AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಜತೆ ಮಧ್ಯರಾತ್ರಿ ಬರ್ತ್​​ಡೇ ಆಚರಿಸಿಕೊಂಡ ಉಪೇಂದ್ರ: ಸಾಹಸ ಸಿಂಹನನ್ನು ನೆನೆದ ರಿಯಲ್ ಸ್ಟಾರ್​

ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿವಾಸ ಹೊಂದಿದ್ದಾರೆ. ಉಪ್ಪಿ ನಿವಾಸಕ್ಕೆ ತಡರಾತ್ರಿಯೇ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಟನಿಗೆ ಎಲ್ಲರೂ ಬರ್ತ್​​​ಡೇ ವಿಶ್ ತಿಳಿಸಿದ್ದಾರೆ.

ಅಭಿಮಾನಿಗಳ ಜತೆ ಮಧ್ಯರಾತ್ರಿ ಬರ್ತ್​​ಡೇ ಆಚರಿಸಿಕೊಂಡ ಉಪೇಂದ್ರ: ಸಾಹಸ ಸಿಂಹನನ್ನು ನೆನೆದ ರಿಯಲ್ ಸ್ಟಾರ್​
ಉಪೇಂದ್ರ
TV9 Web
| Edited By: |

Updated on: Sep 18, 2022 | 7:08 AM

Share

ನಟ ಉಪೇಂದ್ರ (Upendra) ಅವರಿಗೆ ಇಂದು (ಸೆಪ್ಟೆಂಬರ್ 18) ಬರ್ತ್​ಡೇ ಸಂಭ್ರಮ. ಅವರು ತಮ್ಮ 54ನೇ ಜನ್ಮದಿನವನ್ನು ಅಭಿಮಾನಿಗಳ ಜತೆ ಆಚರಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷ ಕೊವಿಡ್ ಕಾರಣದಿಂದ ಸರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಈಗ ಕೊವಿಡ್ ಕಡಿಮೆಯಾಗಿದೆ. ಈ ಕಾರಣದಿಂದ ಉಪೇಂದ್ರ (Upendra Birthday) ಅವರು ಅಭಿಮಾನಿಗಳ ಜತೆಗೂಡಿ ವಿಶೇಷ ದಿನವನ್ನು ಆಚರಿಸಿಕೊಂಡಿದ್ದಾರೆ. ಉಪೇಂದ್ರ ಅವರಿಗೆ ಅನೇಕ ಸೆಲೆಬ್ರಿಟಿಗಳು ಬರ್ತ್​ಡೇ ವಿಶ್ ಮಾಡುತ್ತಿದ್ದಾರೆ.

ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿವಾಸ ಹೊಂದಿದ್ದಾರೆ. ಉಪ್ಪಿ ನಿವಾಸಕ್ಕೆ ತಡರಾತ್ರಿಯೇ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಟನಿಗೆ ಎಲ್ಲರೂ ಬರ್ತ್​​​ಡೇ ವಿಶ್ ತಿಳಿಸಿದ್ದಾರೆ. ಅಭಿಮಾನಿಗಳಿಗೆ ಉಪೇಂದ್ರ ಸಿಹಿ ಹಂಚಿದ್ದಾರೆ. ಈ ವೇಳೆ ಫ್ಯಾನ್ಸ್ ಸಂಭ್ರಮ ಮುಗಿಲುಮುಟ್ಟಿತ್ತು.

ಇದನ್ನೂ ಓದಿ
Image
Upendra: ‘ಈ ಕೆಲಸ ಮಾಡಿ, ನಮ್ಮ ಮನೆಗೆ ಬನ್ನಿ’; ಫ್ಯಾನ್ಸ್​ಗೆ ಆಹ್ವಾನ ನೀಡಿದ ಉಪೇಂದ್ರ: ಏನಿದು ಟಾಸ್ಕ್​?
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ
Image
‘ಗಂಧದ ಗುಡಿ’ ಬಳಿಕ ರಾಜ್​ಕುಮಾರ್​-ವಿಷ್ಣುವರ್ಧನ್​ ಏಕೆ ಒಟ್ಟಾಗಿ ನಟಿಸಲಿಲ್ಲ? ಕಾರಣ ನೀಡಿದ ಹಿರಿಯ ನಟ
Image
‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ಉಪೇಂದ್ರ ಅವರಿಗೆ ಅನೇಕ ಸೆಲೆಬ್ರಿಟಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟನ ಜತೆ ಇರುವ ಫೋಟೋ ಪೋಸ್ಟ್​ ಮಾಡಿ ಅಭಿಮಾನಿಗಳು ಉಪ್ಪಿಗೆ ಹ್ಯಾಪಿ ಬರ್ತ್​ಡೇ ಎನ್ನುತ್ತಿದ್ದಾರೆ. ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಕಾರಣದಿಂದಲೂ ಉಪೇಂದ್ರ ಅವರಿಗೆ ಬರ್ತ್​ಡೇ ವಿಶೇಷ ಎನಿಸಿದೆ.

ಟೀಸರ್ ಗಿಫ್ಟ್:

ಸೆಲೆಬ್ರಿಟಿಗಳ ಬರ್ತ್​ಡೇ ಸಂದರ್ಭದಲ್ಲಿ ಸಿನಿಮಾ ತಂಡದ ಕಡೆಯಿಂದ ಫ್ಯಾನ್ಸ್​​ಗೆ ಗಿಫ್ಟ್ ಸಿಗುತ್ತದೆ. ಅದೇ ರೀತಿ, ‘ಕಬ್ಜ’ ತಂಡದವರು ಟೀಸರ್ ರಿಲೀಸ್ ಮಾಡಿದ್ದಾರೆ. ಈ ಟೀಸರ್ ನೋಡಿದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದು, ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಕಾರಣದಿಂದಲೂ ಫ್ಯಾನ್ಸ್​ಗೆ ಉಪ್ಪಿ ಬರ್ತ್​ಡೇ ವಿಶೇಷ ಎನಿಸಿದೆ. ಆರ್​.ಚಂದ್ರು ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಕಾದಿದೆ ಮತ್ತೊಂದು ಗಿಫ್ಟ್?

‘ಯುಐ’ ಚಿತ್ರದಲ್ಲಿ ಉಪೇಂದ್ರ ಅವರು ನಟಿಸುವುದರ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಈ ಮೂಲಕ ಹಲವು ವರ್ಷಗಳ ಬಳಿಕ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಸಿನಿಮಾ ತಂಡದ ಕಡೆಯಿಂದ ಉಪ್ಪಿ ಜನ್ಮದಿನಕ್ಕೆ ವಿಶೇಷ ಉಡುಗೊರೆ ಸಿಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್​ ಅನ್ನು ತಂಡ ಹಂಚಿಕೊಳ್ಳಲಿದೆ ಎನ್ನಲಾಗುತ್ತಿದೆ.

ವಿಷ್ಣುವರ್ಧನ್​ ಅವರನ್ನು ನೆನೆದ ಉಪ್ಪಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್​ ಅವರ ಜನ್ಮದಿನ ಕೂಡ ಹೌದು. ಈ ಕಾರಣಕ್ಕೆ ಉಪೇಂದ್ರ ಅವರು ಟ್ವಿಟರ್​​ನಲ್ಲಿ ವಿಷ್ಣು ಜತೆ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಸಾಹಸ ಸಿಂಹನನ್ನು ಅವರು ನೆನಪಿಸಿಕೊಂಡಿದ್ದಾರೆ.

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ