‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ

ನಟ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಆ ಪ್ರಯುಕ್ತ ಅವರು ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ವಿಶೇಷ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇದು ‘ಯುಐ’ ಚಿತ್ರಕ್ಕೆ ಸಂಬಂಧಿಸಿದ ಸುದ್ದಿಗೋಷ್ಠಿ ಆಗಿತ್ತು. ಅವರು ಸಿನಿಮಾ ಬಗ್ಗೆ ಕೊಟ್ಟ ಮಾಹಿತಿ ಇಲ್ಲಿದೆ.

‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ
ಉಪೇಂದ್ರ
Follow us
|

Updated on: Sep 18, 2024 | 1:06 PM

ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇಂದು (ಸೆಪ್ಟೆಂಬರ್ 18) ಸಿನಿಮಾ ಬಗ್ಗೆ ಮಾಹಿತಿ ನೀಡಲು ತಂಡ ಸುದ್ದಿಗೋಷ್ಠಿ ಕರೆದಿತ್ತು. ಅಕ್ಟೋಬರ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಂಡ ಹೇಳಿದೆ. ಆದರೆ, ಅಕ್ಟೋಬರ್​ನಲ್ಲಿ ಯಾವ ದಿನಾಂಕಕ್ಕೆ ಚಿತ್ರ ಬಿಡುಗಡೆ ಆಗಲಿದೆ ಎನ್ನುವ ಕುರಿತು ಮಾಹಿತಿ ಸಿಕ್ಕಿಲ್ಲ. ಇದಕ್ಕಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲು ತಂಡ ನಿರ್ಧರಿಸಿದೆ.

‘ಯುಐ’ ಸಿನಿಮಾದ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಉಪೇಂದ್ರ ಬರ್ತ್​​ಡೇ ದಿನವೇ ಆ ಬಗ್ಗೆ ಮಾಹಿತಿ ಸಿಗಬಹುದು ಎಂದು ಫ್ಯಾನ್ಸ್ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಮುಂದಿನ ವಾರ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡೋದಾಗಿ ತಂಡ ಹೇಳಿಕೊಂಡಿದೆ. ಈ ಮಧ್ಯೆ ಉಪೇಂದ್ರ ಬಾಂಬ್ ಹಾಕಿದ್ದಾರೆ. ‘ಅಕ್ಟೋಬರ್​ ರಿಲೀಸ್ ಆಗಲಿದೆ ಎಂದು ಹೇಳಿದ್ದೇವೆ. ಆದರು ಎನು ಎಂದು ಹೇಳಿದ್ದೀವಾ’ ಎಂದು ಶಾಕ್ ಕೊಟ್ಟರು ಉಪೇಂದ್ರ.

‘ಮೇಕಿಂಗ್ ಸ್ಟೈಲ್ ಬೇರೆ ಆಗಿದೆ. ರಾಜ್ಯದಲ್ಲಿ ಮಾತ್ರ ರಿಲೀಸ್ ಮಾಡುವ ಆಲೋಚನೆ ಇತ್ತು. ಆ ಬಳಿಕ ಸಿನಿಮಾ ಪ್ಯಾನ್ ಇಂಡಿಯಾ ಆಯಿತು. ಜನರು ಅತೀ ಬುದ್ಧಿವಂತರು ಎಂಬ ನಂಬಿಕೆ ಮೇಲೆ ಈ ಸಿನಿಮಾ ಮಾಡಿದ್ದೇವೆ. ಅಭಿಮಾನಿಗಳು ಯೆಸ್ ಎಂದರೆ ಸಿನಿಮಾ ಗೆದ್ದಂಗೆ. ಎಲ್ಲರೂ ಸಿನಿಮಾ ಮೇಕರ್​ಗಳಾಗಿದ್ದಾರೆ. ಹೀಗಾಗಿ, ಒಳ್ಳೆಯದನ್ನು ನೀಡಲು ನಾವು ಪ್ರಯತ್ನಿಸಬೇಕು’ ಎಂದಿದ್ದಾರೆ ಉಪ್ಪಿ.

ಇದನ್ನೂ ಓದಿ: ‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

‘ಸಿನಿಮಾ ನಿರ್ದೇಶನ ಅನ್ನೋದು ದೊಡ್ಡ ಫೈಟ್. ಪ್ರತಿ ಒಂದು ಹಂತದಲ್ಲೂ ಫೈಟ್ ಮಾಡಿ ಸಿನಿಮಾ ತಲುಪಿಸಬೇಕು. ಹಲವು ಕಾರಣದಿಂದ ಸಿನಿಮಾ ವಿಳಂಬ ಆಗಿದೆ. ಯೂಟ್ಯೂಬ್​ನಲ್ಲಿ ಲೈವ್ ಹೋಗುವ ಸ್ಪೀಡ್​ನಲ್ಲಿ ಸಿನಿಮಾ ಮಾಡೋಕೆ ಆಗಲ್ಲ. ಯುಐ ಸಿನಿಮಾದಲ್ಲಿ ಇರೋದು ಲಾಜಿಕಲ್ ಹಾಗೂ ಸೈಕಲಾಜಿಕಲ್ ಕಲ್ಕಿ’ ಎಂದರು ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ