AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?

Upendra: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ನಿನ್ನೆ (ಡಿಸೆಂಬರ್ 20)ಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಮೊದಲ ದಿನ ನಿರೀಕ್ಷೆಗಿಂತಲೂ ಉತ್ತಮ ಕಲೆಕ್ಷನ್ ಮಾಡಿದೆ. ‘ಯುಐ’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು? ಪರ ರಾಜ್ಯಗಳಲ್ಲಿ ಸಿನಿಮಾ ಗಳಿಕೆ ಮಾಡಿರುವುದೆಷ್ಟು ಮೊತ್ತ? ಇಲ್ಲಿದೆ ನೋಡಿ ಮಾಹಿತಿ.

‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Ui
ಮಂಜುನಾಥ ಸಿ.
|

Updated on:Dec 21, 2024 | 8:39 AM

Share

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ನಿನ್ನೆ (ಡಿಸೆಂಬರ್ 20) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಭಾರಿ ನಿರೀಕ್ಷೆ ಇತ್ತು. ಮೊದಲ ದಿನ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಳ್ಳಂಬೆಳಿಗ್ಗೆ ಶೋಗಳನ್ನು ಸಹ ಹಾಕಲಾಗಿತ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿಯೂ ಸಹ ‘ಯುಐ’ ಸಿನಿಮಾವನ್ನು ಬಿಡುಗಡೆ ಮಾಡಲಾಗಿತ್ತು. ಸಿನಿಮಾಕ್ಕೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೂ ಸಹ ಮೊದಲ ದಿನ ‘ಯುಐ’ ಉತ್ತಮ ಕಲೆಕ್ಷನ್ ಅನ್ನೇ ಮಾಡಿದೆ.

ಉಪೇಂದ್ರ ಅವರ ‘ಯುಐ’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ 6.75 ಕೋಟಿ ರೂಪಾಯಿ ಹಣ ಗಳಿಸಿದೆ ಎನ್ನಲಾಗಿದೆ. ಚಿತ್ರರಂಗದ ಬಾಕ್ಸ್ ಆಫೀಸ್​ ಮಾಹಿತಿ ಕಲೆಹಾಕುವ ಸ್ಯಾಕ್​ನಿಲ್ಕ್​​ ನೀಡಿರುವ ಮಾಹಿತಿಯಂತೆ 6.75 ಕೋಟಿ ಹಣವನ್ನು ಮೊದಲ ದಿನ ‘ಯುಐ’ ಸಿನಿಮಾ ಕಲೆ ಹಾಕಿದ್ದು ಇದರಲ್ಲಿ ಬಹುತೇಕ ಮೊತ್ತ ಬಂದಿರುವುದು ಕರ್ನಾಟಕದಿಂದಲೇ.

ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಂಡಿಲ್ಲ ಅದರಲ್ಲೂ ವಿಶೇಷವಾಗಿ ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ‘ಯುಐ’ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ತೆಲುಗಿನಲ್ಲಿ ಮೊದಲ ದಿನ ಸುಮಾರು 70 ಲಕ್ಷ ಹಣ ಗಳಿಕೆ ಮಾಡಿದ್ದು, ಇದು ಬಹುತೇಕ ಉತ್ತಮ ಮೊತ್ತವೇ ಆಗಿದೆ. ಆದರೆ ತಮಿಳಿನಲ್ಲಿ ‘ಯುಐ’ ಸಿನಿಮಾ ಕೇವಲ ನಾಲ್ಕು ಲಕ್ಷ ರೂಪಾಯಿ ಹಾಗೂ ಹಿಂದಿಯಲ್ಲಿ ಕೇವಲ ಒಂದು ಲಕ್ಷ ರೂಪಾಯಿ ಗಳಿಕೆ ಮಾಡಿದೆ ಎಂದು ಸ್ಯಾಕ್​ನಿಲ್ಕ್ ಮಾಹಿತಿ ಹೇಳಿದೆ.

ಇದನ್ನೂ ಓದಿ:UI Movie Review: ಯುಐ ಸಿನಿಮಾದಲ್ಲಿ ಉಪೇಂದ್ರ ವಿಚಾರಗಳ ಓವರ್​ ಡೋಸ್​

ಉಪೇಂದ್ರ ನಟನೆಯ ಈ ಹಿಂದಿನ ಸಿನಿಮಾ ‘ಕಬ್ಜ’ ಬಿಡುಗಡೆಯ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ ಒಂದು ಕೋಟಿ ರೂಪಾಯಿ, ಇದೀಗ ಆ ದಾಖಲೆಯನ್ನು ಬಲು ಸುಲಭವಾಗಿ ‘ಯುಐ’ ಸಿನಿಮಾ ಮುರಿದಿದೆ. ಮೊದಲ ದಿನ 6.70 ಕೋಟಿ ಗಳಿಕೆ ಬಹಳ ಒಳ್ಳೆಯ ಮೊತ್ತವಾಗಿದ್ದು, ವೀಕೆಂಡ್ ಆಗಿರುವ ಶನಿವಾ ಮತ್ತು ಭಾನುವಾರದಂದು ಇದೇ ಮೊತ್ತ ಉಳಿಸಿಕೊಂಡರೂ ಸಿನಿಮಾ ಉತ್ತಮ ಗೆಲುವನ್ನೇ ಕಾಣಲಿದೆ.

‘ಯುಐ’ ಸಿನಿಮಾ ಉಪೇಂದ್ರ ನಟಿಸಿ, ನಿರ್ದೇಶನ ಸಹ ಮಾಡಿರುವ ಸಿನಿಮಾ ಆಗಿದೆ. ಬಹಳ ವರ್ಷಗಳ ಬಳಿಕ ಉಪೇಂದ್ರ ಮತ್ತೆ ನಿರ್ದೇಶಕನ ಟೋಪಿ ತೊಟ್ಟಿದ್ದಾರೆ. ಸಿನಿಮಾದಲ್ಲಿ ಭವಿಷ್ಯದ ಕತೆ ಹೇಳಲಾಗಿದೆ. ಈ ಸಿನಿಮಾ ಕೇವಲ ದಡ್ಡರಿಗೆ ಮಾತ್ರ ಎಂಬ ಅಡಿಪಟ್ಟಿಯನ್ನೂ ಸಹ ಉಪೇಂದ್ರ ನೀಡಿದ್ದಾರೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ಹೂಡಿದ್ದು, ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 am, Sat, 21 December 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು