AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budhivanta 2: ‘ಬುದ್ಧಿವಂತ 2’ ಚಿತ್ರದ ಮೂಲಕ ಬರಲಿದ್ದಾರೆ ಉಪೇಂದ್ರ; ಭಿನ್ನ ಗೆಟಪ್​ನಲ್ಲಿ ರಿಯಲ್ ಸ್ಟಾರ್ ಎಂಟ್ರಿ

‘ಬುದ್ಧಿವಂತ 2’ ಚಿತ್ರ ಈ ಮೊದಲು ಅನೌನ್ಸ್ ಆಗಿತ್ತು. ಈಗ ಸಿನಿಮಾ ಯಾವ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನು ತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ.

Budhivanta 2: ‘ಬುದ್ಧಿವಂತ 2’ ಚಿತ್ರದ ಮೂಲಕ ಬರಲಿದ್ದಾರೆ ಉಪೇಂದ್ರ; ಭಿನ್ನ ಗೆಟಪ್​ನಲ್ಲಿ ರಿಯಲ್ ಸ್ಟಾರ್ ಎಂಟ್ರಿ
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:22 PM

Share

ನಟ ಉಪೇಂದ್ರ (Upendra) ಅವರು ಕನ್ನಡ ಚಿತ್ರರಂಗಕ್ಕೆ ಹಲವು ಭಿನ್ನ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಭಿನ್ನ ಗೆಟಪ್​ನಲ್ಲಿ ಬರುತ್ತಾರೆ. ಈಗ ಉಪೇಂದ್ರ ನಟನೆಯ ‘ಬುದ್ಧಿವಂತ 2’ (Budhivanta 2) ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಉಪೇಂದ್ರ ಅವರ ಲುಕ್ ಇದರಲ್ಲಿ ಗಮನ ಸೆಳೆದಿದೆ. ಈ ಸಿನಿಮಾ ಇದೇ ವರ್ಷ ಸೆಪ್ಟೆಂಬರ್​ನಲ್ಲಿ ರಿಲೀಸ್ ಆಗಲಿದೆ ಎಂದು ತಂಡ ತಿಳಿಸಿದೆ. ಈ ವಿಚಾರ ತಿಳಿದು ಉಪ್ಪಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

2008ರಲ್ಲಿ ‘ಬುದ್ಧಿವಂತ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ಹಲವು ಗೆಟಪ್​ಗಳಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದರು. ಪ್ರೇಕ್ಷಕರಿಗೆ ಈ ಚಿತ್ರ ಹೆಚ್ಚು ಇಷ್ಟ ಆಗಿತ್ತು. ಹಿಟ್ ಸಿನಿಮಾಗಳಿಗೆ ಸೀಕ್ವೆಲ್ ಮಾಡೋದು ಸಹಜ. ಅದೇ ರೀತಿ ‘ಬುದ್ಧಿವಂತ 2’ ಚಿತ್ರ ಈ ಮೊದಲು ಅನೌನ್ಸ್ ಆಗಿತ್ತು. ಈಗ ಸಿನಿಮಾ ಯಾವ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನು ತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ.

ಉಪೇಂದ್ರ ಅವರು ಮುಖಕ್ಕೆ ಶೀಲ್ಡ್ ಧರಿಸಿದ್ದಾರೆ. ಅವರ ಕಣ್ಣುಗಳು ಭಯದಿಂದ ಕೂಡಿದೆ. ಕೂದಲು ಕೆದರಿಕೊಂಡಿದೆ. ‘ಬುದ್ಧಿವಂತ 2’ ಟೈಟಲ್ ಬಳಿ ಬೆಂಕಿ ಇದೆ. ಈ ಕಾರಣಕ್ಕೆ ಈ ಶೀರ್ಷಿಕೆ ಹೆಚ್ಚು ಗಮನ ಸೆಳೆಯುತ್ತಿದೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾ ಥಿಯೇಟರ್​ಗೆ ಬರಲಿದೆ ಎಂದು ತಂಡ ಹೇಳಿಕೊಂಡಿದೆ.

ಟಿಆರ್ ಚಂದ್ರಶೇಖರ್ ಅವರು ‘ಬುದ್ಧಿವಂತ 2’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜಯರಾಮ್ ಮಾಧವನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್, ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ ಇತ್ತೀಚೆಗೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿರುವ ಬಗ್ಗೆ ಚಿತ್ರತಂಡ ಹೇಳಿಕೊಂಡಿದೆ. ‘ಯುಐ’ ಚಿತ್ರದಲ್ಲೂ ಉಪೇಂದ್ರ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 1 July 23

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​