AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra Birthday: ಉಪೇಂದ್ರ ಜನ್ಮದಿನ ಆಚರಣೆ ಎಲ್ಲಿ? ಸಂಪೂರ್ಣ ಮಾಹಿತಿ ನೀಡಿದ ಉಪ್ಪಿ

ಸ್ಟಾರ್​ಗಳ ಬರ್ತ್​ಡೇ ಬಂದರೆ ಅಭಿಮಾನಿಗಳಿಗೆ ಸಖತ್ ಉತ್ಸಾಹ. ಕೇಕ್, ಹಾರತುರಾಯಿ ತೆಗೆದುಕೊಂಡು ಹೋಗಿ ನಟನ ಮನೆ ಮುಂದೆ ಫ್ಯಾನ್ಸ್ ಸಂಭ್ರಮಿಸುತ್ತಾರೆ. ಪಟಾಕಿ ಸಿಡಿಸಿ ಖುಷಿಪಡುತ್ತಾರೆ. ಉಪೇಂದ್ರ ಬರ್ತ್​ಡೇಗೂ ಅಭಿಮಾನಿಗಳು ಇದೇ ರೀತಿಯಲ್ಲಿ ಸಂಭ್ರಮಿಸುವ ಆಲೋಚನೆಯಲ್ಲಿ ಇದ್ದರು. ಈ ಕಾರಣದಿಂದ ಉಪೇಂದ್ರ ಅವರು ಮೊದಲೇ ಮಾಹಿತಿ ನೀಡಿದ್ದಾರೆ.

Upendra Birthday: ಉಪೇಂದ್ರ ಜನ್ಮದಿನ ಆಚರಣೆ ಎಲ್ಲಿ? ಸಂಪೂರ್ಣ ಮಾಹಿತಿ ನೀಡಿದ ಉಪ್ಪಿ
ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on: Sep 15, 2023 | 2:47 PM

ಉಪೇಂದ್ರ (Upendra) ಅವರು ಸೆಪ್ಟೆಂಬರ್ 18ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರ ಜನ್ಮದಿನ ಸಖತ್ ವಿಶೇಷ. ಏಕೆಂದರೆ ಅಂದು ಗಣೇಶ ಚತುರ್ಥಿ. ಜೊತೆಗೆ ಉಪೇಂದ್ರ ನಿರ್ದೇಶನದ ‘ಯುಐ’ (UI Movie) ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಊರ್ವಶಿ ಥಿಯೇರಟ್​ನಲ್ಲಿ ಅಭಿಮಾನಿಗಳ ಜೊತೆ ಟೀಸರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಹಾಗಾದರೆ ಹುಟ್ಟುಹಬ್ಬದ ಆಚರಣೆ ಎಲ್ಲಿ? ಆ ಬಗ್ಗೆ ಉಪೇಂದ್ರ ಅವರು ವಿಶೇಷ ವಿಡಿಯೋ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಮನೆ ಸಮೀಪ ಬರದಂತೆ ಅವರು ಕೋರಿದ್ದಾರೆ.

ಸ್ಟಾರ್​ಗಳ ಬರ್ತ್​ಡೇ ಬಂದರೆ ಅಭಿಮಾನಿಗಳಿಗೆ ಸಖತ್ ಉತ್ಸಾಹ. ಕೇಕ್, ಹಾರತುರಾಯಿ ತೆಗೆದುಕೊಂಡು ಹೋಗಿ ನಟನ ಮನೆ ಮುಂದೆ ಫ್ಯಾನ್ಸ್ ಸಂಭ್ರಮಿಸುತ್ತಾರೆ. ಪಟಾಕಿ ಸಿಡಿಸಿ ಖುಷಿಪಡುತ್ತಾರೆ. ಉಪೇಂದ್ರ ಬರ್ತ್​ಡೇಗೂ ಅಭಿಮಾನಿಗಳು ಇದೇ ರೀತಿಯಲ್ಲಿ ಸಂಭ್ರಮಿಸುವ ಆಲೋಚನೆಯಲ್ಲಿ ಇದ್ದರು. ಈ ಕಾರಣದಿಂದ ಉಪೇಂದ್ರ ಅವರು ಮೊದಲೇ ಮಾಹಿತಿ ನೀಡಿದ್ದಾರೆ.

‘ಎಲ್ಲಾ ಅಭಿಮಾನಿಗಳಿಗೆ ನಮಸ್ಕಾರ. ಸೆಪ್ಟೆಂಬರ್ 18 ತುಂಬಾನೇ ವಿಶೇಷ. ಈ ವರ್ಷ ಗಣೇಶ ಚತುರ್ಥಿ ಬಂದಿದೆ. ನನ್ನ ಅಭಿಮಾನಿಗಳ ಹಬ್ಬ ಕೂಡ ಹೌದು. ಅದೇ ರೀತಿ ‘ಯುಐ’ ಚಿತ್ರದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ಹೀಗಾಗಿ ಸೆಪ್ಟೆಂಬರ್ 17 ರಾತ್ರಿ ಅಥವಾ ಸೆಪ್ಟೆಂಬರ್ 18ರ ಬೆಳಿಗ್ಗೆ ಕತ್ರಿಗುಪ್ಪೆ ಮನೆಯಲ್ಲಾಗಲೀ ಸದಾಶಿವ ನಗರದ ಮನೆಯಲ್ಲಾಗಲೀ ಇರಲ್ಲ’ ಎಂದಿದ್ದಾರೆ ಉಪೇಂದ್ರ. ಈ ಮೂಲಕ ಮನೆ ಸಮೀಪ ಬರದಂತೆ ಅವರು ಕೋರಿದ್ದಾರೆ.

‘ಸೆಪ್ಟೆಂಬರ್ 18ರಂದು ಮಧ್ಯಾಹ್ನ ಊರ್ವಶಿ ಥಿಯೇಟರ್ ಬಳಿ ಬನ್ನಿ. ಅಲ್ಲಿಯೇ ಕೇಕ್ ಕತ್ತರಿಸೋಣ. ಹುಟ್ಟುಹಬ್ಬ ಆಚರಿಸೋಣ. 2 ಗಂಟೆಯಿಂದ-8 ಗಂಟೆಯವರೆಗೆ ಆಚರಣೆ ಇರುತ್ತದೆ. ಸಂಜೆ 6:30ಕ್ಕೆ ಥಿಯೇಟರ್ ಒಳಗೆ ಟೀಸರ್ ನೋಡೋಣ’ ಎಂದಿದ್ದಾರೆ ಉಪೇಂದ್ರ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ದೊಡ್ಡ ಪರದೆಯಲ್ಲಿ ‘ಯುಐ’ ಟೀಸರ್ ನೋಡಲು ಫ್ಯಾನ್ಸ್ ಕಾದಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್

ಹಲವು ವರ್ಷಗಳ ಬಳಿಕ ಉಪೇಂದ್ರ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಮೊದಲು ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿದ್ದವು. ಈಗ ಟೀಸರ್ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ. ಈ ಮೂಲಕ ಹುಟ್ಟುಹಬ್ಬ ಹಾಗೂ ಗಣೇಶ ಚತುರ್ಥಿ ಉಪ್ಪಿ ಫ್ಯಾನ್ಸ್​ಗೆ ವಿಶೇಷ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು