AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಿರ್ದೇಶನದ ಚಿತ್ರದ ಮುಹೂರ್ತಕ್ಕೆ ಫಿಕ್ಸ್ ಆಯ್ತು ದಿನಾಂಕ; ಇಲ್ಲಿದೆ ವಿವರ

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ.

ಉಪೇಂದ್ರ ನಿರ್ದೇಶನದ ಚಿತ್ರದ ಮುಹೂರ್ತಕ್ಕೆ ಫಿಕ್ಸ್ ಆಯ್ತು ದಿನಾಂಕ; ಇಲ್ಲಿದೆ ವಿವರ
ಉಪೇಂದ್ರ
TV9 Web
| Edited By: |

Updated on: May 23, 2022 | 5:40 PM

Share

ಡೈರೆಕ್ಷನ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ ಉಪೇಂದ್ರ ಅವರು (Upendra) ಇತ್ತೀಚಿನ ವರ್ಷಗಳಲ್ಲಿ ನಟನೆಯಲ್ಲಿ ಬ್ಯುಸಿ ಆದರು. ಈಗ ಅವರು ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಅವರು ಅಭಿನಯಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾದ ಪೋಸ್ಟರ್ ಈ ಮೊದಲು ರಿಲೀಸ್ ಆಗಿತ್ತು. ಈಗ ಸಿನಿಮಾದ ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 3ರಂದು ಸಿನಿಮಾದ ಮುಹೂರ್ತ ನೆರವೇರಲಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಈ ಟೈಟಲ್​ಗೆ ಏನೆಂದು ಕರೆಯಬೇಕು ಎಂಬುದು ಫ್ಯಾನ್ಸ್​ಗೂ ಕೂಡ ಗೊತ್ತಾಗಿಲ್ಲ. ಮುಹೂರ್ತದ ವೇಳೆ ಉಪೇಂದ್ರ ಇದಕ್ಕೆ ಸ್ಪಷ್ಟನೆ ನೀಡಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ.

ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಇನ್ನೂ ಬಗೆಹರಿದಿಲ್ಲ. ಮುಹೂರ್ತದ ವೇಳೆ ಉಪೇಂದ್ರ ಇದಕ್ಕೆ ಸ್ಪಷ್ಟನೆ ನೀಡಬಹುದು.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು
Image
ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ; ನಿರ್ದೇಶನದ ಹೊಸ ಚಿತ್ರದಲ್ಲಿ ಹೇಗಿದೆ ನೋಡಿ ಉಪ್ಪಿ ಫಸ್ಟ್​ ಲುಕ್​

ಫಸ್ಟ್ ಲುಕ್​ನಲ್ಲಿ ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದರು. ಅವರ ಲುಕ್​ ಕೂಡ ಗಮನ ಸೆಳೆದಿತ್ತು. ಉಪೇಂದ್ರ ಅವರ ನಟನೆಗಿಂತಲೂ ಅವರ ನಿರ್ದೇಶನಕ್ಕೆ ಅಭಿಮಾನಿಗಳು ಜಾಸ್ತಿ ಎಂದರೆ ತಪ್ಪಿಲ್ಲ. ‘ಉಪ್ಪಿ 2’ ಸಿನಿಮಾ ಬಳಿಕ ಅವರು ನಿರ್ದೇಶನದಿಂದ ಕೊಂಚ ದೂರ ಉಳಿದುಕೊಂಡಿದ್ದರು. ಹಾಗಾಗಿ ಅವರು ಆದಷ್ಟು ಬೇಗ ಡೈರೆಕ್ಟರ್​ ಕ್ಯಾಪ್​ ಧರಿಸಲಿ ಎಂಬುದು ಎಲ್ಲ ಅಭಿಮಾನಿಗಳ ಆಸೆ ಆಗಿತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಹೊಸ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿ ನಟಿಸುತ್ತಿದ್ದಾರೆ.

ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್​’ ಮತ್ತು ‘ವೀನಸ್​ ಎಂಟರ್​ಟೇನರ್ಸ್​’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್​ ಮತ್ತು ಶ್ರೀಕಾಂತ್​ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.

ಚಿತ್ರ ವಿಚಿತ್ರವಾಗಿ ಬರೆದುಕೊಂಡಿದ್ದ ಉಪೇಂದ್ರ

ಈ ಮೊದಲು ರಿಲೀಸ್ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆದಿತ್ತು. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ