AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ‘ಬುದ್ಧಿವಂತ 2’ ರಿಲೀಸ್​ ದಿನಾಂಕ ಘೋಷಿಸಿದ ಚಿತ್ರತಂಡ; ಸೆಪ್ಟೆಂಬರ್​ 15ಕ್ಕೆ ಬಹುನಿರೀಕ್ಷಿತ ಚಿತ್ರದ ಬಿಡುಗಡೆ

Buddhivantha 2: ಸೆಪ್ಟೆಂಬರ್ 18ರಂದು ಉಪೇಂದ್ರ ಅವರ ಹುಟ್ಟುಹಬ್ಬ ಇದೆ. ಅದಕ್ಕೂ ಮೂರು ದಿನ ಮುಂಚೆ ‘ಬುದ್ಧಿವಂತ 2’ ಸಿನಿಮಾ ರಿಲೀಸ್​ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ಮೂಡಿಸಿದೆ.

Upendra: ‘ಬುದ್ಧಿವಂತ 2’ ರಿಲೀಸ್​ ದಿನಾಂಕ ಘೋಷಿಸಿದ ಚಿತ್ರತಂಡ; ಸೆಪ್ಟೆಂಬರ್​ 15ಕ್ಕೆ ಬಹುನಿರೀಕ್ಷಿತ ಚಿತ್ರದ ಬಿಡುಗಡೆ
ಉಪೇಂದ್ರ
ಮದನ್​ ಕುಮಾರ್​
|

Updated on: Jul 25, 2023 | 10:46 AM

Share

‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರು ಒಂದಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಜಾಕೀಯದ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅವರು ಸಿನಿಮಾಗಳ ಕಡೆಗೂ ಗಮನ ಹರಿಸಿದ್ದಾರೆ. ‘ಕಬ್ಜ’ ಬಳಿಕ ಉಪೇಂದ್ರ ಅವರನ್ನು ಮತ್ತೆ ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಅಂಥವರಿಗೆಲ್ಲ ಗುಡ್​ ನ್ಯೂಸ್​ ಸಿಕ್ಕಿದೆ. ಉಪೇಂದ್ರ ನಟಿಸಿರುವ ‘ಬುದ್ಧಿವಂತ 2’ (Buddhivantha 2) ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ. ಸೆಪ್ಟೆಂಬರ್​ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪೋಸ್ಟರ್​ಗಳ ಮೂಲಕ ಗಮನ ಸೆಳೆದಿರುವ ‘ಬುದ್ಧಿವಂತ 2’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಉಪೇಂದ್ರ ಅವರಿಗೆ ಜೋಡಿಯಾಗಿ ಸೋನಾಲ್ ಮಾಂಥರೋ ಮತ್ತು ಮೇಘನಾ ರಾಜ್ (Meghana Raj) ನಟಿಸಿದ್ದಾರೆ.

‘ಬುದ್ಧಿವಂತ 2’ ಸಿನಿಮಾ ಬಹಳ ಹಿಂದೆಯೇ ಅನೌನ್ಸ್​ ಆಗಿತ್ತು. ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ವಿಳಂಬ ಆಗಿತ್ತು. ಈ ಸಿನಿಮಾವನ್ನು ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ‘ರಿಲೀಸ್​ ಯಾವಾಗ’ ಎಂದು ಕೇಳುತ್ತಲೇ ಇದ್ದರು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿರುವುದರಿಂದ ಫ್ಯಾನ್ಸ್​ ಖುಷಿಯಾಗಿದ್ದಾರೆ. ಸೆಪ್ಟೆಂಬರ್​ 15ರಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಅಭಿಮಾನಿಗಳಿಗೆ ಡಬಲ್​ ಖುಷಿ ಆಗಿದೆ. ಯಾಕೆಂದರೆ, ಸಿನಿಮಾ ಬಿಡುಗಡೆ ಬೆನ್ನಲ್ಲೇ ಉಪ್ಪಿ ಜನ್ಮದಿನ ಬರಲಿದೆ.

ಇದನ್ನೂ ಓದಿ: ಉಪೇಂದ್ರ ಬಳಿಕ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಕೈ ಹಾಕಿದ ಅಣ್ಣನ ಮಗ ನಿರಂಜನ್

ಗ್ಲಿಂಪ್ಸ್​ ಬಿಡುಗಡೆ ಮಾಡುವ ಮೂಲಕ ‘ಬುದ್ಧಿವಂತ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ತಿಳಿಸಲಾಗಿದೆ. ಸ್ಯಾಂಡಲ್​ವುಡ್​ನಲ್ಲಿ ಉಪೇಂದ್ರ ಅವರು ‘ಬುದ್ಧಿವಂತ’ ಎಂದೇ ಫೇಮಸ್​ ಆಗಿದ್ದಾರೆ. ಸೆಪ್ಟೆಂಬರ್ 18ರಂದು ಅವರ ಹುಟ್ಟುಹಬ್ಬ ಇದೆ. ಪ್ರತಿ ವರ್ಷ ಈ ದಿನವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಉಪ್ಪಿ ಬರ್ತ್​ಡೇ ಬಹಳ ವಿಶೇಷವಾಗಿ ಆಗಲಿದೆ. ‘ಬುದ್ಧಿವಂತ 2’ ಸಿನಿಮಾದ ಜೊತೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಸೆಲೆಬ್ರೇಟ್​ ಮಾಡಲಿದ್ದಾರೆ.

ಇದನ್ನೂ ಓದಿ: Upendra New House: ಉಪೇಂದ್ರ-ಪ್ರಿಯಾಂಕಾ ದಂಪತಿಯ ಹೊಸ ಮನೆ ಹೇಗಿದೆ? ಇಲ್ಲಿದೆ ನೋಡಿ ಫೋಟೋ ಗ್ಯಾಲರಿ

ಜೈದೇವ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗುರುಕಿರಣ್ ಅವರು ಸಂಗೀತ ನೀಡಿದ್ದು, ಎಸ್. ನವೀನ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನ ಮಾಡಿದ್ದಾರೆ. ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ಡಾ. ಟಿ.ಆರ್. ಚಂದ್ರಶೇಖರ್ ಅವರು ‘ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್​ ಮೂಲಕ ‘ಬುದ್ಧಿವಂತ 2’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ಒಂದು ವಿಶೇಷವಾದ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!