AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪ್ಪಿ ಫೌಂಡೇಶನ್​ಗೆ ಯಾರೂ ದೇಣಿಗೆ ಕೊಡಬೇಡಿ’; ಸ್ವತಃ ಉಪೇಂದ್ರ ಈ ರೀತಿ ಹೇಳಲು ಕಾರಣವೇನು?

Uppi Charitable Foundation: ಒಂದು ಒಳ್ಳೆಯ ಉದ್ದೇಶದಿಂದಲೇ ಉಪೇಂದ್ರ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಜನರು ಇನ್ಮುಂದೆ ಉಪ್ಪಿ ಚಾರಿಟೇಬಲ್​ ಫೌಂಡೇಶನ್​ಗೆ ದೇಣಿಗೆ ನೀಡಬಾರದು ಎಂದು ಅವರು ಹೇಳಿದ್ದಾರೆ.

‘ಉಪ್ಪಿ ಫೌಂಡೇಶನ್​ಗೆ ಯಾರೂ ದೇಣಿಗೆ ಕೊಡಬೇಡಿ’; ಸ್ವತಃ ಉಪೇಂದ್ರ ಈ ರೀತಿ ಹೇಳಲು ಕಾರಣವೇನು?
ಉಪೇಂದ್ರ
ಮದನ್​ ಕುಮಾರ್​
| Edited By: |

Updated on:Jun 04, 2021 | 4:49 PM

Share

ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆದಾಗಿನಿಂದಲೂ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್​ ಜಾರಿಯಾದ ಪರಿಣಾಮ ಬಹುತೇಕರಿಗೆ ನಿರುದ್ಯೋಗ ಕಾಡುತ್ತಿದೆ. ಇಂಥ ಕಠಿಣ ಸಂದರ್ಭದಲ್ಲಿ ಹೊಟ್ಟೆಪಾಡು ನಡೆಯುವುದು ಕಷ್ಟ. ಕುಟುಂಬದವರನ್ನು ನೋಡಿಕೊಳ್ಳುವುದು ಕೂಡ ಸುಲಭವಲ್ಲ. ಅದನ್ನು ಮನಗಂಡಿರುವ ಉಪೇಂದ್ರ ಅವರು ಅನೇಕರಿಗೆ ನೆರವು ನೀಡಲು ಮುಂದಾದರು. ಉಪ್ಪಿ ಕೆಲಸಕ್ಕೆ ಕೈ ಜೋಡಿಸಿದ ಅನೇಕರು ದೇಣಿಗೆ ನೀಡಿದರು. ದಿನಸಿ, ತರಕಾರಿಗಳನ್ನೂ ತಂದುಕೊಟ್ಟರು. ಅದನ್ನೆಲ್ಲ ಅಗತ್ಯ ಇರುವವರಿಗೆ ಉಪೇಂದ್ರ ವಿತರಿಸಿದರು. ಆದರೆ ಇನ್ಮುಂದೆ ಯಾರಿಂದಲೂ ದೇಣಿಗೆ ಪಡೆಯಬಾರದು ಎಂದು ಉಪೇಂದ್ರ ನಿರ್ಧರಿಸಿದ್ದಾರೆ.

ಈ ಬಗ್ಗೆ ಸ್ವತಃ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಈ ರೀತಿ ಹೇಳುವುದರ ಹಿಂದೆ ಒಂದು ಉದ್ದೇಶ ಕೂಡ ಇದೆ. ಜನರು ಉಪ್ಪಿ ಫೌಂಡೇಶನ್​ಗೆ ದೇಣಿಗೆ ನೀಡುವ ಬದಲು ನೇರವಾಗಿ ತಮ್ಮ ಸುತ್ತಮುತ್ತಲಿನ ಜನರಿಗೆ ಸಹಾಯ ಮಾಡಲಿ ಎಂಬುದು ‘ರಿಯಲ್​ ಸ್ಟಾರ್​’ ಆಶಯ. ಹಾಗಾಗಿ ಅವರು ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ಅನೇಕ ಸೆಲೆಬ್ರಿಟಿಗಳು ಮತ್ತು ಜನಸಾಮಾನ್ಯರು ಉಪೇಂದ್ರ ಅವರಿಗೆ ದೇಣಿಗೆ ನೀಡಿದ್ದರು.

‘ಇಲ್ಲಿಯವರೆಗೂ ನಾವು ಯಾರನ್ನೂ ಏನೂ ಕೇಳದಿದ್ದರೂ ತುಂಬಾ ಹೃದಯವಂತರು ನಮ್ಮ ಮೂಲಕ ವಿತರಣೆಯಾಗಲೆಂದು ದಿನಸಿ, ಹಣ್ಣು, ತರಕಾರಿಗಳು ಮುಂತಾದವುಗಳನ್ನು ಕೊಟ್ಟಿದ್ದಾರೆ. ನಮ್ಮ ಉಪ್ಪಿ ಫೌಂಡೇಶನ್ ಚಾರಿಟಬಲ್ ಟ್ರಸ್ಟ್​ಗೆ ಧನ ಸಹಾಯವನ್ನೂ ಮಾಡಿದ್ದಾರೆ. ಅವುಗಳೆಲ್ಲವನ್ನೂ ಸೂಕ್ತವಾಗಿ ಬೇರೆ ಬೇರೆ ಕಡೆ ಸಂಕಷ್ಟದಲ್ಲಿರುವವರಿಗೆ ವಿತರಿಸಲಾಗಿದೆ, ಇನ್ನೂ ವಿತರಿಸಲಾಗುತ್ತಿದೆ. ಸಹೃದಯತೆ ಮೆರೆದಂತಹ ತಮ್ಮೆಲ್ಲರಿಗೂ ಅನಂತಾನಂತ ಧನ್ಯವಾದಗಳು’ ಎಂದು ಉಪೇಂದ್ರ ತಿಳಿಸಿದ್ದಾರೆ.

‘ಇನ್ನು ಮುಂದೆ ತಾವುಗಳು ಯಾರಿಗಾದರೂ ಸಹಾಯ ಮಾಡಬೇಕೆಂದರೆ ನಿಮ್ಮ ಸುತ್ತಮುತ್ತ ಸಂಕಷ್ಟದಲ್ಲಿ ಇರುವವರನ್ನು ಗುರುತಿಸಿ ನೀವೇ ನೇರವಾಗಿ ಸಹಾಯ ಮಾಡಿ. ಉಪ್ಪಿ ಫೌಂಡೇಶನ್​​ಗೆ ಹಣ ಮತ್ತು ಯಾವುದೇ ಕೊಡುಗೆಗಳನ್ನು ಇನ್ನು ಮುಂದೆ ನಾವು ಸ್ವೀಕರಿಸುವುದನ್ನು ನಿಲ್ಲಿಸುತ್ತಿದ್ದೇವೆ. ಇಲ್ಲಿಯವರೆಗೂ ಉಪ್ಪಿ ಫೌಂಡೇಶನ್​ಗೆ ಉಪೇಂದ್ರರವರ ಹಣ, ನಿಮ್ಮೆಲ್ಲರಿಂದ ಬಂದಂತಹ ಹಣ ಅದರ ಖರ್ಚು ಮತ್ತು ಎಲ್ಲಾ ಅಕೌಂಟ್ಸ್ ಸ್ಟೇಟ್ಮೆಂಟ್ಸ್ ಮಾಹಿತಿಗಳನ್ನು ಸದ್ಯದಲ್ಲೇ ಬಹಿರಂಗ ಪಡಿಸುತ್ತೇವೆ’ ಎಂದು ಉಪ್ಪಿ ಫೌಂಡೇಶನ್​ ಪರವಾಗಿ ಉಪೇಂದ್ರ ಅವರು ಮಾಹಿತಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಉಪೇಂದ್ರ ರೆಸಾರ್ಟ್​ ಕಟ್ಟಿದ್ದು ರೈತರ ಭೂಮಿಯಲ್ಲಾ? ಆರೋಪಕ್ಕೆ ರಿಯಲ್ ಸ್ಟಾರ್​ ಖಡಕ್​ ಉತ್ತರ

ರಾಕಿಂಗ್​ ಸ್ಟಾರ್​ ಯಶ್​ ಮಾಡಿದ ಸಹಾಯದ ಬಗ್ಗೆ ರಿಯಲ್​ ಸ್ಟಾರ್​ ಉಪೇಂದ್ರ ಹೇಳಿದ್ದೇನು?

Published On - 3:41 pm, Fri, 4 June 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ