AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ ಪ್ರೀತಿಯ ‘ಕನ್ವರ್’​ ನಿಧನ; ಈ ಶ್ವಾನವನ್ನು ಗಿಫ್ಟ್​ ಆಗಿ ಕೊಟ್ಟಿದ್ದು ಕನ್ನಡದ ಸ್ಟಾರ್​ ನಟ

ಕನ್ವರ್​ ಮೇಲೆ ಅಭಿಷೇಕ್​ಗೆ ವಿಶೇಷ ಕಾಳಜಿ ಇತ್ತು. ಅವರು ಮುದ್ದಿನಿಂದ ಅದನ್ನು ಸಾಕಿದ್ದರು. ಅಭಿಷೇಕ್​ ಮಾಸ್ಟರ್​ ಮಾಡೋಕೆ ಲಂಡನ್​ಗೆ ತೆರಳಿದಾಗ ಕನ್ವರ್​ ಊಟ್​ ಮಾಡುವುದನ್ನೇ ನಿಲ್ಲಿಸಿದ್ದ.

ಅಂಬರೀಷ್​ ಪ್ರೀತಿಯ ‘ಕನ್ವರ್’​ ನಿಧನ; ಈ ಶ್ವಾನವನ್ನು ಗಿಫ್ಟ್​ ಆಗಿ ಕೊಟ್ಟಿದ್ದು ಕನ್ನಡದ ಸ್ಟಾರ್​ ನಟ
ಅಂಬಿ ಸಾಕಿದ ಶ್ವಾನಗಳ ಜತೆ ಅಭಿಷೇಕ್​
ರಾಜೇಶ್ ದುಗ್ಗುಮನೆ
|

Updated on:May 24, 2021 | 6:06 PM

Share

ಅಂಬರೀಷ್​ ಶ್ವಾನ ಪ್ರಿಯರು. ಹೀಗಾಗಿ, ಅವರು ನಾಯಿಗಳನ್ನು ಸಾಕೋಕೆ ಇಷ್ಟಪಡುತ್ತಿದ್ದರು. ಕನ್ವರ್​ ಹಾಗೂ ಬುಲ್​ಬುಲ್​ ಹೆಸರಿನ ಎರಡು ಶ್ವಾನಗಳನ್ನು ಸಾಕಿದ್ದರು. ವಿಶೇಷ ಎಂದರೆ ಈ ಎರಡೂ ನಾಯಿಗಳಿಗೆ ಹೆಸರಿಟ್ಟಿದ್ದು ಅಂಬಿ ಮಗ ಅಭಿಷೇಕ್​​. ಹಾಗಾದರೆ ಇವುಗಳನ್ನು ಕೊಟ್ಟಿದ್ದು ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕನ್ವರ್ ಹೆಸರಿನ ಶ್ವಾನವನ್ನು ನೀಡಿದ್ದು ರಿಯಲ್​ ಸ್ಟಾರ್​ ಉಪೇಂದ್ರ. ಅಂಬರೀಷ್​ ಅವರು ಪ್ರಾಣಿ ಪ್ರಿಯರು ಎಂದು ಅರಿತಿದ್ದ ಉಪೇಂದ್ರ ಈ ಶ್ವಾನವನ್ನು ನೀಡಿದ್ದರು. ಎರಡು ವರ್ಷಗಳ ನಂತರ ಬಂದಿದ್ದು ಬುಲ್​ಬುಲ್​. ಇದಕ್ಕೆ ಹೆಸರಿಟ್ಟಿದ್ದು, ಕೂಡ ಅಭಿಷೇಕ್​. ‘ನಾಗರಹಾವು’ ಸಿನಿಮಾದಲ್ಲಿ ಅಂಬರೀಷ್​ ಹೇಳುವ ‘ಏನ್​ ಬುಲ್​ಬುಲ್​ ಮಾತಾಡಕಿಲ್ವಾ?’ ಡೈಲಾಗ್​​ ಭಾರೀ ಫೇಮಸ್​ ಆಗಿತ್ತು. ಹೀಗಾಗಿ, ಬುಲ್​ಬುಲ್​ ಎಂದು ಹೆಸರಿಡಲಾಗಿತ್ತು.

ಅಂಬರೀಷ್​ ಫೇವರೆಟ್​ ಶ್ವಾನ:

ಅಂಬರೀಷ್ ಬದುಕಿರುವಾಗ ಕನ್ವರ್‌  ಶ್ವಾನ ಅಂಬಿಗೆ ಮೋಸ್ಟ್ ಫೇವರಿಟ್ ಆಗಿತ್ತು. ಅಲ್ಲದೇ ಅಂಬರೀಷ್ ಅವರು ಕನ್ವರ್‌ನನ್ನು ಪ್ರತಿದಿನ ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಈ ಶ್ವಾನ ಅಂಬರೀಷ್​​​ ಅವರನ್ನು ತುಂಬಾನೇ ಹಚ್ಚಿಕೊಂಡಿತ್ತು. 2018ರ ನವೆಂಬರ್​ 24ರಂದು ಅಂಬರೀಶ್​ ಮೃತಪಟ್ಟಿದ್ದರು. ಅಂಬಿ ಅಗಲಿದ ಕ್ಷಣ ಈ ಶ್ವಾನ ಊಟ ಕೂಡ ಮಾಡದೇ ಕಂಬನಿ ಸುರಿಸುತ್ತಿತ್ತು.  ಕನ್ವರ್‌  ಕೂಡ ಅಂಬಿಯನ್ನು  ಹಚ್ಚಿಕೊಂಡಿತ್ತು. ಅಂಬರೀಷ್​ ಮೃತಪಟ್ಟ ನಂತರ ಕನ್ವರ್​ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇದೀಗ ಅಂಬಿ ಪ್ರೀತಿಯ ಕನ್ವರ್‌ ಇಹಲೋಕ ತ್ಯಜಿಸಿದೆ.

ಅಭಿ ದೇವರಾಗಿದ್ದರು!

ಕನ್ವರ್​ ಮೇಲೆ ಅಭಿಷೇಕ್​ಗೆ ವಿಶೇಷ ಕಾಳಜಿ ಇತ್ತು. ಅವರು ಮುದ್ದಿನಿಂದ ಅದನ್ನು ಸಾಕಿದ್ದರು. ಅಭಿಷೇಕ್​ ಮಾಸ್ಟರ್​ ಮಾಡೋಕೆ ಲಂಡನ್​ಗೆ ತೆರಳಿದಾಗ ಕನ್ವರ್​ ಊಟ್​ ಮಾಡುವುದನ್ನೇ ನಿಲ್ಲಿಸಿದ್ದ. ಎಲ್ಲವನ್ನೂ ಒತ್ತಾಯಪೂರ್ವಕವಾಗಿ ಅವನಿಗೆ ನೀಡಬೇಕಿತ್ತು. ಅಭಿ ವಾಪಾಸಾದ ನಂತರ ಆತ ಮತ್ತೆ ಊಟ ಮಾಡಲು ಆರಂಭಿಸಿದ್ದ. ಅಭಿ ಎಂದರೆ ಕನ್ವರ್​ಗೆ ದೇವರು.

ಹೂವಿ ಹಾಕಿ ಅಂತ್ಯ ಸಂಸ್ಕಾರ:

ಅಂಬಿ ಪರಮಾಪ್ತರಾಗಿದ್ದ ಶ್ರೀನಿವಾಸ್, ಕನ್ವರ್‌  ಫೋಟೊಗಳನ್ನ ಹಂಚಿಕೊಂಡಿದ್ದಾರೆ. ಕನ್ವರ್​  ನಿಧನಕ್ಕೆ ಕುಟುಂಬವರ್ಗವೂ ಬೇಸರದಲ್ಲಿದೆ ಎಂದಿದ್ದಾರೆ. ಈ ವಿಚಾರ ಕೇಳಿ ಅಂಬಿ ಅಭಿಮಾನಿಗಳು ಕೂಡ ಬೇಸರ ಹೊರ ಹಾಕಿದ್ದಾರೆ. ಈ ಶ್ವಾನಕ್ಕೆ ಹೂವು ಹಾಕಿ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಕೊನೆವರೆಗೂ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಅಂಬಿ

ಅಂಬರೀಷ್​ ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಛಾಪು ಮೂಡಿಸಿದ್ದರು. ಕೊನೆಯದಿನದವರೆಗೂ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. 2018ರ ನವೆಂಬರ್​ 24ರಂದು ಅವರು ಮೃತಪಟ್ಟ ನಂತರ ಇಡೀ ಚಿತ್ರರಂಗ ಕಂಬನಿ ಮಿಡಿದಿತ್ತು. ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿತ್ತು.

ಇದನ್ನೂ ಓದಿ: ಅಂಬರೀಷ್ ಮೃತಪಟ್ಟಾಗ ಊಟ ಬಿಟ್ಟಿದ್ದ ಅವರ ಮನೆಯ ಪ್ರೀತಿಯ ಶ್ವಾನ ಕನ್ವರ್‌ ನಿಧನ

Published On - 6:03 pm, Mon, 24 May 21

Follow Us
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?