‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

KGF Chapter 2 | Upendra: ‘ಕೆಜಿಎಫ್​ 2’ ನೋಡಿರುವ ಉಪೇಂದ್ರ ಅವರು ಮನಸಾರೆ ಹೊಗಳಿದ್ದಾರೆ. ಚಿತ್ರತಂಡದಲ್ಲಿನ ಅನೇಕರ ಕೆಲಸವನ್ನು ಗಮನಿಸಿ ಆ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​
ಯಶ್​, ಉಪೇಂದ್ರ​​
Follow us
| Updated By: ಮದನ್​ ಕುಮಾರ್​

Updated on: Apr 21, 2022 | 2:11 PM

ಸಿನಿಮಾ ಲೋಕದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಮಾಡಿರುವ ಸಾಧನೆ ಸಣ್ಣದೇನಲ್ಲ. ಕನ್ನಡದ ಈ ಚಿತ್ರಕ್ಕೆ ದೇಶಾದ್ಯಂತ ಇರುವ ಪ್ರೇಕ್ಷಕರು ಫಿದಾ ಆಗಿದ್ದಾರೆ. 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ. ಯಶ್​ (Yash) ಅಭಿನಯಕ್ಕೆ, ಪ್ರಶಾಂತ್​ ನೀಲ್​ ನಿರ್ದೇಶನಕ್ಕೆ ಪರಭಾಷೆ ಮಂದಿ ಕೂಡ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇಷ್ಟು ದೊಡ್ಡ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೂ ಭೇಷ್​ ಎನ್ನುತ್ತಿದ್ದಾರೆ. ‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಕೂಡ ಈ ಸಿನಿಮಾಗೆ ಮನಸೋತಿದ್ದಾರೆ. ಇಡೀ ತಂಡವನ್ನು ಅವರೀಗ ಹೊಗಳಿದ್ದಾರೆ. ಇದು ‘ಕೆಜಿಎಫ್​ 2’ ಸಿನಿಮಾ ಟೀಮ್​ ಬಲವನ್ನು ಹೆಚ್ಚಿಸಿದೆ. ದಶಕಗಳ ಹಿಂದೆಯೇ ಡಿಫರೆಂಟ್​ ಸಿನಿಮಾವನ್ನು ನಿರ್ದೇಶಿಸಿ ಸೈ ಎನಿಸಿಕೊಂಡವರು ಉಪೇಂದ್ರ. ಅವರಿಗೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತುಂಬ ಇಷ್ಟ ಆಗಿದೆ. ತಮ್ಮ ಅನಿಸಿಕೆಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಒಟ್ಟಾರೆ ಉಪೇಂದ್ರ ಹೇಳಿದ್ದೇನು? ಅದಕ್ಕೆ ಯಶ್​ ಫ್ಯಾನ್ಸ್​ ಯಾವ ರೀತಿ ಪ್ರತಿಕ್ರಿಯಿಸಿದ್ದಾರೆ? ಈ ಕುರಿತು ಪೂರ್ತಿ ವಿವರ ಇಲ್ಲಿದೆ..

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ಆಗುವುದಕ್ಕಿಂತ ಒಂದು ದಿನ ಮುನ್ನವೇ ಉಪೇಂದ್ರ ಈ ತಂಡಕ್ಕೆ ಶುಭ ಕೋರಿದ್ದರು. ‘ಕನ್ನಡ ಚಿತ್ರರಂಗದ ಹೆಮ್ಮೆಯ ಚಿತ್ರ ಕೆಜಿಎಫ್​ ಇಡೀ ವಿಶ್ವವೇ ತಿರುಗಿ ನೋಡುವಂತಹ ಯಶಸ್ಸು ಗಳಿಸಲಿ’ ಎಂದು ಅವರು ಹಾರೈಸಿದ್ದರು. ಈಗ ಈ ಸಿನಿಮಾ ನೋಡಿರುವ ಅವರು ಮನಸಾರೆ ಹೊಗಳಿದ್ದಾರೆ. ಚಿತ್ರತಂಡದಲ್ಲಿನ ಅನೇಕರ ಕೆಲಸವನ್ನು ಗಮನಿಸಿ ಆ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಕೆಜಿಎಫ್ 2 ಚಿತ್ರವನ್ನು ನೋಡಿದೆ. ಆಹಾ ಎಂಥಾ ಮಾಸ್ಟರ್​ ಪೀಸ್​ ಸಿನಿಮಾ. ಪ್ರಶಾಂತ್​ ನೀಲ್​ ನೀವು ನೆಕ್ಸ್ಟ್​ ಲೆವೆಲ್​ ನಿರ್ದೇಶಕ. ಅದ್ಭುತ ನಿರ್ದೇಶನ, ಅಸಾಧಾರಣ ಸ್ಕ್ರಿಪ್ಟ್​, ಡೈಲಾಗ್​, ಮ್ಯೂಸಿಕ್​, ಆರ್ಟ್​, ಹೊಂಬಾಳೆ ಫಿಲ್ಮ್ಸ್​ ರಾಜಿ ಇಲ್ಲದ ಪ್ರೊಡಕ್ಷನ್​’ ಎಂದು ಪೋಸ್ಟ್​ ಮಾಡಿರುವ ಉಪೇಂದ್ರ ಅವರು ಯಶ್​ ನಟನೆಗೆ ಶಹಭಾಷ್​ ಎಂದಿದ್ದಾರೆ.

ಭುವನ್​ ಗೌಡ ಅವರ ಛಾಯಾಗ್ರಹಣ, ಸಂಜಯ್​ ದತ್​ ಮತ್ತು ರವೀನಾ ಟಂಡನ್​ ಅವರ ಅಭಿನಯವನ್ನು ಉಪೇಂದ್ರ ಹಾಡಿ ಹೊಗಳಿದ್ದಾರೆ. ಅವರು ಮಾಡಿರುವ ಈ ಟ್ವೀಟ್​ಗೆ ಅನೇಕರು ನಾನಾ ಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ಬಗ್ಗೆ ಕನ್ನಡದ ಇನ್ನಿತರೆ ನಟರು ಮೌನ ವಹಿಸಿದ್ದಾರೆ ಎಂದು ಕೆಲವು ನೆಟ್ಟಿಗರು ತಕರಾರು ತೆಗೆದಿದ್ದಾರೆ. ಬೇರೆ ನಟರು ಇನ್ನೂ ‘ಕೆಜಿಎಫ್​ 2’ ನೋಡಿಲ್ವಾ? ಅವರೆಲ್ಲ ಯಾಕೆ ಮಾತನಾಡುತ್ತಿಲ್ಲ? ಎಂಬಿತ್ಯಾದಿ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ‘ಬೇರೆ ನಟರು ಮಾತನಾಡಬೇಕು ಎಂದೇನೂ ಇಲ್ಲ. ಅವರ ಸಿನಿಮಾಗಳು ಬಂದಾಗ ಯಶ್​ ಕೂಡ ಮಾತನಾಡಿರಲಿಲ್ಲ’ ಎಂದು ಕೆಲವರು ವಾದ ಮಂಡಿಸಿದ್ದಾರೆ.

ವಿವಾದ ಏನೇ ಇರಲಿ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ. ಬಿಡುಗಡೆಯಾಗಿ 7 ದಿನ ಕಳೆದರೂ ಈ ಚಿತ್ರದ ಹವಾ ಕಡಿಮೆ ಆಗಿಲ್ಲ. ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಉತ್ತರ ಭಾರತದ ಪ್ರೇಕ್ಷಕರು ಕೂಡ ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ.

ಇದನ್ನೂ ಓದಿ:

ಮದುವೆ ಆಹ್ವಾನ ಪತ್ರಿಕೆಯಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಡೈಲಾಗ್​; ಆದ್ರೆ ಇಲ್ಲಿದೆ ಒಂದು ಟ್ವಿಸ್ಟ್

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ