೂಲಕ ಹಲವು ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಸಿನಿಮಾ ತಂಡದ ಕಡೆಯಿಂದ ಉಪ್ಪಿ ಜನ್ಮದಿನಕ್ಕೆ ವಿಶೇಷ ಉಡುಗೊರೆ ಸಿಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್​ ಅನ್ನು ತಂಡ ಹಂಚಿಕೊಳ್ಳಲಿದೆ ಎನ್ನಲಾಗುತ್ತಿದೆ.

ವಿಷ್ಣುವರ್ಧನ್​ ಅವರನ್ನು ನೆನೆದ ಉಪ್ಪಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್​ ಅವರ ಜನ್ಮದಿನ ಕೂಡ ಹೌದು. ಈ ಕಾರಣಕ್ಕೆ ಉಪೇಂದ್ರ ಅವರು ಟ್ವಿಟರ್​​ನಲ್ಲಿ ವಿಷ್ಣು ಜತೆ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಸಾಹಸ ಸಿಂಹನನ್ನು ಅವರು ನೆನಪಿಸಿಕೊಂಡಿದ್ದಾರೆ.

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ