AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ

ನಟ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಆ ಪ್ರಯುಕ್ತ ಅವರು ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ವಿಶೇಷ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇದು ‘ಯುಐ’ ಚಿತ್ರಕ್ಕೆ ಸಂಬಂಧಿಸಿದ ಸುದ್ದಿಗೋಷ್ಠಿ ಆಗಿತ್ತು. ಅವರು ಸಿನಿಮಾ ಬಗ್ಗೆ ಕೊಟ್ಟ ಮಾಹಿತಿ ಇಲ್ಲಿದೆ.

‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Sep 18, 2024 | 1:06 PM

Share

ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇಂದು (ಸೆಪ್ಟೆಂಬರ್ 18) ಸಿನಿಮಾ ಬಗ್ಗೆ ಮಾಹಿತಿ ನೀಡಲು ತಂಡ ಸುದ್ದಿಗೋಷ್ಠಿ ಕರೆದಿತ್ತು. ಅಕ್ಟೋಬರ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಂಡ ಹೇಳಿದೆ. ಆದರೆ, ಅಕ್ಟೋಬರ್​ನಲ್ಲಿ ಯಾವ ದಿನಾಂಕಕ್ಕೆ ಚಿತ್ರ ಬಿಡುಗಡೆ ಆಗಲಿದೆ ಎನ್ನುವ ಕುರಿತು ಮಾಹಿತಿ ಸಿಕ್ಕಿಲ್ಲ. ಇದಕ್ಕಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲು ತಂಡ ನಿರ್ಧರಿಸಿದೆ.

‘ಯುಐ’ ಸಿನಿಮಾದ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಉಪೇಂದ್ರ ಬರ್ತ್​​ಡೇ ದಿನವೇ ಆ ಬಗ್ಗೆ ಮಾಹಿತಿ ಸಿಗಬಹುದು ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಮುಂದಿನ ವಾರ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡೋದಾಗಿ ತಂಡ ಹೇಳಿಕೊಂಡಿದೆ. ಈ ಮಧ್ಯೆ ಉಪೇಂದ್ರ ಬಾಂಬ್ ಹಾಕಿದ್ದಾರೆ. ‘ಅಕ್ಟೋಬರ್​ ರಿಲೀಸ್ ಆಗಲಿದೆ ಎಂದು ಹೇಳಿದ್ದೇವೆ. ಆದರು ಎನು ಎಂದು ಹೇಳಿದ್ದೀವಾ’ ಎಂದು ಶಾಕ್ ಕೊಟ್ಟರು ಉಪೇಂದ್ರ.

‘ಮೇಕಿಂಗ್ ಸ್ಟೈಲ್ ಬೇರೆ ಆಗಿದೆ. ರಾಜ್ಯದಲ್ಲಿ ಮಾತ್ರ ರಿಲೀಸ್ ಮಾಡುವ ಆಲೋಚನೆ ಇತ್ತು. ಆ ಬಳಿಕ ಸಿನಿಮಾ ಪ್ಯಾನ್ ಇಂಡಿಯಾ ಆಯಿತು. ಜನರು ಅತೀ ಬುದ್ಧಿವಂತರು ಎಂಬ ನಂಬಿಕೆ ಮೇಲೆ ಈ ಸಿನಿಮಾ ಮಾಡಿದ್ದೇವೆ. ಅಭಿಮಾನಿಗಳು ಯೆಸ್ ಎಂದರೆ ಸಿನಿಮಾ ಗೆದ್ದಂಗೆ. ಎಲ್ಲರೂ ಸಿನಿಮಾ ಮೇಕರ್​ಗಳಾಗಿದ್ದಾರೆ. ಹೀಗಾಗಿ, ಒಳ್ಳೆಯದನ್ನು ನೀಡಲು ನಾವು ಪ್ರಯತ್ನಿಸಬೇಕು’ ಎಂದಿದ್ದಾರೆ ಉಪ್ಪಿ.

ಇದನ್ನೂ ಓದಿ: ‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

‘ಸಿನಿಮಾ ನಿರ್ದೇಶನ ಅನ್ನೋದು ದೊಡ್ಡ ಫೈಟ್. ಪ್ರತಿ ಒಂದು ಹಂತದಲ್ಲೂ ಫೈಟ್ ಮಾಡಿ ಸಿನಿಮಾ ತಲುಪಿಸಬೇಕು. ಹಲವು ಕಾರಣದಿಂದ ಸಿನಿಮಾ ವಿಳಂಬ ಆಗಿದೆ. ಯೂಟ್ಯೂಬ್​ನಲ್ಲಿ ಲೈವ್ ಹೋಗುವ ಸ್ಪೀಡ್​ನಲ್ಲಿ ಸಿನಿಮಾ ಮಾಡೋಕೆ ಆಗಲ್ಲ. ಯುಐ ಸಿನಿಮಾದಲ್ಲಿ ಇರೋದು ಲಾಜಿಕಲ್ ಹಾಗೂ ಸೈಕಲಾಜಿಕಲ್ ಕಲ್ಕಿ’ ಎಂದರು ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು