AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ಫೆ.4ಕ್ಕೆ ಅಬ್ಬರಿಸಲಿದೆ ‘ಕಬ್ಜ’ ಮೊದಲ ಹಾಡು; ಉಪ್ಪಿ ಚಿತ್ರದ ಅದ್ದೂರಿ ಇವೆಂಟ್​ಗೆ ಹೈದರಾಬಾದ್​ ಸಜ್ಜು

Upendra | Kabzaa First Song: ರವಿ ಬಸ್ರೂರು ಅವರು ‘ಕಬ್ಜ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿರುವುದರಿಂದ ಸಿಕ್ಕಾಪಟ್ಟೆ ಕ್ರೇಜ್​ ಸೃಷ್ಟಿ ಆಗಿದೆ. ಫೆ.4ರಂದು ಈ ಸಿನಿಮಾದ ಮೊದಲ ಸಾಂಗ್​ ಬಿಡುಗಡೆ ಆಗಲಿದೆ.

Kabzaa: ಫೆ.4ಕ್ಕೆ ಅಬ್ಬರಿಸಲಿದೆ ‘ಕಬ್ಜ’ ಮೊದಲ ಹಾಡು; ಉಪ್ಪಿ ಚಿತ್ರದ ಅದ್ದೂರಿ ಇವೆಂಟ್​ಗೆ ಹೈದರಾಬಾದ್​ ಸಜ್ಜು
ಉಪೇಂದ್ರ
ಮದನ್​ ಕುಮಾರ್​
|

Updated on:Jan 30, 2023 | 7:53 PM

Share

ಕನ್ನಡದ ‘ಕಬ್ಜ’ ಸಿನಿಮಾ (Kabzaa Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಲು ಬೇಕಾದ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಪ್ರತಿ ಹೆಜ್ಜೆಯಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕುತ್ತಿರುವ ಈ ಸಿನಿಮಾದಲ್ಲಿ ಉಪೇಂದ್ರ (Upendra) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ ಕೂಡ ನಟಿಸಿರುವುದರಿಂದ ಹೈಪ್​ ಇನ್ನಷ್ಟು ಹೆಚ್ಚಿದೆ. ಆರ್​. ಚಂದ್ರು ನಿರ್ದೇಶನದ ಈ ಸಿನಿಮಾ ಈಗಾಗಲೇ ಟೀಸರ್​ ಮೂಲಕ ಸೌಂಡು ಮಾಡಿದೆ. ಈಗ ಹಾಡುಗಳ ಮೂಲಕ ಧೂಳೆಬ್ಬಿಸಲು ಪ್ಲ್ಯಾನ್​ ರೆಡಿ ಆಗಿದೆ. ಫೆಬ್ರವರಿ 4ರಂದು ‘ಕಬ್ಜ’ ಸಿನಿಮಾದ ಮೊದಲ ಹಾಡಿನ ಲಿರಿಕಲ್​ ವಿಡಿಯೋ (Kabzaa First Song) ರಿಲೀಸ್​ ಆಗಲಿದೆ. ಅದಕ್ಕಾಗಿ ಹೈದರಾಬಾದ್​ನಲ್ಲಿ ವೇದಿಕೆ ಸಜ್ಜಾಗುತ್ತಿದೆ.

‘ಕಬ್ಜ’ ಸಿನಿಮಾದಲ್ಲಿ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಆರ್​. ಚಂದ್ರು ಅವರ ಮುಂದಾಳತ್ವದಲ್ಲಿ ನುರಿತ ತಂತ್ರಜ್ಞರ ತಂಡ ಹಗಲಿರುಳು ಶ್ರಮಿಸುತ್ತಿದೆ. ಸಂಗೀತದ ಜವಾಬ್ದಾರಿಯನ್ನು ರವಿ ಬಸ್ರೂರು ಅವರು ನಿಭಾಯಿಸುತ್ತಿದ್ದಾರೆ. ಟೀಸರ್​ಗೆ ಅವರು ನೀಡಿದ ಹಿನ್ನೆಲೆ ಸಂಗೀತ ಕೇಳಿ ಫ್ಯಾನ್ಸ್​ ಫಿದಾ ಆಗಿದ್ದರು. ಈಗ ಮೊದಲ ಹಾಡು ಕೇಳುವ ಸಮಯ ಹತ್ತಿರವಾಗಿದೆ. ರವಿ ಬಸ್ರೂರು ಅವರ ಬತ್ತಳಿಕೆಯಿಂದ ಬರಲಿರುವ ಈ ಸಾಂಗ್​ ಹೇಗಿರಲಿದೆ ಎಂಬುದನ್ನು ತಿಳಿಯಲು ಅಭಿಮಾನಿ ಬಳಗ ಕಾದು ಕೂತಿದೆ.

ಇದನ್ನೂ ಓದಿ
Image
‘ಈ ಹಬ್ಬಕ್ಕೆ ಉಪ್ಪಿ ಇರಲೇಬೇಕು, ಅವ್ರು ಪೂಜೆ ಮಾಡಿದ್ರೆ ಮಾತ್ರ ನಮಗೆ ಸಂತೋಷ’: ಪ್ರಿಯಾಂಕಾ ಉಪೇಂದ್ರ
Image
ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರದ ಸೆಟ್​​ಗೆ ಶಿವರಾಜ್​ಕುಮಾರ್​-ಗೀತಾ ಭೇಟಿ
Image
Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ

‘ಕೆಜಿಎಫ್​’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಯಶಸ್ಸಿನ ಬಳಿಕ ರವಿ ಬಸ್ರೂರು ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇರುವ ಸಂಗೀತ ನಿರ್ದೇಶಕನಾಗಿ ಬೆಳೆದು ನಿಂತಿದ್ದಾರೆ. ಅವರ ಕೆಲಸದ ಮೇಲೆ ಸಿನಿಪ್ರಿಯರು ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ. ‘ಕಬ್ಜ’ ಚಿತ್ರಕ್ಕೆ ಅವರು ಸಂಗೀತ ನಿರ್ದೇಶನ ಮಾಡಿರುವುದರಿಂದ ಸಿಕ್ಕಾಪಟ್ಟೆ ಕ್ರೇಜ್​ ಸೃಷ್ಟಿ ಆಗಿದೆ.

ಇದನ್ನೂ ಓದಿ: Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಫೆಬ್ರವರಿ 4ರಂದು ‘ಕಬ್ಜ’ ಸಿನಿಮಾದ ಮೊದಲ ಸಾಂಗ್​ ಬಿಡುಗಡೆ ಆಗಲಿದೆ ಎಂಬುದನ್ನು ತಿಳಿಸಲು ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಪೋಸ್ಟರ್​ಗಳನ್ನು ರಿಲೀಸ್​ ಮಾಡಲಾಗಿದ್ದು, ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್

‘ಕಬ್ಜ ಚಿತ್ರದ ಮೊದಲ ಲಿರಿಕಲ್​ ಸಾಂಗ್​ಗೆ ಸಂಬಂಧಪಟ್ಟಂತೆ ನೀವೆಲ್ಲ ಕಾಯುತ್ತಿದ್ದ ದೊಡ್ಡ ಅನೌನ್ಸ್​ಮೆಂಟ್​ ಇಲ್ಲಿದೆ. ಹೈದರಾಬಾದ್​ನಲ್ಲಿ ಫೆಬ್ರವರಿ 4ರಂದು ಅದ್ದೂರಿ ಕಾರ್ಯಕ್ರಮ ಮಾಡಲಾಗುವುದು’ ಎಂದು ಉಪೇಂದ್ರ ಟ್ವೀಟ್​ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸ್ಟಾರ್​ ಕಲಾವಿದರು ನಟಿಸಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್​ ಅಭಿನಯಿಸಿದ್ದಾರೆ. ಮಾರ್ಚ್​ 17ರಂದು ‘ಕಬ್ಜ’ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:53 pm, Mon, 30 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ