AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಿರ್ದೇಶನದ ಚಿತ್ರದ ಮುಹೂರ್ತಕ್ಕೆ ಫಿಕ್ಸ್ ಆಯ್ತು ದಿನಾಂಕ; ಇಲ್ಲಿದೆ ವಿವರ

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ.

ಉಪೇಂದ್ರ ನಿರ್ದೇಶನದ ಚಿತ್ರದ ಮುಹೂರ್ತಕ್ಕೆ ಫಿಕ್ಸ್ ಆಯ್ತು ದಿನಾಂಕ; ಇಲ್ಲಿದೆ ವಿವರ
ಉಪೇಂದ್ರ
TV9 Web
| Edited By: |

Updated on: May 23, 2022 | 5:40 PM

Share

ಡೈರೆಕ್ಷನ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ ಉಪೇಂದ್ರ ಅವರು (Upendra) ಇತ್ತೀಚಿನ ವರ್ಷಗಳಲ್ಲಿ ನಟನೆಯಲ್ಲಿ ಬ್ಯುಸಿ ಆದರು. ಈಗ ಅವರು ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಅವರು ಅಭಿನಯಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾದ ಪೋಸ್ಟರ್ ಈ ಮೊದಲು ರಿಲೀಸ್ ಆಗಿತ್ತು. ಈಗ ಸಿನಿಮಾದ ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 3ರಂದು ಸಿನಿಮಾದ ಮುಹೂರ್ತ ನೆರವೇರಲಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಈ ಟೈಟಲ್​ಗೆ ಏನೆಂದು ಕರೆಯಬೇಕು ಎಂಬುದು ಫ್ಯಾನ್ಸ್​ಗೂ ಕೂಡ ಗೊತ್ತಾಗಿಲ್ಲ. ಮುಹೂರ್ತದ ವೇಳೆ ಉಪೇಂದ್ರ ಇದಕ್ಕೆ ಸ್ಪಷ್ಟನೆ ನೀಡಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ.

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಇನ್ನೂ ಬಗೆಹರಿದಿಲ್ಲ. ಮುಹೂರ್ತದ ವೇಳೆ ಉಪೇಂದ್ರ ಇದಕ್ಕೆ ಸ್ಪಷ್ಟನೆ ನೀಡಬಹುದು.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು
Image
ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ; ನಿರ್ದೇಶನದ ಹೊಸ ಚಿತ್ರದಲ್ಲಿ ಹೇಗಿದೆ ನೋಡಿ ಉಪ್ಪಿ ಫಸ್ಟ್​ ಲುಕ್​

ಫಸ್ಟ್ ಲುಕ್​ನಲ್ಲಿ ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದರು. ಅವರ ಲುಕ್​ ಕೂಡ ಗಮನ ಸೆಳೆದಿತ್ತು. ಉಪೇಂದ್ರ ಅವರ ನಟನೆಗಿಂತಲೂ ಅವರ ನಿರ್ದೇಶನಕ್ಕೆ ಅಭಿಮಾನಿಗಳು ಜಾಸ್ತಿ ಎಂದರೆ ತಪ್ಪಿಲ್ಲ. ‘ಉಪ್ಪಿ 2’ ಸಿನಿಮಾ ಬಳಿಕ ಅವರು ನಿರ್ದೇಶನದಿಂದ ಕೊಂಚ ದೂರ ಉಳಿದುಕೊಂಡಿದ್ದರು. ಹಾಗಾಗಿ ಅವರು ಆದಷ್ಟು ಬೇಗ ಡೈರೆಕ್ಟರ್​ ಕ್ಯಾಪ್​ ಧರಿಸಲಿ ಎಂಬುದು ಎಲ್ಲ ಅಭಿಮಾನಿಗಳ ಆಸೆ ಆಗಿತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಹೊಸ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿ ನಟಿಸುತ್ತಿದ್ದಾರೆ.

ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್​’ ಮತ್ತು ‘ವೀನಸ್​ ಎಂಟರ್​ಟೇನರ್ಸ್​’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್​ ಮತ್ತು ಶ್ರೀಕಾಂತ್​ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.

ಚಿತ್ರ ವಿಚಿತ್ರವಾಗಿ ಬರೆದುಕೊಂಡಿದ್ದ ಉಪೇಂದ್ರ

ಈ ಮೊದಲು ರಿಲೀಸ್ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆದಿತ್ತು. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್