AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budhivanta 2: ‘ಬುದ್ಧಿವಂತ 2’ ಚಿತ್ರದ ಮೂಲಕ ಬರಲಿದ್ದಾರೆ ಉಪೇಂದ್ರ; ಭಿನ್ನ ಗೆಟಪ್​ನಲ್ಲಿ ರಿಯಲ್ ಸ್ಟಾರ್ ಎಂಟ್ರಿ

‘ಬುದ್ಧಿವಂತ 2’ ಚಿತ್ರ ಈ ಮೊದಲು ಅನೌನ್ಸ್ ಆಗಿತ್ತು. ಈಗ ಸಿನಿಮಾ ಯಾವ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನು ತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ.

Budhivanta 2: ‘ಬುದ್ಧಿವಂತ 2’ ಚಿತ್ರದ ಮೂಲಕ ಬರಲಿದ್ದಾರೆ ಉಪೇಂದ್ರ; ಭಿನ್ನ ಗೆಟಪ್​ನಲ್ಲಿ ರಿಯಲ್ ಸ್ಟಾರ್ ಎಂಟ್ರಿ
ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:22 PM

ನಟ ಉಪೇಂದ್ರ (Upendra) ಅವರು ಕನ್ನಡ ಚಿತ್ರರಂಗಕ್ಕೆ ಹಲವು ಭಿನ್ನ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಭಿನ್ನ ಗೆಟಪ್​ನಲ್ಲಿ ಬರುತ್ತಾರೆ. ಈಗ ಉಪೇಂದ್ರ ನಟನೆಯ ‘ಬುದ್ಧಿವಂತ 2’ (Budhivanta 2) ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಉಪೇಂದ್ರ ಅವರ ಲುಕ್ ಇದರಲ್ಲಿ ಗಮನ ಸೆಳೆದಿದೆ. ಈ ಸಿನಿಮಾ ಇದೇ ವರ್ಷ ಸೆಪ್ಟೆಂಬರ್​ನಲ್ಲಿ ರಿಲೀಸ್ ಆಗಲಿದೆ ಎಂದು ತಂಡ ತಿಳಿಸಿದೆ. ಈ ವಿಚಾರ ತಿಳಿದು ಉಪ್ಪಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

2008ರಲ್ಲಿ ‘ಬುದ್ಧಿವಂತ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ಹಲವು ಗೆಟಪ್​ಗಳಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದರು. ಪ್ರೇಕ್ಷಕರಿಗೆ ಈ ಚಿತ್ರ ಹೆಚ್ಚು ಇಷ್ಟ ಆಗಿತ್ತು. ಹಿಟ್ ಸಿನಿಮಾಗಳಿಗೆ ಸೀಕ್ವೆಲ್ ಮಾಡೋದು ಸಹಜ. ಅದೇ ರೀತಿ ‘ಬುದ್ಧಿವಂತ 2’ ಚಿತ್ರ ಈ ಮೊದಲು ಅನೌನ್ಸ್ ಆಗಿತ್ತು. ಈಗ ಸಿನಿಮಾ ಯಾವ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನು ತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ.

ಉಪೇಂದ್ರ ಅವರು ಮುಖಕ್ಕೆ ಶೀಲ್ಡ್ ಧರಿಸಿದ್ದಾರೆ. ಅವರ ಕಣ್ಣುಗಳು ಭಯದಿಂದ ಕೂಡಿದೆ. ಕೂದಲು ಕೆದರಿಕೊಂಡಿದೆ. ‘ಬುದ್ಧಿವಂತ 2’ ಟೈಟಲ್ ಬಳಿ ಬೆಂಕಿ ಇದೆ. ಈ ಕಾರಣಕ್ಕೆ ಈ ಶೀರ್ಷಿಕೆ ಹೆಚ್ಚು ಗಮನ ಸೆಳೆಯುತ್ತಿದೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾ ಥಿಯೇಟರ್​ಗೆ ಬರಲಿದೆ ಎಂದು ತಂಡ ಹೇಳಿಕೊಂಡಿದೆ.

ಟಿಆರ್ ಚಂದ್ರಶೇಖರ್ ಅವರು ‘ಬುದ್ಧಿವಂತ 2’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜಯರಾಮ್ ಮಾಧವನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್, ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಯಾರನ್ನೂ ಬಲವಂತ ಮಾಡಬಾರದು’; ಚುನಾವಣೆ ಸೋಲಿನ ಬಳಿಕ ಒಗಟಾಗಿ ಮಾತನಾಡಿದ ಉಪೇಂದ್ರ ಇತ್ತೀಚೆಗೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿರುವ ಬಗ್ಗೆ ಚಿತ್ರತಂಡ ಹೇಳಿಕೊಂಡಿದೆ. ‘ಯುಐ’ ಚಿತ್ರದಲ್ಲೂ ಉಪೇಂದ್ರ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 1 July 23

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!