AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ‘ಬುದ್ಧಿವಂತ 2’ ರಿಲೀಸ್​ ದಿನಾಂಕ ಘೋಷಿಸಿದ ಚಿತ್ರತಂಡ; ಸೆಪ್ಟೆಂಬರ್​ 15ಕ್ಕೆ ಬಹುನಿರೀಕ್ಷಿತ ಚಿತ್ರದ ಬಿಡುಗಡೆ

Buddhivantha 2: ಸೆಪ್ಟೆಂಬರ್ 18ರಂದು ಉಪೇಂದ್ರ ಅವರ ಹುಟ್ಟುಹಬ್ಬ ಇದೆ. ಅದಕ್ಕೂ ಮೂರು ದಿನ ಮುಂಚೆ ‘ಬುದ್ಧಿವಂತ 2’ ಸಿನಿಮಾ ರಿಲೀಸ್​ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ಮೂಡಿಸಿದೆ.

Upendra: ‘ಬುದ್ಧಿವಂತ 2’ ರಿಲೀಸ್​ ದಿನಾಂಕ ಘೋಷಿಸಿದ ಚಿತ್ರತಂಡ; ಸೆಪ್ಟೆಂಬರ್​ 15ಕ್ಕೆ ಬಹುನಿರೀಕ್ಷಿತ ಚಿತ್ರದ ಬಿಡುಗಡೆ
ಉಪೇಂದ್ರ
ಮದನ್​ ಕುಮಾರ್​
|

Updated on: Jul 25, 2023 | 10:46 AM

Share

‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರು ಒಂದಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಜಾಕೀಯದ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅವರು ಸಿನಿಮಾಗಳ ಕಡೆಗೂ ಗಮನ ಹರಿಸಿದ್ದಾರೆ. ‘ಕಬ್ಜ’ ಬಳಿಕ ಉಪೇಂದ್ರ ಅವರನ್ನು ಮತ್ತೆ ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಅಂಥವರಿಗೆಲ್ಲ ಗುಡ್​ ನ್ಯೂಸ್​ ಸಿಕ್ಕಿದೆ. ಉಪೇಂದ್ರ ನಟಿಸಿರುವ ‘ಬುದ್ಧಿವಂತ 2’ (Buddhivantha 2) ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ. ಸೆಪ್ಟೆಂಬರ್​ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪೋಸ್ಟರ್​ಗಳ ಮೂಲಕ ಗಮನ ಸೆಳೆದಿರುವ ‘ಬುದ್ಧಿವಂತ 2’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಉಪೇಂದ್ರ ಅವರಿಗೆ ಜೋಡಿಯಾಗಿ ಸೋನಾಲ್ ಮಾಂಥರೋ ಮತ್ತು ಮೇಘನಾ ರಾಜ್ (Meghana Raj) ನಟಿಸಿದ್ದಾರೆ.

‘ಬುದ್ಧಿವಂತ 2’ ಸಿನಿಮಾ ಬಹಳ ಹಿಂದೆಯೇ ಅನೌನ್ಸ್​ ಆಗಿತ್ತು. ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ವಿಳಂಬ ಆಗಿತ್ತು. ಈ ಸಿನಿಮಾವನ್ನು ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ‘ರಿಲೀಸ್​ ಯಾವಾಗ’ ಎಂದು ಕೇಳುತ್ತಲೇ ಇದ್ದರು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿರುವುದರಿಂದ ಫ್ಯಾನ್ಸ್​ ಖುಷಿಯಾಗಿದ್ದಾರೆ. ಸೆಪ್ಟೆಂಬರ್​ 15ರಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಅಭಿಮಾನಿಗಳಿಗೆ ಡಬಲ್​ ಖುಷಿ ಆಗಿದೆ. ಯಾಕೆಂದರೆ, ಸಿನಿಮಾ ಬಿಡುಗಡೆ ಬೆನ್ನಲ್ಲೇ ಉಪ್ಪಿ ಜನ್ಮದಿನ ಬರಲಿದೆ.

ಇದನ್ನೂ ಓದಿ: ಉಪೇಂದ್ರ ಬಳಿಕ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಕೈ ಹಾಕಿದ ಅಣ್ಣನ ಮಗ ನಿರಂಜನ್

ಗ್ಲಿಂಪ್ಸ್​ ಬಿಡುಗಡೆ ಮಾಡುವ ಮೂಲಕ ‘ಬುದ್ಧಿವಂತ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ತಿಳಿಸಲಾಗಿದೆ. ಸ್ಯಾಂಡಲ್​ವುಡ್​ನಲ್ಲಿ ಉಪೇಂದ್ರ ಅವರು ‘ಬುದ್ಧಿವಂತ’ ಎಂದೇ ಫೇಮಸ್​ ಆಗಿದ್ದಾರೆ. ಸೆಪ್ಟೆಂಬರ್ 18ರಂದು ಅವರ ಹುಟ್ಟುಹಬ್ಬ ಇದೆ. ಪ್ರತಿ ವರ್ಷ ಈ ದಿನವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಉಪ್ಪಿ ಬರ್ತ್​ಡೇ ಬಹಳ ವಿಶೇಷವಾಗಿ ಆಗಲಿದೆ. ‘ಬುದ್ಧಿವಂತ 2’ ಸಿನಿಮಾದ ಜೊತೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಸೆಲೆಬ್ರೇಟ್​ ಮಾಡಲಿದ್ದಾರೆ.

ಇದನ್ನೂ ಓದಿ: Upendra New House: ಉಪೇಂದ್ರ-ಪ್ರಿಯಾಂಕಾ ದಂಪತಿಯ ಹೊಸ ಮನೆ ಹೇಗಿದೆ? ಇಲ್ಲಿದೆ ನೋಡಿ ಫೋಟೋ ಗ್ಯಾಲರಿ

ಜೈದೇವ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗುರುಕಿರಣ್ ಅವರು ಸಂಗೀತ ನೀಡಿದ್ದು, ಎಸ್. ನವೀನ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನ ಮಾಡಿದ್ದಾರೆ. ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ಡಾ. ಟಿ.ಆರ್. ಚಂದ್ರಶೇಖರ್ ಅವರು ‘ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್​ ಮೂಲಕ ‘ಬುದ್ಧಿವಂತ 2’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ಒಂದು ವಿಶೇಷವಾದ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ