AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ

‘ಸನ್​ ಪಿಕ್ಚರ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕೂಲಿ’ ಸಿನಿಮಾದಲ್ಲಿ ಉಪೇಂದ್ರ ಅವರು ರಜನಿಕಾಂತ್​ ಜೊತೆ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ ಲುಕ್​ ಹೇಗಿರಲಿದೆ ಎಂಬುದು ಈಗ ರಿವೀಲ್​ ಆಗಿದೆ. ‘ಕೂಲಿ’ ಚಿತ್ರತಂಡದವರು ಉಪೇಂದ್ರ ಅವರ ಪಾತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್​ ಹಂಚಿಕೊಂಡು ಉಪೇಂದ್ರ ಫ್ಯಾನ್ಸ್​ ಸಂಭ್ರಮಿಸಿದ್ದಾರೆ.

ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ
ರಜನಿಕಾಂತ್​, ಉಪೇಂದ್ರ
ಮದನ್​ ಕುಮಾರ್​
|

Updated on: Sep 01, 2024 | 7:17 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್​ ಜೊತೆ ನಟಿಸಬೇಕು ಎಂಬ ಆಸೆ ಬಹುತೇಕ ಎಲ್ಲ ಕಲಾವಿದರಿಗೆ ಇರುತ್ತದೆ. ಉಪೇಂದ್ರ ಅವರಿಗೆ ಆ ಆಸೆ ಈಡೇರುತ್ತಿದೆ. ಬಹುನಿರೀಕ್ಷಿತ ‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಉಪೇಂದ್ರ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸಲು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಬ್ಲ್ಯಾಕ್​ ಆ್ಯಂಡ್​ ವೈಟ್​ ಥೀಮ್​ನಲ್ಲಿ ಮೂಡಿಬಂದ ಈ ಪೋಸ್ಟರ್​ ಕಂಡು ಉಪೇಂದ್ರ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

‘ಕೂಲಿ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ರಜನಿಕಾಂತ್​ ಜೊತೆ ಅನೇಕ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಅಕ್ಕಿನೇನಿ ನಾಗಾರ್ಜುನ, ಶ್ರುತಿ ಹಾಸನ್​, ಸತ್ಯರಾಜ್​, ರಚಿತಾ ರಾಮ್​, ಉಪೇಂದ್ರ ಮುಂತಾದವರು ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಬಾಲಿವುಡ್​ ನಟ ಆಮಿರ್​ ಖಾನ್​ ಕೂಡ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಖಚಿತತೆ ಸಿಗಬೇಕಿದೆ.

ಇದನ್ನೂ ಓದಿ: ಅಮಿತಾಭ್​ ಬಚ್ಚನ್​ ಕಾಲಿಗೆ ನಮಸ್ಕರಿಸಲು ಬಂದ ರಜನಿಕಾಂತ್; ಬಿಗ್​ ಬಿ ಪ್ರತಿಕ್ರಿಯೆ ಏನು?

ಉಪೇಂದ್ರ ಅವರು ‘ಕೂಲಿ’ ಸಿನಿಮಾದಲ್ಲಿ ಕಾಲೇಶ ಎಂಬ ಪಾತ್ರ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಫಸ್ಟ್​ ಲುಕ್​ ಹಂಚಿಕೊಂಡ ಉಪೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಆಶೀರ್ವಾದದಿಂದ ನನ್ನ ಗುರು, ನನ್ನ ಸೂಪರ್ ಸ್ಟಾರ್ ರಜನಿ ಸರ್ ಜೊತೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ನಿರ್ದೇಶಕ ಲೋಕೇಶ್​ ಕನಗರಾಜ್​ ಅವರಿಗೆ ಧನ್ಯವಾದಗಳು’ ಎಂದು ಉಪೇಂದ್ರ ಪೋಸ್ಟ್​ ಮಾಡಿದ್ದಾರೆ. ‘ಸನ್​ ಪಿಕ್ಚರ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಉಪೇಂದ್ರ ಅವರಿಗೆ ಖ್ಯಾತಿ ಇದೆ. ಈಗ ಅವರು ‘ಯುಐ’ ಸಿನಿಮಾದ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಹಲವು ವರ್ಷಗಳ ಬಳಿಕ ಉಪೇಂದ್ರ ಆ್ಯಕ್ಷನ್​-ಕಟ್​ ಹೇಳಿದ ಸಿನಿಮಾ ಎಂಬ ಕಾರಣದಿಂದ ‘ಯುಐ’ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ಅಕ್ಟೋಬರ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ