AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಯಕವೇ ಕೈಲಾಸ; ವೀಕೆಂಡ್​ನಲ್ಲಿ ರೈತನಾದ ನಟ ಉಪೇಂದ್ರ

ಗುದ್ದಲಿ ಹಿಡಿದು ಉಪೇಂದ್ರ ಕೃಷಿ ಮಾಡುತ್ತಿದ್ದಾರೆ. ನೆಟ್ಟ ತೆಂಗಿನ ಗಿಡಕ್ಕೆ ಮಣ್ಣು ಹಾಕುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಾಯಕವೇ ಕೈಲಾಸ; ವೀಕೆಂಡ್​ನಲ್ಲಿ ರೈತನಾದ ನಟ ಉಪೇಂದ್ರ
ಕೃಷಿ ಕೆಲಸದಲ್ಲಿ ಬ್ಯುಸಿಯಾಗಿರುವ ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Apr 25, 2021 | 7:17 PM

Share

ನಟ ಉಪೇಂದ್ರ ಸಿನಿಮಾ ಜತೆಗೆ ರಾಜಕೀಯದಲ್ಲೂ ಗುರುತಿಸಿಕೊಂಡವರು. ಪ್ರಜಾಕೀಯ ಪಕ್ಷ ಸ್ಥಾಪಿಸಿರುವ ಉಪೇಂದ್ರ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕುತ್ತಿದ್ದಾರೆ. ಇದರ ಜತೆಗೆ ಉಪೇಂದ್ರ ಕೃಷಿ ಕೆಲಸದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗ ವೀಕೆಂಡ್​ ಕರ್ಫ್ಯೂ ವೇಳೆ ಅವರು ಕೃಷಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ದೇಶದಲ್ಲಿ ಮಿತಿ ಮೀರಿ ಹರಡುತ್ತಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ರಾಜ್ಯದಲ್ಲಿ ನಿತ್ಯ 20 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ವರದಿ ಆಗುತ್ತಿವೆ. ಹೀಗಾಗಿ, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹರಸಾಹಸಪಡುತ್ತಿದೆ. ಶನಿವಾರ ಭಾನುವಾರ ಕರ್ಫ್ಯೂ ಹೇರಿದೆ. ಈ ಅವಧಿಯಲ್ಲಿ ಮನೆಯಲ್ಲೇ ಇದ್ದ ಉಪೇಂದ್ರ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.

ಗುದ್ದಲಿ ಹಿಡಿದು ಉಪೇಂದ್ರ ಕೃಷಿ ಮಾಡುತ್ತಿದ್ದಾರೆ. ನೆಟ್ಟ ತೆಂಗಿನ ಗಿಡಕ್ಕೆ ಮಣ್ಣು ಹಾಕುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕಾಯಕವೇ ಕೈಲಾಸ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಉಪೇಂದ್ರ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಕಬ್ಜಾ, ಬುದ್ಧಿವಂತ-2 ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗಾಗಲೇ ಕಬ್ಜಾ ಚಿತ್ರದ ಫಸ್ಟ್​ ಪೋಸ್ಟರ್​ ರಿಲೀಸ್​ ಆಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇನ್ನು, ತೆಲುಗಿನ ಘನಿ ಸಿನಿಮಾದಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಕ್ಸರ್​ ಆಗಿ ಉಪೇಂದ್ರ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಬಾಕ್ಸಿಂಗ್​ ಫೋಟೋ ಕೂಡ ಹಂಚಿಕೊಂಡಿದ್ದರು.

ಇದನ್ನೂ ಓದಿ: ತೆಲುಗು ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಜತೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಉಪೇಂದ್ರ?

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Published On - 7:13 pm, Sun, 25 April 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್