AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ; ನಿರ್ದೇಶನದ ಹೊಸ ಚಿತ್ರದಲ್ಲಿ ಹೇಗಿದೆ ನೋಡಿ ಉಪ್ಪಿ ಫಸ್ಟ್​ ಲುಕ್​

ಉಪೇಂದ್ರ ನಿರ್ದೇಶನದ ಹೊಸ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದಾರೆ. ಅವರ ಲುಕ್​ ಗಮನ ಸೆಳೆಯುತ್ತಿದೆ.

ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ; ನಿರ್ದೇಶನದ ಹೊಸ ಚಿತ್ರದಲ್ಲಿ ಹೇಗಿದೆ ನೋಡಿ ಉಪ್ಪಿ ಫಸ್ಟ್​ ಲುಕ್​
ಉಪೇಂದ್ರ ಹೊಸ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Mar 11, 2022 | 2:56 PM

Share

ಉಪೇಂದ್ರ (Upendra) ಅಭಿನಯ ಮತ್ತು ನಿರ್ದೇಶನದ ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ನಿರೀಕ್ಷೆಯಂತೆಯೇ ಉಪೇಂದ್ರ ಅವರು ಟೈಟಲ್​ ಅನಾವರಣ ಮಾಡಿದ್ದಾರೆ. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಇನ್ನೂ ಬಗೆಹರಿದಿಲ್ಲ. ಸದ್ಯಕ್ಕೆ ಈ ಪೋಸ್ಟರ್​ (Upendra New Movie First Look Poster) ಗಮನ ಸೆಳೆಯುತ್ತಿದೆ. ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದಾರೆ. ಅವರ ಲುಕ್​ ಕೂಡ ಗಮನ ಸೆಳೆಯುತ್ತಿದೆ. ಉಪೇಂದ್ರ ಅವರ ನಟನೆಗಿಂತಲೂ ಅವರ ನಿರ್ದೇಶನಕ್ಕೆ (Upendra direction) ಅಭಿಮಾನಿಗಳು ಜಾಸ್ತಿ ಎಂದರೆ ತಪ್ಪಿಲ್ಲ. ‘ಉಪ್ಪಿ 2’ ಸಿನಿಮಾ ಬಳಿಕ ಅವರು ನಿರ್ದೇಶನದಿಂದ ಕೊಂಚ ದೂರ ಉಳಿದುಕೊಂಡಿದ್ದರು. ಹಾಗಾಗಿ ಅವರು ಆದಷ್ಟು ಬೇಗ ಡೈರೆಕ್ಟರ್​ ಕ್ಯಾಪ್​ ಧರಿಸಲಿ ಎಂಬುದು ಎಲ್ಲ ಅಭಿಮಾನಿಗಳ ಆಸೆ ಆಗಿತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಹೊಸ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿ ನಟಿಸುತ್ತಿದ್ದಾರೆ. ಹೊಸ ಪೋಸ್ಟರ್​ ಮೂಲಕ ಹಲವು ವಿಚಾರಗಳನ್ನು ಬಹಿರಂಗಪಡಿಸಲಾಗಿದೆ.

ಈ ಫಸ್ಟ್​ ಲುಕ್​ ಪೋಸ್ಟರ್​ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆಯುತ್ತಿವೆ. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಪೋಸ್ಟರ್​ನಲ್ಲಿ ಉಪೇಂದ್ರ ಅವರ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸಗೊಂಡಿರುವ ಈ ಪೋಸ್ಟರ್​ ಸದ್ಯ ವೈರಲ್​ ಆಗುತ್ತಿದೆ. ಹಿನ್ನೆಲೆಯಲ್ಲಿ ಉಪಗ್ರಹ ಕಾಣಿಸಿದೆ. ಈ ಎಲ್ಲ ಕಾರಣದಿಂದ ಸಿನಿಮಾ ಬಗ್ಗೆ ಕೌತುಕ ಹೆಚ್ಚಿದೆ. ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್​’ ಮತ್ತು ‘ವೀನಸ್​ ಎಂಟರ್​ಟೇನರ್ಸ್​’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್​ ಮತ್ತು ಶ್ರೀಕಾಂತ್​ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.

ಇದನ್ನೂ ಓದಿ:

ಏಪ್ರಿಲ್​ನಲ್ಲಿ ರಿಲೀಸ್​ ಆಗುತ್ತಿದೆ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಸಿನಿಮಾ

‘ಅಲ್ಲಿ ಬೇರೆಯದೇ ಹೋಮ್​ ಮಿನಿಸ್ಟರ್​ ಇರ್ತಾರೆ, ಅದೇ ಇದರ ಸಸ್ಪೆನ್ಸ್​’: ನಟ ಉಪೇಂದ್ರ

Published On - 1:22 pm, Fri, 11 March 22

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!