AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Title Song: ‘ಕಬ್ಜ’ ಟೈಟಲ್​ ಸಾಂಗ್​ ಬಿಡುಗಡೆಗೆ ದಿನಗಣನೆ ಶುರು; ಉಪ್ಪಿ, ಸುದೀಪ್​ ಅಭಿಮಾನಿಗಳಿಗೆ ಹೆಚ್ಚಿತು ನಿರೀಕ್ಷೆ

Kabzaa Movie Songs | Upendra: ಹೈದರಾಬಾದ್​ನಲ್ಲಿ ‘ಕಬ್ಜ’ ಚಿತ್ರದ ಶೀರ್ಷಿಕೆ ಗೀತೆ​ ರಿಲೀಸ್​ ಆಗಲಿದೆ. ಫೆ.4ರಂದು ನಡೆಯುವ ಅದ್ದೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

Kabzaa Title Song: ‘ಕಬ್ಜ’ ಟೈಟಲ್​ ಸಾಂಗ್​ ಬಿಡುಗಡೆಗೆ ದಿನಗಣನೆ ಶುರು; ಉಪ್ಪಿ, ಸುದೀಪ್​ ಅಭಿಮಾನಿಗಳಿಗೆ ಹೆಚ್ಚಿತು ನಿರೀಕ್ಷೆ
ಉಪೇಂದ್ರ
ಮದನ್​ ಕುಮಾರ್​
|

Updated on: Feb 02, 2023 | 2:55 PM

Share

ಆರ್​. ಚಂದ್ರು ಆ್ಯಕ್ಷನ್​-ಕಟ್​ ಹೇಳಿರುವ ‘ಕಬ್ಜ’ (Kabzaa Movie) ಸಿನಿಮಾದ ಮೊದಲ ಸಾಂಗ್​ ಹೊರಬರುತ್ತಿದೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈ ಚಿತ್ರತಂಡದಿಂದ ಬರುವ ಹಾಡು ಯಾವುದು ಎಂಬ ಪ್ರಶ್ನೆಗೂ ಈಗ ಉತ್ತರ ಸಿಕ್ಕಿದೆ. ಮೊದಲಿಗೆ ಶೀರ್ಷಿಕೆ ಗೀತೆ ರಿಲೀಸ್​ ಮಾಡಲು ಆರ್​. ಚಂದ್ರು (R. Chandru) ನಿರ್ಧರಿಸಿದ್ದಾರೆ. ಹೈದರಾಬಾದ್​ನಲ್ಲಿ ಫೆಬ್ರವರಿ 4ರಂದು ಅದ್ದೂರಿಯಾಗಿ ‘ಕಬ್ಜ’ ಟೈಟಲ್​ ಟ್ರ್ಯಾಕ್​ ಅನಾವರಣ ಆಗಲಿದೆ. ಈ ಸಿನಿಮಾದಲ್ಲಿ ಉಪೇಂದ್ರ ಮತ್ತು ಕಿಚ್ಚ ಸುದೀಪ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್​ ನಟಿಸಿದ್ದಾರೆ. ಈ ಸಿನಿಮಾಗೆ ರವಿ ಬಸ್ರೂರು (Ravi Basrur) ಸಂಗೀತ ನಿರ್ದೇಶನ ಮಾಡಿದ್ದು, ಶೀರ್ಷಿಕೆ ಗೀತೆಗೆ ಅವರೇ ಸಾಹಿತ್ಯ ಬರೆದಿದ್ದಾರೆ.

ಮಾರ್ಚ್​ 17ರಂದು ‘ಕಬ್ಜ’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಲು ತಂಡ ಸಜ್ಜಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಪ್ರಮುಖ ನಗರಗಳಲ್ಲಿ ಒಂದೊಂದು ಹಾಡನ್ನು ಬಿಡುಗಡೆ ಮಾಡಲಾಗುವುದು. ಹೈದರಾಬಾದ್​ನಲ್ಲಿ ಫಸ್ಟ್​ ಸಾಂಗ್​ ರಿಲೀಸ್​ ಆಗಲಿದೆ. ತೆಲುಗು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಇದನ್ನೂ ಓದಿ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​
Image
ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
Image
Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್​; ಉಪ್ಪಿ ಸಿನಿಮಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​
Image
‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಎಂದ ಉಪೇಂದ್ರ

ತೆಲುಗು ನೆಲದಲ್ಲಿ ಉಪೇಂದ್ರ, ಸುದೀಪ್​ ಹಾಗೂ ಶ್ರೀಯಾ ಶರಣ್​ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಯಶಸ್ಸಿನ ಬಳಿಕ ಸಂಗೀತ ನಿರ್ದೇಶಕ ರವಿ ಬಸ್ರೂರು ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈ ಎಲ್ಲ ಕಾರಣದಿಂದ ಹೈದರಾಬಾದ್​ನಲ್ಲಿ ನಡೆಯಲಿರುವ ಶೀರ್ಷಿಕೆ ಗೀತೆ ಬಿಡುಗಡೆ ಸಮಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಅಭಿಮಾನಿಗಳಲ್ಲಿ ಬಲವಾಗಿದೆ.

ಇದನ್ನೂ ಓದಿ: Kabzaa Song: ‘ಕಬ್ಜ’ ಲಿರಿಕಲ್​ ಸಾಂಗ್​ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್​ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ

ಮಾರ್ಚ್​ 17ರಂದು ‘ಕಬ್ಜ’ ರಿಲೀಸ್​:

‘ಕಬ್ಜ’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ (ಮಾ.17) ರಿಲೀಸ್​ ಮಾಡಲು ಆರ್​. ಚಂದ್ರು ತೀರ್ಮಾನಿಸಿದ್ದಾರೆ. ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಪುನೀತ್​ ರಾಜ್​ಕುಮಾರ್​ ಅವರು ಅಭಿಮಾನಿಗಳ ಪಾಲಿನ ದೇವರು. ಅನೇಕ ಬಾರಿ ಅವರು ನನ್ನನ್ನು ಹುರಿದುಂಬಿಸಿದ್ದರು. ಹುಷಾರಾಗಿ ಸಿನಿಮಾ ಮಾಡು ಅಂತ ಮಾರ್ಗದರ್ಶನ ನೀಡುತ್ತಿದ್ದರು. ಹಾಗಾಗಿ ಅವರ ಬರ್ತ್​ಡೇ ದಿನವೇ ಕಬ್ಜ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಆರ್. ಚಂದ್ರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ