AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್

ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್
ಶಂಕರ್ ನಾಗ್-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Nov 15, 2025 | 10:41 AM

Share

ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ. ಅಪಘಾತದಲ್ಲಿ ಅವರು ನಿಧನ ಹೊಂದದೆ ಇದ್ದಿದ್ದರೆ ಕನ್ನಡ ಚಿತ್ರಂಗಕ್ಕೆ ಅದೆಷ್ಟು ಅದ್ಭುತ ಸಿನಿಮಾಗಳು ಸಿಗುತ್ತಿದ್ದವೋ. ಆದರೆ, ವಿಧಿ ಅದಕ್ಕೆ ಅವಕಾಶ ಕೊಡಲೇ ಇಲ್ಲ. ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿ, ತರಾತುರಿಯಲ್ಲೇ ಅವರು ಹೋಗಿಬಿಟ್ಟರು. ಶಂಕರ್ ನಾಗ್ ಅವರ ಬಯೋಪಿಕ್ ಬಗ್ಗೆ ಉಪೇಂದ್ರ (Upendra) ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿದೆ.

ಬಯೋಪಿಕ್ ಮಾಡೋದು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ. ಸಾಮಾನ್ಯ ಸಿನಿಮಾಗಳಲ್ಲಿ ಕಥೆಯನ್ನು ನಿರ್ದೇಶಕರು ಮನಸ್ಸಿಗೆ ತೋಚಿದಂತೆ ಮಾಡಬಹುದು. ಈ ಬಗ್ಗೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಆದರೆ, ಬಯೋಪಿಕ್ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ. ಏನು ಇದೇ ಅದನ್ನೇ ತೋರಿಸಬೇಕಾಗುತ್ತದೆ. ಈ ಚಾಲೆಂಜ್​ನ ಸ್ವೀಕರಿಸಲು ಉಪೇಂದ್ರ ಸಿದ್ಧರಿದಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ.

ನವೆಂಬರ್ 9 ಶಂಕರ್ ನಾಗ್ ಜನ್ಮದಿನ. ಈ ಸಂದರ್ಭದಲ್ಲಿ ಉಪೇಂದ್ರ ಅವರು ಮಾತನಾಡಿದ್ದರು. ‘ಹೋಮ್ ಮಿನಿಸ್ಟರ್ ಬಳಿ ಸಿನಿಮಾ ಬಗ್ಗೆ ಚರ್ಚೆ ಮಾಡಿದರೆ ಅವರು, ಶಂಕರ್​ ನಾಗ್ ಬಯೋಪಿಕ್ ಮಾಡಿ ಎನ್ನುತ್ತಾರೆ. ಅದಕ್ಕೆ ಅನಂತ್ ನಾಗ್, ಗಾಯತ್ರಿ ಮೊದಲಾದವರ ಒಪ್ಪಿಗೆ ಪಡೆಯಬೇಕು. ಸ್ಕ್ರಿಪ್ಟ್ ರೆಡಿ ಮಾಡಬೇಕು. ಮೇರುಪರ್ವತಕ್ಕೆ ಎಲ್ಲಿಯೂ ಲೋಪ ಆಗದಂತೆ ಬಯೋಪಿಕ್ ಮಾಡಬೇಕು. ಕಮರ್ಷಿಯಲ್ ಆಗಿ ಕೂಡ ಇರಬೇಕು. ಅಭಿಮಾನಿಗಳಿಗೆ ಇಷ್ಟ ಆಗುವಂತೆ ಸಿನಿಮಾ ಮಾಡಬೇಕು’ ಎಂದಿದ್ದಾರೆ ಉಪೇಂದ್ರ.

ಇದನ್ನೂ ಓದಿ: ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ

ಉಪೇಂದ್ರ ಅವರು ‘ಯುಐ’ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕಳೆದ ವರ್ಷ ಡಿಸೆಂಬರ್​ನಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಅವರು ನಟನೆಯಲ್ಲಿ ಬ್ಯುಸಿ ಇದ್ದಾರೆ. ‘ಕೂಲಿ’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದರು. ಇದಾದ ಬಳಿಕ ಅವರು ತಮ್ಮ ನಿರ್ದೇಶನದ ಯಾವುದೇ ಸಿನಿಮಾ ಘೋಷಣೆ ಮಾಡಿಲ್ಲ. ಅವರು ‘45’ ಸಿನಿಮಾದ ಭಾಗ ಕೂಡ ಆಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ