Upendra Birthday: ಉಪೇಂದ್ರ ಜನ್ಮದಿನ ಆಚರಣೆ ಎಲ್ಲಿ? ಸಂಪೂರ್ಣ ಮಾಹಿತಿ ನೀಡಿದ ಉಪ್ಪಿ

ಸ್ಟಾರ್​ಗಳ ಬರ್ತ್​ಡೇ ಬಂದರೆ ಅಭಿಮಾನಿಗಳಿಗೆ ಸಖತ್ ಉತ್ಸಾಹ. ಕೇಕ್, ಹಾರತುರಾಯಿ ತೆಗೆದುಕೊಂಡು ಹೋಗಿ ನಟನ ಮನೆ ಮುಂದೆ ಫ್ಯಾನ್ಸ್ ಸಂಭ್ರಮಿಸುತ್ತಾರೆ. ಪಟಾಕಿ ಸಿಡಿಸಿ ಖುಷಿಪಡುತ್ತಾರೆ. ಉಪೇಂದ್ರ ಬರ್ತ್​ಡೇಗೂ ಅಭಿಮಾನಿಗಳು ಇದೇ ರೀತಿಯಲ್ಲಿ ಸಂಭ್ರಮಿಸುವ ಆಲೋಚನೆಯಲ್ಲಿ ಇದ್ದರು. ಈ ಕಾರಣದಿಂದ ಉಪೇಂದ್ರ ಅವರು ಮೊದಲೇ ಮಾಹಿತಿ ನೀಡಿದ್ದಾರೆ.

Upendra Birthday: ಉಪೇಂದ್ರ ಜನ್ಮದಿನ ಆಚರಣೆ ಎಲ್ಲಿ? ಸಂಪೂರ್ಣ ಮಾಹಿತಿ ನೀಡಿದ ಉಪ್ಪಿ
ಉಪೇಂದ್ರ

Updated on: Sep 15, 2023 | 2:47 PM

ಉಪೇಂದ್ರ (Upendra) ಅವರು ಸೆಪ್ಟೆಂಬರ್ 18ರಂದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರ ಜನ್ಮದಿನ ಸಖತ್ ವಿಶೇಷ. ಏಕೆಂದರೆ ಅಂದು ಗಣೇಶ ಚತುರ್ಥಿ. ಜೊತೆಗೆ ಉಪೇಂದ್ರ ನಿರ್ದೇಶನದ ‘ಯುಐ’ (UI Movie) ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಊರ್ವಶಿ ಥಿಯೇರಟ್​ನಲ್ಲಿ ಅಭಿಮಾನಿಗಳ ಜೊತೆ ಟೀಸರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಹಾಗಾದರೆ ಹುಟ್ಟುಹಬ್ಬದ ಆಚರಣೆ ಎಲ್ಲಿ? ಆ ಬಗ್ಗೆ ಉಪೇಂದ್ರ ಅವರು ವಿಶೇಷ ವಿಡಿಯೋ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಮನೆ ಸಮೀಪ ಬರದಂತೆ ಅವರು ಕೋರಿದ್ದಾರೆ.

ಸ್ಟಾರ್​ಗಳ ಬರ್ತ್​ಡೇ ಬಂದರೆ ಅಭಿಮಾನಿಗಳಿಗೆ ಸಖತ್ ಉತ್ಸಾಹ. ಕೇಕ್, ಹಾರತುರಾಯಿ ತೆಗೆದುಕೊಂಡು ಹೋಗಿ ನಟನ ಮನೆ ಮುಂದೆ ಫ್ಯಾನ್ಸ್ ಸಂಭ್ರಮಿಸುತ್ತಾರೆ. ಪಟಾಕಿ ಸಿಡಿಸಿ ಖುಷಿಪಡುತ್ತಾರೆ. ಉಪೇಂದ್ರ ಬರ್ತ್​ಡೇಗೂ ಅಭಿಮಾನಿಗಳು ಇದೇ ರೀತಿಯಲ್ಲಿ ಸಂಭ್ರಮಿಸುವ ಆಲೋಚನೆಯಲ್ಲಿ ಇದ್ದರು. ಈ ಕಾರಣದಿಂದ ಉಪೇಂದ್ರ ಅವರು ಮೊದಲೇ ಮಾಹಿತಿ ನೀಡಿದ್ದಾರೆ.

‘ಎಲ್ಲಾ ಅಭಿಮಾನಿಗಳಿಗೆ ನಮಸ್ಕಾರ. ಸೆಪ್ಟೆಂಬರ್ 18 ತುಂಬಾನೇ ವಿಶೇಷ. ಈ ವರ್ಷ ಗಣೇಶ ಚತುರ್ಥಿ ಬಂದಿದೆ. ನನ್ನ ಅಭಿಮಾನಿಗಳ ಹಬ್ಬ ಕೂಡ ಹೌದು. ಅದೇ ರೀತಿ ‘ಯುಐ’ ಚಿತ್ರದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ಹೀಗಾಗಿ ಸೆಪ್ಟೆಂಬರ್ 17 ರಾತ್ರಿ ಅಥವಾ ಸೆಪ್ಟೆಂಬರ್ 18ರ ಬೆಳಿಗ್ಗೆ ಕತ್ರಿಗುಪ್ಪೆ ಮನೆಯಲ್ಲಾಗಲೀ ಸದಾಶಿವ ನಗರದ ಮನೆಯಲ್ಲಾಗಲೀ ಇರಲ್ಲ’ ಎಂದಿದ್ದಾರೆ ಉಪೇಂದ್ರ. ಈ ಮೂಲಕ ಮನೆ ಸಮೀಪ ಬರದಂತೆ ಅವರು ಕೋರಿದ್ದಾರೆ.

‘ಸೆಪ್ಟೆಂಬರ್ 18ರಂದು ಮಧ್ಯಾಹ್ನ ಊರ್ವಶಿ ಥಿಯೇಟರ್ ಬಳಿ ಬನ್ನಿ. ಅಲ್ಲಿಯೇ ಕೇಕ್ ಕತ್ತರಿಸೋಣ. ಹುಟ್ಟುಹಬ್ಬ ಆಚರಿಸೋಣ. 2 ಗಂಟೆಯಿಂದ-8 ಗಂಟೆಯವರೆಗೆ ಆಚರಣೆ ಇರುತ್ತದೆ. ಸಂಜೆ 6:30ಕ್ಕೆ ಥಿಯೇಟರ್ ಒಳಗೆ ಟೀಸರ್ ನೋಡೋಣ’ ಎಂದಿದ್ದಾರೆ ಉಪೇಂದ್ರ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ದೊಡ್ಡ ಪರದೆಯಲ್ಲಿ ‘ಯುಐ’ ಟೀಸರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್

ಹಲವು ವರ್ಷಗಳ ಬಳಿಕ ಉಪೇಂದ್ರ ಅವರು ನಿರ್ದೇಶನಕ್ಕೆ ಮರಳಿದ್ದಾರೆ. ಈ ಮೊದಲು ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿದ್ದವು. ಈಗ ಟೀಸರ್ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ. ಈ ಮೂಲಕ ಹುಟ್ಟುಹಬ್ಬ ಹಾಗೂ ಗಣೇಶ ಚತುರ್ಥಿ ಉಪ್ಪಿ ಫ್ಯಾನ್ಸ್​ಗೆ ವಿಶೇಷ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us