AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ’ ಆಡಿಯೋ ರಿಲೀಸ್​ಗೆ ಶಿಡ್ಲಘಟ್ಟದಲ್ಲಿ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಸರ್ವರಿಗೂ ಆಹ್ವಾನ ನೀಡಿದ ಚಿತ್ರತಂಡ

Upendra | R Chandru: ರವಿ ಬಸ್ರೂರು ಅವರು ‘ಕಬ್ಜ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಿಡ್ಲಘಟ್ಟದಲ್ಲಿ ಆಡಿಯೋ ರಿಲೀಸ್​ ಮಾಡಲು ವೇದಿಕೆ ಸಿದ್ಧವಾಗುತ್ತಿದೆ.

Kabzaa Movie: ‘ಕಬ್ಜ’ ಆಡಿಯೋ ರಿಲೀಸ್​ಗೆ ಶಿಡ್ಲಘಟ್ಟದಲ್ಲಿ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಸರ್ವರಿಗೂ ಆಹ್ವಾನ ನೀಡಿದ ಚಿತ್ರತಂಡ
ಉಪೇಂದ್ರ, ಶ್ರೀಯಾ ಶರಣ್, ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Feb 12, 2023 | 3:51 PM

Share

ಕನ್ನಡದ ‘ಕಬ್ಜ’ ಸಿನಿಮಾ (Kabzaa Movie) ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಮೊದಲು ಪೋಸ್ಟರ್​, ಆಮೇಲೆ ಟೀಸರ್​, ನಂತರ ಟೈಟಲ್​ ಟ್ರ್ಯಾಕ್​ ಮೂಲಕ ಭಾರಿ ಕೌತುಕ ಮೂಡಿಸಿದ ಈ ಸಿನಿಮಾದ ಬಿಡುಗಡೆಗಾಗಿ ಸಿನಿಪ್ರಿಯರು ಕಾದಿದ್ದಾರೆ. ಚಿತ್ರದ ರಿಲೀಸ್​ಗೆ ದಿನಗಣನೆ ಆರಂಭ ಆಗಿದೆ. ಮಾರ್ಚ್​ 17ರಂದು ವಿಶ್ವಾದ್ಯಂತ ‘ಕಬ್ಜ’ ತೆರೆಕಾಣಲಿದೆ. ಚಿತ್ರದ ಕೊನೇ ಹಂತದ ಕೆಲಸಗಳಲ್ಲಿ ನಿರ್ದೇಶಕ ಆರ್. ಚಂದ್ರು ಬ್ಯುಸಿ ಆಗಿದ್ದಾರೆ. ಈಗ ಆಡಿಯೋ ಬಿಡುಗಡೆಗೆ (Kabzaa Movie Audio Release) ಸಕಲ ಸಿದ್ಧತೆ ನಡೆದಿದೆ. ಫೆಬ್ರವರಿ 26ರಂದು ಶಿಡ್ಲಘಟ್ಟದಲ್ಲಿ ‘ಕಬ್ಜ’ ಹಾಡುಗಳನ್ನು ರಿಲೀಸ್​ ಮಾಡಲು ತಯಾರಿ ನಡೆಯುತ್ತಿದೆ. ಅದಕ್ಕಾಗಿ ಬೃಹತ್​ ವೇದಿಕೆ ನಿರ್ಮಾಣ ಆಗುತ್ತಿದೆ. ಉಪೇಂದ್ರ (Upendra),  ಕಿಚ್ಚ ಸುದೀಪ್, ಶ್ರೀಯಾ ಶರಣ್​​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಶಿಡ್ಲಘಟ್ಟದ ಜೂನಿಯರ್​ ಕಾಲೇಜು ಮೈದಾನದಲ್ಲಿ ‘ಕಬ್ಜ’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 26ರಂದು ಸಂಜೆ 6 ಗಂಟೆಗೆ ಆರಂಭ ಆಗುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತೀಯ ಚಿತ್ರರಂಗದ ಹಲವು ದಿಗ್ಗಜ ನಟರಿಗೆ ಆಹ್ವಾನ ನೀಡಲಾಗಿದೆ. ಅಂದು ವೇದಿಕೆಯಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸಲಿ ಎಂಬುದು ‘ಕಬ್ಜ’ ತಂಡದ ಆಶಯ.

ಇದನ್ನೂ ಓದಿ: ‘ಕಬ್ಜ’ ಬೆಡಗಿ ಶ್ರೀಯಾ ಶರಣ್​ ಸುಂದರ ಫೋಟೋಸ್​

ಇದನ್ನೂ ಓದಿ
Image
‘ಈ ಹಬ್ಬಕ್ಕೆ ಉಪ್ಪಿ ಇರಲೇಬೇಕು, ಅವ್ರು ಪೂಜೆ ಮಾಡಿದ್ರೆ ಮಾತ್ರ ನಮಗೆ ಸಂತೋಷ’: ಪ್ರಿಯಾಂಕಾ ಉಪೇಂದ್ರ
Image
ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರದ ಸೆಟ್​​ಗೆ ಶಿವರಾಜ್​ಕುಮಾರ್​-ಗೀತಾ ಭೇಟಿ
Image
Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಕಬ್ಜ’ ಸಿನಿಮಾ ರಿಲೀಸ್​ ಆಗಲಿದೆ. ಹಾಗಾಗಿ ಪ್ರಚಾರ ಕೂಡ ಅಷ್ಟೇ ಜೋರಾಗಿ ನಡೆಯುತ್ತಿದೆ. ಕೆಲವೇ ದಿನಗಳ ಹಿಂದೆ ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ದೇಶದ ಪ್ರಮುಖ ನಗರದಲ್ಲಿ ಇದೇ ರೀತಿಯ ಕಾರ್ಯಕ್ರಮಗಳನ್ನು ಮಾಡಿ ಗಮನ ಸೆಳೆಯುವ ಚಿತ್ರತಂಡ ಸಿದ್ಧವಾಗಿದೆ.

ಇದನ್ನೂ ಓದಿ: Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ

ಹೈದರಾಬಾದ್​ನಲ್ಲಿ ನಡೆದ ಕಾರ್ಯಕ್ರಮ ಯಶಸ್ವಿ ಆಗಿದೆ. ಅದೇ ರೀತಿ ಚೆನ್ನೈನಲ್ಲೂ ಫೆಬ್ರವರಿ 16ರಂದು ‘ಕಬ್ಜ’ ತಂಡ ಅದ್ದೂರಿಯಾಗಿ ಒಂದು ಇವೆಂಟ್​ ಮಾಡಲಿದೆ. ಉಪೇಂದ್ರ ಮತ್ತು ಸುದೀಪ್​ ಅವರಿಗೆ ಪರಭಾಷೆಯಲ್ಲೂ ಅಪಾರ ಅಭಿಮಾನಿಗಳಿದ್ದಾರೆ. ಎಲ್ಲ ಕಡೆಗಳಲ್ಲೂ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುವ ಸಾಧ್ಯತೆ ದಟ್ಟವಾಗಿದೆ. ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಾಗುತ್ತಿದೆ.

ರವಿ ಬಸ್ರೂರು ಅವರು ‘ಕಬ್ಜ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಬಿಡುಗಡೆ ಆಗಿರುವ ಶೀರ್ಷಿಕೆ ಗೀತೆಗೆ ಭಾರಿ ಮೆಚ್ಚುಗೆ ಸಿಕ್ಕಿದೆ. ಇನ್ನುಳಿದ ಎಲ್ಲ ಹಾಡುಗಳನ್ನು ಕೇಳಲು ಫ್ಯಾನ್ಸ್​ ಕಾದಿದ್ದಾರೆ. ಶಿಡ್ಲಘಟ್ಟದಲ್ಲಿ ನಡೆಯುವ ಆಡಿಯೋ ರಿಲೀಸ್​ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾರೆಲ್ಲ ಆಗಮಿಸಲಿದ್ದಾರೆ ಎಂಬ ಬಗ್ಗೆ ಸದ್ಯದಲ್ಲೇ ಮಾಹಿತಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್