AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಬಳಿಕ ತೆಲುಗಿನ ರಾಣಾ ದಗ್ಗುಬಾಟಿ ಶೋಗೆ ಬಂದ ಮತ್ತೋರ್ವ ಕನ್ನಡಿಗ

ರಾಣಾ ದಗ್ಗುಬಾಟಿ ಅವರ ‘ದಿ ರಾಣಾ ದಗ್ಗುಬಾಟಿ ಶೋ’ಗೆ ಕನ್ನಡದ ಹೀರೋ ಒಬ್ಬರ ಆಗಮನ ಆಗಿದೆ. ಇತ್ತೀಚೆಗೆ ಸೂಪರ್ ಹಿಟ್ ಆದ ಚಿತ್ರದ ಯಶಸ್ಸಿನ ನಂತರ ಈ ಆಗಮನ ನಡೆದಿದೆ. ಉಪೇಂದ್ರ ಅವರ ವಿಶಿಷ್ಟವಾದ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ಈ ಶೋನಲ್ಲಿ ಕಾಣಬಹುದು. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಶರ್ಮಿಳಾ ಮಾಂಡ್ರೆ ಕೂಡ ಈ ಶೋನಲ್ಲಿ ಭಾಗವಹಿಸಿದ್ದಾರೆ.

ರಿಷಬ್ ಶೆಟ್ಟಿ ಬಳಿಕ ತೆಲುಗಿನ ರಾಣಾ ದಗ್ಗುಬಾಟಿ ಶೋಗೆ ಬಂದ ಮತ್ತೋರ್ವ ಕನ್ನಡಿಗ
ರಾಣಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 04, 2025 | 11:02 AM

Share

ರಾಣಾ ದಗ್ಗುಬಾಟಿ ಅವರಿಗೆ ಯಾವುದೇ ಭಾಷೆಯ ಮಿತಿ ಇಲ್ಲ. ಅವರು ಆ ರೀತಿಯ ಗಡಿಯನ್ನು ಹಾಕಿಕೊಂಡವರಲ್ಲ. ಎಲ್ಲಾ ಚಿತ್ರರಂಗ ಒಂದು ಎಂದುಕೊಂಡವರು ಅವರು. ಈಗ ಅವರು ‘ದಿ ರಾಣಾ ದಗ್ಗುಬಾಟಿ ಶೋ’ನ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಾಣಾ ಅವರೇ ಕುಂದಾಪುರಕ್ಕೆ ತೆರಳಿ ಶೂಟ್ ಮಾಡಿದ್ದರು. ಈಗ ಮತ್ತೋರ್ವ ಕನ್ನಡಿಗನಿಗೆ ಈ ಶೋನಲ್ಲಿ ಅವಕಾಶ ಸಿಕ್ಕಿದೆ. ಅವರು ಬೇರಾರೂ ಅಲ್ಲ, ರಿಯಲ್ ಸ್ಟಾರ್ ಉಪೇಂದ್ರ.

ಉಪೇಂದ್ರ ಅವರು ಇತ್ತೀಚೆಗೆ ‘ಯುಐ’ ಚಿತ್ರದ ಮೂಲಕ ಗೆಲುವು ಕಂಡರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಕನ್ನಡದವರು ಮಾತ್ರವಲ್ಲದೆ, ಪರಭಾಷಿಗರು ಕೂಡ ಇಷ್ಟಪಟ್ಟಿದ್ದಾರೆ. ಈ ಸಿನಿಮಾದ ಕಲೆಕ್ಷನ್ ಕೂಡ ಜೋರಾಗಿದೆ. ಕನ್ನಡದ ಜೊತೆಗೆ ತೆಲುಗು ಹಾಗೂ ತಮಿಳಿನ ಪ್ರೇಕ್ಷಕರಿಗೂ ಸಿನಿಮಾ ಇಷ್ಟ ಆಗುತ್ತಿದೆ. ಅವರು ಗೆಲುವಿನ ಖುಷಿಯಲ್ಲಿ ಇದ್ದಾರೆ. ಇದೇ ಖುಷಿಯಲ್ಲಿ ಅವರು ‘ದಿ ರಾಣಾ ದಗ್ಗುಬಾಟಿ’ ಶೋಗೆ ಆಗಮಿಸಿದ್ದಾರೆ.

ರಾಣಾ ದಗ್ಗುಬಾಟಿ ಅವರು ನಟನಾಗಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ‘ಯುಐ’ ಚಿತ್ರಕ್ಕಾಗಿ ಒಂದು ಪ್ರಮೋಷನಲ್ ವಿಡಿಯೋ ಕೂಡ ಮಾಡಿದ್ದರು. ಉಪೇಂದ್ರ ಜೊತೆ ಒಂದಷ್ಟು ಚರ್ಚೆಗಳನ್ನು ನಡೆಸಿದ್ದರು. ಈಗ ಉಪೇಂದ್ರ ಅವರನ್ನು ತಮ್ಮ ಶೋಗೇ ಕರೆಸಿಕೊಂಡಿದ್ದಾರೆ. ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಶೋ ಪ್ರಸಾರ ಕಾಣಲಿದೆ. ಇದರ ಶೂಟ್ ಮುಂಜಾನೆ 3 ಗಂಟೆಗೆ ನಡೆದಿದೆ.

ಶರ್ಮಿಳಾ ಮಾಂಡ್ರೆ ಕೂಡ ಶೂಟ್​​ನಲ್ಲಿ ಭಾಗಿ ಆಗಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಅವರು ಈ ಶೋನ ಭಾಗವಾಗಿರುವುದಕ್ಕೆ ಸಖತ್ ಎಗ್ಸೈಟ್ ಆಗಿದ್ದಾರೆ. ಈ ಎಪಿಸೋಡ್ ಯಾವಾಗ ಪ್ರಸಾರ ಕಾಣುತ್ತದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ

ಉಪೇಂದ್ರ ಅವರು ಫಿಲ್ಟರ್​ಲೆಸ್ ಮಾತುಗಳ ಮೂಲಕ ಇಷ್ಟ ಆಗುತ್ತಾರೆ. ಅವರು ಏನು ಮಾತನಾಡುತ್ತಾರೆ ಅದು ಅನೇಕರಿಗೆ ಇಷ್ಟ ಆಗುತ್ತದೆ. ಅವರ ಆಲೋಚನೆಗಳು ಕೂಡ ಭಿನ್ನವಾಗಿವೆ. ಈಗ ಅಮೇಜಾನ್ ಪ್ರೈಮ್ ವಿಡಿಯೋ ಶೋನಲ್ಲಿ ಅವರು ಏನೆಲ್ಲ ಮಾತನಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಮುಂದಿನ ದಿನಗಳಲ್ಲಿ ‘ಯುಐ’ ಚಿತ್ರ ಒಟಿಟಿಗೆ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ