Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪ್ಪಿ ಫೌಂಡೇಶನ್​ಗೆ ಯಾರೂ ದೇಣಿಗೆ ಕೊಡಬೇಡಿ’; ಸ್ವತಃ ಉಪೇಂದ್ರ ಈ ರೀತಿ ಹೇಳಲು ಕಾರಣವೇನು?

Uppi Charitable Foundation: ಒಂದು ಒಳ್ಳೆಯ ಉದ್ದೇಶದಿಂದಲೇ ಉಪೇಂದ್ರ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಜನರು ಇನ್ಮುಂದೆ ಉಪ್ಪಿ ಚಾರಿಟೇಬಲ್​ ಫೌಂಡೇಶನ್​ಗೆ ದೇಣಿಗೆ ನೀಡಬಾರದು ಎಂದು ಅವರು ಹೇಳಿದ್ದಾರೆ.

‘ಉಪ್ಪಿ ಫೌಂಡೇಶನ್​ಗೆ ಯಾರೂ ದೇಣಿಗೆ ಕೊಡಬೇಡಿ’; ಸ್ವತಃ ಉಪೇಂದ್ರ ಈ ರೀತಿ ಹೇಳಲು ಕಾರಣವೇನು?
ಉಪೇಂದ್ರ
Follow us
ಮದನ್​ ಕುಮಾರ್​
| Updated By: Digi Tech Desk

Updated on:Jun 04, 2021 | 4:49 PM

ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆದಾಗಿನಿಂದಲೂ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್​ ಜಾರಿಯಾದ ಪರಿಣಾಮ ಬಹುತೇಕರಿಗೆ ನಿರುದ್ಯೋಗ ಕಾಡುತ್ತಿದೆ. ಇಂಥ ಕಠಿಣ ಸಂದರ್ಭದಲ್ಲಿ ಹೊಟ್ಟೆಪಾಡು ನಡೆಯುವುದು ಕಷ್ಟ. ಕುಟುಂಬದವರನ್ನು ನೋಡಿಕೊಳ್ಳುವುದು ಕೂಡ ಸುಲಭವಲ್ಲ. ಅದನ್ನು ಮನಗಂಡಿರುವ ಉಪೇಂದ್ರ ಅವರು ಅನೇಕರಿಗೆ ನೆರವು ನೀಡಲು ಮುಂದಾದರು. ಉಪ್ಪಿ ಕೆಲಸಕ್ಕೆ ಕೈ ಜೋಡಿಸಿದ ಅನೇಕರು ದೇಣಿಗೆ ನೀಡಿದರು. ದಿನಸಿ, ತರಕಾರಿಗಳನ್ನೂ ತಂದುಕೊಟ್ಟರು. ಅದನ್ನೆಲ್ಲ ಅಗತ್ಯ ಇರುವವರಿಗೆ ಉಪೇಂದ್ರ ವಿತರಿಸಿದರು. ಆದರೆ ಇನ್ಮುಂದೆ ಯಾರಿಂದಲೂ ದೇಣಿಗೆ ಪಡೆಯಬಾರದು ಎಂದು ಉಪೇಂದ್ರ ನಿರ್ಧರಿಸಿದ್ದಾರೆ.

ಈ ಬಗ್ಗೆ ಸ್ವತಃ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಈ ರೀತಿ ಹೇಳುವುದರ ಹಿಂದೆ ಒಂದು ಉದ್ದೇಶ ಕೂಡ ಇದೆ. ಜನರು ಉಪ್ಪಿ ಫೌಂಡೇಶನ್​ಗೆ ದೇಣಿಗೆ ನೀಡುವ ಬದಲು ನೇರವಾಗಿ ತಮ್ಮ ಸುತ್ತಮುತ್ತಲಿನ ಜನರಿಗೆ ಸಹಾಯ ಮಾಡಲಿ ಎಂಬುದು ‘ರಿಯಲ್​ ಸ್ಟಾರ್​’ ಆಶಯ. ಹಾಗಾಗಿ ಅವರು ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ಅನೇಕ ಸೆಲೆಬ್ರಿಟಿಗಳು ಮತ್ತು ಜನಸಾಮಾನ್ಯರು ಉಪೇಂದ್ರ ಅವರಿಗೆ ದೇಣಿಗೆ ನೀಡಿದ್ದರು.

‘ಇಲ್ಲಿಯವರೆಗೂ ನಾವು ಯಾರನ್ನೂ ಏನೂ ಕೇಳದಿದ್ದರೂ ತುಂಬಾ ಹೃದಯವಂತರು ನಮ್ಮ ಮೂಲಕ ವಿತರಣೆಯಾಗಲೆಂದು ದಿನಸಿ, ಹಣ್ಣು, ತರಕಾರಿಗಳು ಮುಂತಾದವುಗಳನ್ನು ಕೊಟ್ಟಿದ್ದಾರೆ. ನಮ್ಮ ಉಪ್ಪಿ ಫೌಂಡೇಶನ್ ಚಾರಿಟಬಲ್ ಟ್ರಸ್ಟ್​ಗೆ ಧನ ಸಹಾಯವನ್ನೂ ಮಾಡಿದ್ದಾರೆ. ಅವುಗಳೆಲ್ಲವನ್ನೂ ಸೂಕ್ತವಾಗಿ ಬೇರೆ ಬೇರೆ ಕಡೆ ಸಂಕಷ್ಟದಲ್ಲಿರುವವರಿಗೆ ವಿತರಿಸಲಾಗಿದೆ, ಇನ್ನೂ ವಿತರಿಸಲಾಗುತ್ತಿದೆ. ಸಹೃದಯತೆ ಮೆರೆದಂತಹ ತಮ್ಮೆಲ್ಲರಿಗೂ ಅನಂತಾನಂತ ಧನ್ಯವಾದಗಳು’ ಎಂದು ಉಪೇಂದ್ರ ತಿಳಿಸಿದ್ದಾರೆ.

‘ಇನ್ನು ಮುಂದೆ ತಾವುಗಳು ಯಾರಿಗಾದರೂ ಸಹಾಯ ಮಾಡಬೇಕೆಂದರೆ ನಿಮ್ಮ ಸುತ್ತಮುತ್ತ ಸಂಕಷ್ಟದಲ್ಲಿ ಇರುವವರನ್ನು ಗುರುತಿಸಿ ನೀವೇ ನೇರವಾಗಿ ಸಹಾಯ ಮಾಡಿ. ಉಪ್ಪಿ ಫೌಂಡೇಶನ್​​ಗೆ ಹಣ ಮತ್ತು ಯಾವುದೇ ಕೊಡುಗೆಗಳನ್ನು ಇನ್ನು ಮುಂದೆ ನಾವು ಸ್ವೀಕರಿಸುವುದನ್ನು ನಿಲ್ಲಿಸುತ್ತಿದ್ದೇವೆ. ಇಲ್ಲಿಯವರೆಗೂ ಉಪ್ಪಿ ಫೌಂಡೇಶನ್​ಗೆ ಉಪೇಂದ್ರರವರ ಹಣ, ನಿಮ್ಮೆಲ್ಲರಿಂದ ಬಂದಂತಹ ಹಣ ಅದರ ಖರ್ಚು ಮತ್ತು ಎಲ್ಲಾ ಅಕೌಂಟ್ಸ್ ಸ್ಟೇಟ್ಮೆಂಟ್ಸ್ ಮಾಹಿತಿಗಳನ್ನು ಸದ್ಯದಲ್ಲೇ ಬಹಿರಂಗ ಪಡಿಸುತ್ತೇವೆ’ ಎಂದು ಉಪ್ಪಿ ಫೌಂಡೇಶನ್​ ಪರವಾಗಿ ಉಪೇಂದ್ರ ಅವರು ಮಾಹಿತಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಉಪೇಂದ್ರ ರೆಸಾರ್ಟ್​ ಕಟ್ಟಿದ್ದು ರೈತರ ಭೂಮಿಯಲ್ಲಾ? ಆರೋಪಕ್ಕೆ ರಿಯಲ್ ಸ್ಟಾರ್​ ಖಡಕ್​ ಉತ್ತರ

ರಾಕಿಂಗ್​ ಸ್ಟಾರ್​ ಯಶ್​ ಮಾಡಿದ ಸಹಾಯದ ಬಗ್ಗೆ ರಿಯಲ್​ ಸ್ಟಾರ್​ ಉಪೇಂದ್ರ ಹೇಳಿದ್ದೇನು?

Published On - 3:41 pm, Fri, 4 June 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!