AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಿರ್ದೇಶಕರು ‘ಯುಐ’ ಸಿನಿಮಾಕ್ಕೆ ಕಾಯುತ್ತಿರುವುದು ಏಕೆ? ಉಪ್ಪಿ ಕೊಟ್ಟರು ಉತ್ತರ

Upendra: ಉಪೇಂದ್ರ ನಿರ್ದೇಶನ ಮಾಡಿ, ನಟನೆ ಮಾಡಿರುವ ‘ಯುಐ’ ಸಿನಿಮಾ ಇಂದು (ಡಿಸೆಂಬರ್ 20) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಸಿನಿಮಾ ಬಗ್ಗೆ ರಾಣಾ ದಗ್ಗುಬಾಟಿ ಉಪ್ಪಿಯ ಸಂದರ್ಶನ ಮಾಡಿದ್ದರು. ಈ ವೇಳೆ ಸ್ಟಾರ್ ನಿರ್ದೇಶಕರು ನಿಮ್ಮ ಸಿನಿಮಾ ನೋಡಲು ಕಾಯುತ್ತಿದ್ದಾರೆ ಎಂಬ ರಾಣಾರ ಮಾತಿಗೆ ಉಪ್ಪಿ ಸಖತ್ ಉತ್ತರ ನೀಡಿದ್ದಾರೆ.

ಸ್ಟಾರ್ ನಿರ್ದೇಶಕರು ‘ಯುಐ’ ಸಿನಿಮಾಕ್ಕೆ ಕಾಯುತ್ತಿರುವುದು ಏಕೆ? ಉಪ್ಪಿ ಕೊಟ್ಟರು ಉತ್ತರ
Upendra Rana Daggubati
ಮಂಜುನಾಥ ಸಿ.
|

Updated on: Dec 20, 2024 | 3:05 PM

Share

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಇಂದು (ಡಿಸೆಂಬರ್ 20) ಬಿಡುಗಡೆ ಆಗಿದೆ. ಸಿನಿಮಾದ ಪ್ರಚಾರವನ್ನು ಬಲು ಜೋರಾಗಿ ಮಾಡಿದ್ದರು ಉಪ್ಪಿ. ಪರಭಾಷೆಗಳಿಗೆ ಹೋಗಿ ಅಲ್ಲಿನ ಸ್ಟಾರ್ ನಟರನ್ನು ಭೇಟಿಯಾಗಿ ಅವರಿಂದ ಸಿನಿಮಾದ ಪ್ರಚಾರ ಮಾಡಿಸಿದ್ದರು. ಆಮಿರ್ ಖಾನ್, ನಾಗಾರ್ಜುನ್ ಇನ್ನೂ ಕೆಲವರು ಉಪ್ಪಿಯ ಸಿನಿಮಾದ ಪ್ರಚಾರ ಮಾಡಿದ್ದರು. ತೆಲುಗಿನ ಸ್ಟಾರ್ ನಟ, ನಿರ್ಮಾಪಕ ರಾಣಾ ದಗ್ಗುಬಾಟಿ ಸಹ ಉಪೇಂದ್ರ ಅವರ ಸಿನಿಮಾದ ಪ್ರಚಾರ ಮಾಡಿದ್ದರು. ರಾಣಾ ಅವರು ಉಪ್ಪಿ ಅವರ ಸಂದರ್ಶನ ನಡೆಸಿಕೊಟ್ಟಿದ್ದರು.

ಸಂದರ್ಶನದ ವೇಳೆ ಉಪೇಂದ್ರ ಅವರ ನಿರ್ದೇಶನ ಪ್ರತಿಭೆಯನ್ನು ಕೊಂಡಾಡಿದ ರಾಣಾ ದಗ್ಗುಬಾಟಿ, ‘ನಾನು ಹಲವು ನಿರ್ದೇಶಕರ ಬಳಿ ಮಾತನಾಡಿದೆ ಎಲ್ಲರೂ ನಿಮ್ಮ ಸಿನಿಮಾ ಬಿಡುಗಡೆಗೆ ಕಾಯುತ್ತಿರುವುದಾಗಿ ಹೇಳುತ್ತಿದ್ದಾರೆ. ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್, ಸಂದೀಪ್ ರೆಡ್ಡಿ ವಂಗಾ, ರಾಮ್ ಗೋಪಾಲ್ ವರ್ಮಾ ಇನ್ನೂ ಕೆಲವು ದೊಡ್ಡ ನಿರ್ದೇಶಕರು, ನಿಮ್ಮ ಸಿನಿಮಾ ನೋಡಲು ಕಾಯುತ್ತಿರುವುದಾಗಿ ಹೇಳುತ್ತಿದ್ದಾರೆ’ ಎಂದು ರಾಣಾ ದಗ್ಗುಬಾಟಿ ಹೇಳಿದ್ದಾರೆ.

ರಾಣಾರ ಈ ಮಾತಿಗೆ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ ಉಪೇಂದ್ರ, ‘ಅವರೆಲ್ಲ ನನ್ನ ಸಿನಿಮಾಕ್ಕಾಗಿ ಕಾಯುತ್ತಿರುವುದು ನಿಜ, ಏಕೆ ಕಾಯುತ್ತಿದ್ದಾರಂತೆ. ನನ್ನ ಸಿನಿಮಾ ನೋಡಿ, ಈ ರೀತಿ ಸಿನಿಮಾ ಮಾಡಬಾರದು ಎಂದು ಅವರು ನಿರ್ಣಯ ಮಾಡುತ್ತಾರೆ. ಸಿನಿಮಾ ಒಂದನ್ನು ಹೇಗೆ ಮಾಡಬಾರದು ಎಂದು ತಿಳಿದುಕೊಳ್ಳಲು ಅವರು ನನ್ನ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ’ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ ಉಪೇಂದ್ರ.

ಇದನ್ನೂ ಓದಿ:UI Movie Review: ಯುಐ ಸಿನಿಮಾದಲ್ಲಿ ಉಪೇಂದ್ರ ವಿಚಾರಗಳ ಓವರ್​ ಡೋಸ್​

ಅಂದಹಾಗೆ ಉಪೇಂದ್ರಗೆ ತೆಲುಗು ಚಿತ್ರರಂಗದಲ್ಲಿಯೂ ದೊಡ್ಡ ಅಭಿಮಾನಿ ವರ್ಗವೇ ಇದೆ. ತೆಲುಗಿನ ಹಲವು ಸಿನಿಮಾಗಳಲ್ಲಿ ಉಪ್ಪಿ ನಟಿಸಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಅಲ್ಲು ಅರ್ಜುನ್ ಸೇರಿದಂತೆ ಕೆಲವು ಸ್ಟಾರ್ ಹೀರೋಗಳ ಜೊತೆಗೂ ಉಪ್ಪಿ ನಟಿಸಿದ್ದಾರೆ. ತೆಲುಗಿನಲ್ಲಿ ಕೆಲ ಸಿನಿಮಾಗಳನ್ನು ನಿರ್ದೇಶನ ಸಹ ಮಾಡಿದ್ದಾರೆ ಉಪ್ಪಿ.

ಇಂದು (ಡಿಸೆಂಬರ್ 20) ಉಪೇಂದ್ರ ನಿರ್ದೇಶನ ಮಾಡಿ ನಟಿಸಿರುವ ‘ಯುಐ’ ಸಿನಿಮಾ ತೆರೆಗೆ ಬಂದಿದೆ. ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ತಮ್ಮದೇ ಆದ ಶೈಲಿಯಲ್ಲಿ ಈ ಸಿನಿಮಾವನ್ನು ಉಪ್ಪಿ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!