AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಉಪೇಂದ್ರ ಡಿಸ್ಚಾರ್ಜ್; ರಿಯಲ್ ಸ್ಟಾರ್​ಗೆ ಎದುರಾದ ಆರೋಗ್ಯ ಸಮಸ್ಯೆ ಏನು?

ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಆದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಕೆಲವು ಗಂಟೆಗಳ ಕಾಲ ಚಿಕಿತ್ಸೆ ಪಡೆದ ಅವರು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಉಪೇಂದ್ರ ಈಗ ಚೇತರಿಸಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಉಪೇಂದ್ರ ಡಿಸ್ಚಾರ್ಜ್; ರಿಯಲ್ ಸ್ಟಾರ್​ಗೆ ಎದುರಾದ ಆರೋಗ್ಯ ಸಮಸ್ಯೆ ಏನು?
Upendra
ಮದನ್​ ಕುಮಾರ್​
|

Updated on: May 05, 2025 | 6:17 PM

Share

ನಟ, ನಿರ್ದೇಶಕ ಉಪೇಂದ್ರ (Upendra) ಅವರ ಅಭಿಮಾನಿಗಳಿಗೆ ಸೋಮವಾರ (ಮೇ 5) ಒಂದು ಕ್ಷಣ ಆತಂಕ ಎದುರಾಯಿತು. ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ಮಾಹಿತಿ ಕೇಳಿಬಂತು. ಕೂಡಲೇ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲು (Upendra Hospitalized) ಮಾಡಲಾಯಿತು. ಆದರೆ ಸ್ವಲ್ಪ ಹೊತ್ತು ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹಾಗಾಗಿ ಅವರನ್ನು ಕೆಲವೇ ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡಿ, ಮನೆಗೆ ಕಳಿಸಲಾಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಅಷ್ಟಕ್ಕೂ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಎದುರಾದ ಆರೋಗ್ಯ ಸಮಸ್ಯೆ ಏನು? ಅತಿಯಾದ ಆ್ಯಸಿಡಿಟಿ! ಹೌದು, ಓವರ್ ಆ್ಯಸಿಡಿಟಿ ಉಂಟಾಗಿದ್ದರಿಂದ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಂತ ಅವರಿಗೆ ಈ ರೀತಿ ಆಗಿದ್ದು ಇದೇ ಮೊದಲೇನೂ ಅಲ್ಲ. ಈ ಮೊದಲು ‘ಯುಐ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕೂಡ ಉಪೇಂದ್ರ ಅವರು ಇದೇ ಸಮಸ್ಯೆ ಎದುರಿಸಿದ್ದರು.

‘ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಉಪೇಂದ್ರ ಅವರು ಮನೆಗೆ ಮರಳಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದರಿಂದ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ. ಉಪೇಂದ್ರ ಅವರಿಗೆ ಈಗ 56 ವರ್ಷ ವಯಸ್ಸು. ಚಿತ್ರರಂಗದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Image
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
Image
ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ
Image
ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

ನಟನಾಗಿ, ನಿರ್ದೇಶಕನಾಗಿ, ಗಾಯಕನಾಗಿ ಕೂಡ ಉಪೇಂದ್ರ ಅವರಿಗೆ ಬೇಡಿಕೆ ಇದೆ. ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾದಲ್ಲಿ ಉಪೇಂದ್ರ ಅವರು ನಟಿಸಿದ್ದಾರೆ. ಆಗಸ್ಟ್ 15ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ಅದರ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ತೊಡಗಿಕೊಂಡಿದೆ.

ಇದನ್ನೂ ಓದಿ: ಊಟಿಯಲ್ಲಿ ದೆವ್ವದ ಅನುಭವ ಆಗಿದೆ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್

ಇನ್ನು, ಉಪೇಂದ್ರ ಅವರು ಪರಭಾಷೆಯಲ್ಲಿ ಕೂಡ ಫೇಮಸ್ ಆಗಿದ್​ದಾರೆ. ತೆಲುಗು ಚಿತ್ರರಂಗದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ತಮಿಳಿನಲ್ಲಿ ರಜನಿಕಾಂತ್ ಅಭಿನಯದ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಅವರು ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ