AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?

Upendra: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ನಿನ್ನೆ (ಡಿಸೆಂಬರ್ 20)ಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಮೊದಲ ದಿನ ನಿರೀಕ್ಷೆಗಿಂತಲೂ ಉತ್ತಮ ಕಲೆಕ್ಷನ್ ಮಾಡಿದೆ. ‘ಯುಐ’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು? ಪರ ರಾಜ್ಯಗಳಲ್ಲಿ ಸಿನಿಮಾ ಗಳಿಕೆ ಮಾಡಿರುವುದೆಷ್ಟು ಮೊತ್ತ? ಇಲ್ಲಿದೆ ನೋಡಿ ಮಾಹಿತಿ.

‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Ui
ಮಂಜುನಾಥ ಸಿ.
|

Updated on:Dec 21, 2024 | 8:39 AM

Share

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ನಿನ್ನೆ (ಡಿಸೆಂಬರ್ 20) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಭಾರಿ ನಿರೀಕ್ಷೆ ಇತ್ತು. ಮೊದಲ ದಿನ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಳ್ಳಂಬೆಳಿಗ್ಗೆ ಶೋಗಳನ್ನು ಸಹ ಹಾಕಲಾಗಿತ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿಯೂ ಸಹ ‘ಯುಐ’ ಸಿನಿಮಾವನ್ನು ಬಿಡುಗಡೆ ಮಾಡಲಾಗಿತ್ತು. ಸಿನಿಮಾಕ್ಕೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೂ ಸಹ ಮೊದಲ ದಿನ ‘ಯುಐ’ ಉತ್ತಮ ಕಲೆಕ್ಷನ್ ಅನ್ನೇ ಮಾಡಿದೆ.

ಉಪೇಂದ್ರ ಅವರ ‘ಯುಐ’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ 6.75 ಕೋಟಿ ರೂಪಾಯಿ ಹಣ ಗಳಿಸಿದೆ ಎನ್ನಲಾಗಿದೆ. ಚಿತ್ರರಂಗದ ಬಾಕ್ಸ್ ಆಫೀಸ್​ ಮಾಹಿತಿ ಕಲೆಹಾಕುವ ಸ್ಯಾಕ್​ನಿಲ್ಕ್​​ ನೀಡಿರುವ ಮಾಹಿತಿಯಂತೆ 6.75 ಕೋಟಿ ಹಣವನ್ನು ಮೊದಲ ದಿನ ‘ಯುಐ’ ಸಿನಿಮಾ ಕಲೆ ಹಾಕಿದ್ದು ಇದರಲ್ಲಿ ಬಹುತೇಕ ಮೊತ್ತ ಬಂದಿರುವುದು ಕರ್ನಾಟಕದಿಂದಲೇ.

ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಂಡಿಲ್ಲ ಅದರಲ್ಲೂ ವಿಶೇಷವಾಗಿ ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ‘ಯುಐ’ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ತೆಲುಗಿನಲ್ಲಿ ಮೊದಲ ದಿನ ಸುಮಾರು 70 ಲಕ್ಷ ಹಣ ಗಳಿಕೆ ಮಾಡಿದ್ದು, ಇದು ಬಹುತೇಕ ಉತ್ತಮ ಮೊತ್ತವೇ ಆಗಿದೆ. ಆದರೆ ತಮಿಳಿನಲ್ಲಿ ‘ಯುಐ’ ಸಿನಿಮಾ ಕೇವಲ ನಾಲ್ಕು ಲಕ್ಷ ರೂಪಾಯಿ ಹಾಗೂ ಹಿಂದಿಯಲ್ಲಿ ಕೇವಲ ಒಂದು ಲಕ್ಷ ರೂಪಾಯಿ ಗಳಿಕೆ ಮಾಡಿದೆ ಎಂದು ಸ್ಯಾಕ್​ನಿಲ್ಕ್ ಮಾಹಿತಿ ಹೇಳಿದೆ.

ಇದನ್ನೂ ಓದಿ:UI Movie Review: ಯುಐ ಸಿನಿಮಾದಲ್ಲಿ ಉಪೇಂದ್ರ ವಿಚಾರಗಳ ಓವರ್​ ಡೋಸ್​

ಉಪೇಂದ್ರ ನಟನೆಯ ಈ ಹಿಂದಿನ ಸಿನಿಮಾ ‘ಕಬ್ಜ’ ಬಿಡುಗಡೆಯ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ ಒಂದು ಕೋಟಿ ರೂಪಾಯಿ, ಇದೀಗ ಆ ದಾಖಲೆಯನ್ನು ಬಲು ಸುಲಭವಾಗಿ ‘ಯುಐ’ ಸಿನಿಮಾ ಮುರಿದಿದೆ. ಮೊದಲ ದಿನ 6.70 ಕೋಟಿ ಗಳಿಕೆ ಬಹಳ ಒಳ್ಳೆಯ ಮೊತ್ತವಾಗಿದ್ದು, ವೀಕೆಂಡ್ ಆಗಿರುವ ಶನಿವಾ ಮತ್ತು ಭಾನುವಾರದಂದು ಇದೇ ಮೊತ್ತ ಉಳಿಸಿಕೊಂಡರೂ ಸಿನಿಮಾ ಉತ್ತಮ ಗೆಲುವನ್ನೇ ಕಾಣಲಿದೆ.

‘ಯುಐ’ ಸಿನಿಮಾ ಉಪೇಂದ್ರ ನಟಿಸಿ, ನಿರ್ದೇಶನ ಸಹ ಮಾಡಿರುವ ಸಿನಿಮಾ ಆಗಿದೆ. ಬಹಳ ವರ್ಷಗಳ ಬಳಿಕ ಉಪೇಂದ್ರ ಮತ್ತೆ ನಿರ್ದೇಶಕನ ಟೋಪಿ ತೊಟ್ಟಿದ್ದಾರೆ. ಸಿನಿಮಾದಲ್ಲಿ ಭವಿಷ್ಯದ ಕತೆ ಹೇಳಲಾಗಿದೆ. ಈ ಸಿನಿಮಾ ಕೇವಲ ದಡ್ಡರಿಗೆ ಮಾತ್ರ ಎಂಬ ಅಡಿಪಟ್ಟಿಯನ್ನೂ ಸಹ ಉಪೇಂದ್ರ ನೀಡಿದ್ದಾರೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ಹೂಡಿದ್ದು, ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 am, Sat, 21 December 24

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?