AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ

ನಟ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಆ ಪ್ರಯುಕ್ತ ಅವರು ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ವಿಶೇಷ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇದು ‘ಯುಐ’ ಚಿತ್ರಕ್ಕೆ ಸಂಬಂಧಿಸಿದ ಸುದ್ದಿಗೋಷ್ಠಿ ಆಗಿತ್ತು. ಅವರು ಸಿನಿಮಾ ಬಗ್ಗೆ ಕೊಟ್ಟ ಮಾಹಿತಿ ಇಲ್ಲಿದೆ.

‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Sep 18, 2024 | 1:06 PM

Share

ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇಂದು (ಸೆಪ್ಟೆಂಬರ್ 18) ಸಿನಿಮಾ ಬಗ್ಗೆ ಮಾಹಿತಿ ನೀಡಲು ತಂಡ ಸುದ್ದಿಗೋಷ್ಠಿ ಕರೆದಿತ್ತು. ಅಕ್ಟೋಬರ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಂಡ ಹೇಳಿದೆ. ಆದರೆ, ಅಕ್ಟೋಬರ್​ನಲ್ಲಿ ಯಾವ ದಿನಾಂಕಕ್ಕೆ ಚಿತ್ರ ಬಿಡುಗಡೆ ಆಗಲಿದೆ ಎನ್ನುವ ಕುರಿತು ಮಾಹಿತಿ ಸಿಕ್ಕಿಲ್ಲ. ಇದಕ್ಕಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲು ತಂಡ ನಿರ್ಧರಿಸಿದೆ.

‘ಯುಐ’ ಸಿನಿಮಾದ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಉಪೇಂದ್ರ ಬರ್ತ್​​ಡೇ ದಿನವೇ ಆ ಬಗ್ಗೆ ಮಾಹಿತಿ ಸಿಗಬಹುದು ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಮುಂದಿನ ವಾರ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡೋದಾಗಿ ತಂಡ ಹೇಳಿಕೊಂಡಿದೆ. ಈ ಮಧ್ಯೆ ಉಪೇಂದ್ರ ಬಾಂಬ್ ಹಾಕಿದ್ದಾರೆ. ‘ಅಕ್ಟೋಬರ್​ ರಿಲೀಸ್ ಆಗಲಿದೆ ಎಂದು ಹೇಳಿದ್ದೇವೆ. ಆದರು ಎನು ಎಂದು ಹೇಳಿದ್ದೀವಾ’ ಎಂದು ಶಾಕ್ ಕೊಟ್ಟರು ಉಪೇಂದ್ರ.

‘ಮೇಕಿಂಗ್ ಸ್ಟೈಲ್ ಬೇರೆ ಆಗಿದೆ. ರಾಜ್ಯದಲ್ಲಿ ಮಾತ್ರ ರಿಲೀಸ್ ಮಾಡುವ ಆಲೋಚನೆ ಇತ್ತು. ಆ ಬಳಿಕ ಸಿನಿಮಾ ಪ್ಯಾನ್ ಇಂಡಿಯಾ ಆಯಿತು. ಜನರು ಅತೀ ಬುದ್ಧಿವಂತರು ಎಂಬ ನಂಬಿಕೆ ಮೇಲೆ ಈ ಸಿನಿಮಾ ಮಾಡಿದ್ದೇವೆ. ಅಭಿಮಾನಿಗಳು ಯೆಸ್ ಎಂದರೆ ಸಿನಿಮಾ ಗೆದ್ದಂಗೆ. ಎಲ್ಲರೂ ಸಿನಿಮಾ ಮೇಕರ್​ಗಳಾಗಿದ್ದಾರೆ. ಹೀಗಾಗಿ, ಒಳ್ಳೆಯದನ್ನು ನೀಡಲು ನಾವು ಪ್ರಯತ್ನಿಸಬೇಕು’ ಎಂದಿದ್ದಾರೆ ಉಪ್ಪಿ.

ಇದನ್ನೂ ಓದಿ: ‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

‘ಸಿನಿಮಾ ನಿರ್ದೇಶನ ಅನ್ನೋದು ದೊಡ್ಡ ಫೈಟ್. ಪ್ರತಿ ಒಂದು ಹಂತದಲ್ಲೂ ಫೈಟ್ ಮಾಡಿ ಸಿನಿಮಾ ತಲುಪಿಸಬೇಕು. ಹಲವು ಕಾರಣದಿಂದ ಸಿನಿಮಾ ವಿಳಂಬ ಆಗಿದೆ. ಯೂಟ್ಯೂಬ್​ನಲ್ಲಿ ಲೈವ್ ಹೋಗುವ ಸ್ಪೀಡ್​ನಲ್ಲಿ ಸಿನಿಮಾ ಮಾಡೋಕೆ ಆಗಲ್ಲ. ಯುಐ ಸಿನಿಮಾದಲ್ಲಿ ಇರೋದು ಲಾಜಿಕಲ್ ಹಾಗೂ ಸೈಕಲಾಜಿಕಲ್ ಕಲ್ಕಿ’ ಎಂದರು ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ