Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ

‘ಸನ್​ ಪಿಕ್ಚರ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಅವರು ರಜನಿಕಾಂತ್​ ಜೊತೆ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ ಲುಕ್​ ಹೇಗಿರಲಿದೆ ಎಂಬುದು ಈಗ ರಿವೀಲ್​ ಆಗಿದೆ. ‘ಕೂಲಿ’ ಚಿತ್ರತಂಡದವರು ಉಪೇಂದ್ರ ಅವರ ಪಾತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್​ ಹಂಚಿಕೊಂಡು ಉಪೇಂದ್ರ ಫ್ಯಾನ್ಸ್​ ಸಂಭ್ರಮಿಸಿದ್ದಾರೆ.

ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ
ರಜನಿಕಾಂತ್​, ಉಪೇಂದ್ರ
Follow us
ಮದನ್​ ಕುಮಾರ್​
|

Updated on: Sep 01, 2024 | 7:17 PM

‘ಸೂಪರ್​ ಸ್ಟಾರ್​’ ರಜನಿಕಾಂತ್​ ಜೊತೆ ನಟಿಸಬೇಕು ಎಂಬ ಆಸೆ ಬಹುತೇಕ ಎಲ್ಲ ಕಲಾವಿದರಿಗೆ ಇರುತ್ತದೆ. ಉಪೇಂದ್ರ ಅವರಿಗೆ ಆ ಆಸೆ ಈಡೇರುತ್ತಿದೆ. ಬಹುನಿರೀಕ್ಷಿತ ‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸಲು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಬ್ಲ್ಯಾಕ್​ ಆ್ಯಂಡ್​ ವೈಟ್​ ಥೀಮ್​ನಲ್ಲಿ ಮೂಡಿಬಂದ ಈ ಪೋಸ್ಟರ್​ ಕಂಡು ಉಪೇಂದ್ರ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

‘ಕೂಲಿ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ರಜನಿಕಾಂತ್​ ಜೊತೆ ಅನೇಕ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಅಕ್ಕಿನೇನಿ ನಾಗಾರ್ಜುನ, ಶ್ರುತಿ ಹಾಸನ್​, ಸತ್ಯರಾಜ್​, ರಚಿತಾ ರಾಮ್​, ಉಪೇಂದ್ರ ಮುಂತಾದವರು ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಬಾಲಿವುಡ್​ ನಟ ಆಮಿರ್​ ಖಾನ್​ ಕೂಡ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಖಚಿತತೆ ಸಿಗಬೇಕಿದೆ.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಉಪೇಂದ್ರ ಅವರು ‘ಕೂಲಿ’ ಸಿನಿಮಾದಲ್ಲಿ ಕಾಲೇಶ ಎಂಬ ಪಾತ್ರ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಫಸ್ಟ್​ ಲುಕ್​ ಹಂಚಿಕೊಂಡ ಉಪೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಆಶೀರ್ವಾದದಿಂದ ನನ್ನ ಗುರು, ನನ್ನ ಸೂಪರ್ ಸ್ಟಾರ್ ರಜನಿ ಸರ್ ಜೊತೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ನಿರ್ದೇಶಕ ಲೋಕೇಶ್​ ಕನಗರಾಜ್​ ಅವರಿಗೆ ಧನ್ಯವಾದಗಳು’ ಎಂದು ಉಪೇಂದ್ರ ಪೋಸ್ಟ್​ ಮಾಡಿದ್ದಾರೆ. ‘ಸನ್​ ಪಿಕ್ಚರ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಉಪೇಂದ್ರ ಅವರಿಗೆ ಖ್ಯಾತಿ ಇದೆ. ಈಗ ಅವರು ‘ಯುಐ’ ಸಿನಿಮಾದ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಹಲವು ವರ್ಷಗಳ ಬಳಿಕ ಉಪೇಂದ್ರ ಆ್ಯಕ್ಷನ್​-ಕಟ್​ ಹೇಳಿದ ಸಿನಿಮಾ ಎಂಬ ಕಾರಣದಿಂದ ‘ಯುಐ’ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಅಕ್ಟೋಬರ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ