AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್​ರನ್ನು ಮಹಾಭಾರತದ ಪಾತ್ರಕ್ಕೆ ಹೋಲಿಸಿದ ಉಪೇಂದ್ರ

Upendra: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಡಿಸೆಂಬರ್ 20 ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರಚಾರದಲ್ಲಿರುವ ಉಪ್ಪಿಗೆ ಹೋದಲ್ಲೆಲ್ಲ ಅವರು ರಜನೀಕಾಂತ್ ಜೊತೆ ನಟಿಸುತ್ತಿರುವ ‘ಕೂಲಿ’ ಸಿನಿಮಾದ ಬಗ್ಗೆ ಪ್ರಶ್ನೆಗಳು ಎದುರಾಗುತ್ತಿವೆ. ಸಂದರ್ಶನವೊಂದರಲ್ಲಿ ಉಪೇಂದ್ರ ಅವರು ರಜನೀಕಾಂತ್ ಅವರನ್ನು ದ್ರೋಣಾಚಾರ್ಯಗೆ ಹೋಲಿಸಿದ್ದಾರೆ.

ರಜನೀಕಾಂತ್​ರನ್ನು ಮಹಾಭಾರತದ ಪಾತ್ರಕ್ಕೆ ಹೋಲಿಸಿದ ಉಪೇಂದ್ರ
Upendra Rajinikanth
ಮಂಜುನಾಥ ಸಿ.
|

Updated on: Dec 19, 2024 | 5:29 PM

Share

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ನಾಳೆ (ಡಿಸೆಂಬರ್ 20) ತೆರೆಗೆ ಬರಲಿದೆ. ಸಿನಿಮಾದ ಪ್ರಚಾರವನ್ನು ಬಲು ಜೋರಾಗಿ ಮಾಡುತ್ತಿದ್ದಾರೆ ಉಪೇಂದ್ರ. ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿಯೂ ‘ಯುಐ’ ಸಿನಿಮಾ ತೆರೆಗೆ ಬರುತ್ತಿದ್ದು, ಬೇರೆ ಬೇರೆ ರಾಜ್ಯಗಳಿಗೆ ಹೋಗಿ ಉಪ್ಪಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಉಪ್ಪಿ ಹೋದಲ್ಲೆಲ್ಲ ‘ಯುಐ’ ಸಿನಿಮಾದ ಜೊತೆಗೆ ಅವರು ರಜನೀಕಾಂತ್ ಜೊತೆ ನಟಿಸುತ್ತಿರುವ ‘ಕೂಲಿ’ ಸಿನಿಮಾದ ಬಗ್ಗೆಯೂ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಇದೀಗ ಖ್ಯಾತ ಬಾಲಿವುಡ್ ಮ್ಯಾಗಜೀನ್ ಪಿಂಕ್​ವಿಲ್ಲಾಗೆ ಉಪೇಂದ್ರ ನೀಡಿರುವ ಸಂದರ್ಶನದಲ್ಲಿ ರಜನೀಕಾಂತ್ ಬಗ್ಗೆ ಉಪ್ಪಿ ಮಾತನಾಡಿದ್ದಾರೆ. ‘ರಜನೀಕಾಂತ್ ಬಗ್ಗೆ ಮಾತನಾಡಲು ಕಡಿಮೆ ಸಮಯ ಸಾಕಾಗುವುದಿಲ್ಲ. ಅದಕ್ಕಾಗಿ ಪ್ರತ್ಯೇಕ ಸಂದರ್ಶನವನ್ನೇ ಮಾಡಬೇಕು. ಆದರೆ ಅವರ ಬಗ್ಗೆ ಕಿರಿದಾಗಿ ಹೇಳಬೇಕೆಂದರೆ ಅವರಿಗಿರುವ ಜ್ಞಾನ, ಅವರ ಮಾತುಗಳು ಇನ್ನೂ ಸಾಕಷ್ಟು ವಿಷಯಗಳು ಅವರನ್ನು ನನ್ನ ಪಾಲಿನ ದ್ರೋಣಾಚಾರ್ಯರನ್ನಾಗಿ ಮಾಡಿದೆ’ ಎಂದಿದ್ದಾರೆ.

ಇದನ್ನೂ ಓದಿ:ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅನ್ನೂ ಹಿಂದಿಕ್ಕಿದ ಅಲ್ಲು ಅರ್ಜುನ್

ರಜನೀಕಾಂತ್ ಅವರನ್ನು ದ್ರೋಣಾಚಾರ್ಯರಿಗೆ ಹೋಲಿಸುವ ಮೂಲಕ ಉಪೇಂದ್ರ ಅವರು ರಜನೀಕಾಂತ್ ಅವರಿಗೆ ತಮ್ಮ ಗುರುವಿನ ಸ್ಥಾನ ನೀಡಿದ್ದಾರೆ. ಉಪೇಂದ್ರ ಅವರು ಈ ಹಿಂದೆ ಕೆಲವು ಬಾರಿ ರಜನೀಕಾಂತ್ ಅನ್ನು ಭೇಟಿಯಾಗಿದ್ದಾರೆ. ಅವರ ಬಗ್ಗೆ ಗೌರವದ ಮಾತುಗಳನ್ನಾಡಿದ್ದಾರೆ. ಇದೀಗ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಕೂಲಿ’ ಸಿನಿಮಾವನ್ನು ತಮಿಳಿನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನ ಮಾಡುತ್ತಿದ್ದಾರೆ.

ಉಪೇಂದ್ರ ಬಹಳ ವರ್ಷಗಳ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ಉಪೇಂದ್ರ ನಿರ್ದೇಶನದ ‘ಯುಐ’ ಸಿನಿಮಾ ನಾಳೆ (ಡಿಸೆಂಬರ್ 20) ಬಿಡುಗಡೆ ಆಗುತ್ತಿದೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ತೊಡಗಿಸಿದ್ದಾರೆ. ಸಿನಿಮಾಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಿನಿಮಾದ ಟ್ರೈಲರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು