AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

KGF Chapter 2 | Upendra: ‘ಕೆಜಿಎಫ್​ 2’ ನೋಡಿರುವ ಉಪೇಂದ್ರ ಅವರು ಮನಸಾರೆ ಹೊಗಳಿದ್ದಾರೆ. ಚಿತ್ರತಂಡದಲ್ಲಿನ ಅನೇಕರ ಕೆಲಸವನ್ನು ಗಮನಿಸಿ ಆ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​
ಯಶ್​, ಉಪೇಂದ್ರ​​
Follow us
TV9 Web
| Updated By: ಮದನ್​ ಕುಮಾರ್​

Updated on: Apr 21, 2022 | 2:11 PM

ಸಿನಿಮಾ ಲೋಕದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಮಾಡಿರುವ ಸಾಧನೆ ಸಣ್ಣದೇನಲ್ಲ. ಕನ್ನಡದ ಈ ಚಿತ್ರಕ್ಕೆ ದೇಶಾದ್ಯಂತ ಇರುವ ಪ್ರೇಕ್ಷಕರು ಫಿದಾ ಆಗಿದ್ದಾರೆ. 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ. ಯಶ್​ (Yash) ಅಭಿನಯಕ್ಕೆ, ಪ್ರಶಾಂತ್​ ನೀಲ್​ ನಿರ್ದೇಶನಕ್ಕೆ ಪರಭಾಷೆ ಮಂದಿ ಕೂಡ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇಷ್ಟು ದೊಡ್ಡ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೂ ಭೇಷ್​ ಎನ್ನುತ್ತಿದ್ದಾರೆ. ‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಕೂಡ ಈ ಸಿನಿಮಾಗೆ ಮನಸೋತಿದ್ದಾರೆ. ಇಡೀ ತಂಡವನ್ನು ಅವರೀಗ ಹೊಗಳಿದ್ದಾರೆ. ಇದು ‘ಕೆಜಿಎಫ್​ 2’ ಸಿನಿಮಾ ಟೀಮ್​ ಬಲವನ್ನು ಹೆಚ್ಚಿಸಿದೆ. ದಶಕಗಳ ಹಿಂದೆಯೇ ಡಿಫರೆಂಟ್​ ಸಿನಿಮಾವನ್ನು ನಿರ್ದೇಶಿಸಿ ಸೈ ಎನಿಸಿಕೊಂಡವರು ಉಪೇಂದ್ರ. ಅವರಿಗೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತುಂಬ ಇಷ್ಟ ಆಗಿದೆ. ತಮ್ಮ ಅನಿಸಿಕೆಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಒಟ್ಟಾರೆ ಉಪೇಂದ್ರ ಹೇಳಿದ್ದೇನು? ಅದಕ್ಕೆ ಯಶ್​ ಫ್ಯಾನ್ಸ್​ ಯಾವ ರೀತಿ ಪ್ರತಿಕ್ರಿಯಿಸಿದ್ದಾರೆ? ಈ ಕುರಿತು ಪೂರ್ತಿ ವಿವರ ಇಲ್ಲಿದೆ..

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ಆಗುವುದಕ್ಕಿಂತ ಒಂದು ದಿನ ಮುನ್ನವೇ ಉಪೇಂದ್ರ ಈ ತಂಡಕ್ಕೆ ಶುಭ ಕೋರಿದ್ದರು. ‘ಕನ್ನಡ ಚಿತ್ರರಂಗದ ಹೆಮ್ಮೆಯ ಚಿತ್ರ ಕೆಜಿಎಫ್​ ಇಡೀ ವಿಶ್ವವೇ ತಿರುಗಿ ನೋಡುವಂತಹ ಯಶಸ್ಸು ಗಳಿಸಲಿ’ ಎಂದು ಅವರು ಹಾರೈಸಿದ್ದರು. ಈಗ ಈ ಸಿನಿಮಾ ನೋಡಿರುವ ಅವರು ಮನಸಾರೆ ಹೊಗಳಿದ್ದಾರೆ. ಚಿತ್ರತಂಡದಲ್ಲಿನ ಅನೇಕರ ಕೆಲಸವನ್ನು ಗಮನಿಸಿ ಆ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಕೆಜಿಎಫ್ 2 ಚಿತ್ರವನ್ನು ನೋಡಿದೆ. ಆಹಾ ಎಂಥಾ ಮಾಸ್ಟರ್​ ಪೀಸ್​ ಸಿನಿಮಾ. ಪ್ರಶಾಂತ್​ ನೀಲ್​ ನೀವು ನೆಕ್ಸ್ಟ್​ ಲೆವೆಲ್​ ನಿರ್ದೇಶಕ. ಅದ್ಭುತ ನಿರ್ದೇಶನ, ಅಸಾಧಾರಣ ಸ್ಕ್ರಿಪ್ಟ್​, ಡೈಲಾಗ್​, ಮ್ಯೂಸಿಕ್​, ಆರ್ಟ್​, ಹೊಂಬಾಳೆ ಫಿಲ್ಮ್ಸ್​ ರಾಜಿ ಇಲ್ಲದ ಪ್ರೊಡಕ್ಷನ್​’ ಎಂದು ಪೋಸ್ಟ್​ ಮಾಡಿರುವ ಉಪೇಂದ್ರ ಅವರು ಯಶ್​ ನಟನೆಗೆ ಶಹಭಾಷ್​ ಎಂದಿದ್ದಾರೆ.

ಭುವನ್​ ಗೌಡ ಅವರ ಛಾಯಾಗ್ರಹಣ, ಸಂಜಯ್​ ದತ್​ ಮತ್ತು ರವೀನಾ ಟಂಡನ್​ ಅವರ ಅಭಿನಯವನ್ನು ಉಪೇಂದ್ರ ಹಾಡಿ ಹೊಗಳಿದ್ದಾರೆ. ಅವರು ಮಾಡಿರುವ ಈ ಟ್ವೀಟ್​ಗೆ ಅನೇಕರು ನಾನಾ ಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ಬಗ್ಗೆ ಕನ್ನಡದ ಇನ್ನಿತರೆ ನಟರು ಮೌನ ವಹಿಸಿದ್ದಾರೆ ಎಂದು ಕೆಲವು ನೆಟ್ಟಿಗರು ತಕರಾರು ತೆಗೆದಿದ್ದಾರೆ. ಬೇರೆ ನಟರು ಇನ್ನೂ ‘ಕೆಜಿಎಫ್​ 2’ ನೋಡಿಲ್ವಾ? ಅವರೆಲ್ಲ ಯಾಕೆ ಮಾತನಾಡುತ್ತಿಲ್ಲ? ಎಂಬಿತ್ಯಾದಿ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ‘ಬೇರೆ ನಟರು ಮಾತನಾಡಬೇಕು ಎಂದೇನೂ ಇಲ್ಲ. ಅವರ ಸಿನಿಮಾಗಳು ಬಂದಾಗ ಯಶ್​ ಕೂಡ ಮಾತನಾಡಿರಲಿಲ್ಲ’ ಎಂದು ಕೆಲವರು ವಾದ ಮಂಡಿಸಿದ್ದಾರೆ.

ವಿವಾದ ಏನೇ ಇರಲಿ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ. ಬಿಡುಗಡೆಯಾಗಿ 7 ದಿನ ಕಳೆದರೂ ಈ ಚಿತ್ರದ ಹವಾ ಕಡಿಮೆ ಆಗಿಲ್ಲ. ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಉತ್ತರ ಭಾರತದ ಪ್ರೇಕ್ಷಕರು ಕೂಡ ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ.

ಇದನ್ನೂ ಓದಿ:

ಮದುವೆ ಆಹ್ವಾನ ಪತ್ರಿಕೆಯಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಡೈಲಾಗ್​; ಆದ್ರೆ ಇಲ್ಲಿದೆ ಒಂದು ಟ್ವಿಸ್ಟ್

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್