AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?

Upendra: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ನಿನ್ನೆ (ಡಿಸೆಂಬರ್ 20)ಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಮೊದಲ ದಿನ ನಿರೀಕ್ಷೆಗಿಂತಲೂ ಉತ್ತಮ ಕಲೆಕ್ಷನ್ ಮಾಡಿದೆ. ‘ಯುಐ’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು? ಪರ ರಾಜ್ಯಗಳಲ್ಲಿ ಸಿನಿಮಾ ಗಳಿಕೆ ಮಾಡಿರುವುದೆಷ್ಟು ಮೊತ್ತ? ಇಲ್ಲಿದೆ ನೋಡಿ ಮಾಹಿತಿ.

‘ಯುಐ’ ಸಿನಿಮಾದ ಮೊದಲ ದಿನ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Ui
ಮಂಜುನಾಥ ಸಿ.
|

Updated on:Dec 21, 2024 | 8:39 AM

Share

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ನಿನ್ನೆ (ಡಿಸೆಂಬರ್ 20) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಭಾರಿ ನಿರೀಕ್ಷೆ ಇತ್ತು. ಮೊದಲ ದಿನ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಳ್ಳಂಬೆಳಿಗ್ಗೆ ಶೋಗಳನ್ನು ಸಹ ಹಾಕಲಾಗಿತ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿಯೂ ಸಹ ‘ಯುಐ’ ಸಿನಿಮಾವನ್ನು ಬಿಡುಗಡೆ ಮಾಡಲಾಗಿತ್ತು. ಸಿನಿಮಾಕ್ಕೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೂ ಸಹ ಮೊದಲ ದಿನ ‘ಯುಐ’ ಉತ್ತಮ ಕಲೆಕ್ಷನ್ ಅನ್ನೇ ಮಾಡಿದೆ.

ಉಪೇಂದ್ರ ಅವರ ‘ಯುಐ’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ 6.75 ಕೋಟಿ ರೂಪಾಯಿ ಹಣ ಗಳಿಸಿದೆ ಎನ್ನಲಾಗಿದೆ. ಚಿತ್ರರಂಗದ ಬಾಕ್ಸ್ ಆಫೀಸ್​ ಮಾಹಿತಿ ಕಲೆಹಾಕುವ ಸ್ಯಾಕ್​ನಿಲ್ಕ್​​ ನೀಡಿರುವ ಮಾಹಿತಿಯಂತೆ 6.75 ಕೋಟಿ ಹಣವನ್ನು ಮೊದಲ ದಿನ ‘ಯುಐ’ ಸಿನಿಮಾ ಕಲೆ ಹಾಕಿದ್ದು ಇದರಲ್ಲಿ ಬಹುತೇಕ ಮೊತ್ತ ಬಂದಿರುವುದು ಕರ್ನಾಟಕದಿಂದಲೇ.

ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಂಡಿಲ್ಲ ಅದರಲ್ಲೂ ವಿಶೇಷವಾಗಿ ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ‘ಯುಐ’ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ತೆಲುಗಿನಲ್ಲಿ ಮೊದಲ ದಿನ ಸುಮಾರು 70 ಲಕ್ಷ ಹಣ ಗಳಿಕೆ ಮಾಡಿದ್ದು, ಇದು ಬಹುತೇಕ ಉತ್ತಮ ಮೊತ್ತವೇ ಆಗಿದೆ. ಆದರೆ ತಮಿಳಿನಲ್ಲಿ ‘ಯುಐ’ ಸಿನಿಮಾ ಕೇವಲ ನಾಲ್ಕು ಲಕ್ಷ ರೂಪಾಯಿ ಹಾಗೂ ಹಿಂದಿಯಲ್ಲಿ ಕೇವಲ ಒಂದು ಲಕ್ಷ ರೂಪಾಯಿ ಗಳಿಕೆ ಮಾಡಿದೆ ಎಂದು ಸ್ಯಾಕ್​ನಿಲ್ಕ್ ಮಾಹಿತಿ ಹೇಳಿದೆ.

ಇದನ್ನೂ ಓದಿ:UI Movie Review: ಯುಐ ಸಿನಿಮಾದಲ್ಲಿ ಉಪೇಂದ್ರ ವಿಚಾರಗಳ ಓವರ್​ ಡೋಸ್​

ಉಪೇಂದ್ರ ನಟನೆಯ ಈ ಹಿಂದಿನ ಸಿನಿಮಾ ‘ಕಬ್ಜ’ ಬಿಡುಗಡೆಯ ಮೊದಲ ದಿನ ಕಲೆಕ್ಷನ್ ಮಾಡಿದ್ದು ಕೇವಲ ಒಂದು ಕೋಟಿ ರೂಪಾಯಿ, ಇದೀಗ ಆ ದಾಖಲೆಯನ್ನು ಬಲು ಸುಲಭವಾಗಿ ‘ಯುಐ’ ಸಿನಿಮಾ ಮುರಿದಿದೆ. ಮೊದಲ ದಿನ 6.70 ಕೋಟಿ ಗಳಿಕೆ ಬಹಳ ಒಳ್ಳೆಯ ಮೊತ್ತವಾಗಿದ್ದು, ವೀಕೆಂಡ್ ಆಗಿರುವ ಶನಿವಾ ಮತ್ತು ಭಾನುವಾರದಂದು ಇದೇ ಮೊತ್ತ ಉಳಿಸಿಕೊಂಡರೂ ಸಿನಿಮಾ ಉತ್ತಮ ಗೆಲುವನ್ನೇ ಕಾಣಲಿದೆ.

‘ಯುಐ’ ಸಿನಿಮಾ ಉಪೇಂದ್ರ ನಟಿಸಿ, ನಿರ್ದೇಶನ ಸಹ ಮಾಡಿರುವ ಸಿನಿಮಾ ಆಗಿದೆ. ಬಹಳ ವರ್ಷಗಳ ಬಳಿಕ ಉಪೇಂದ್ರ ಮತ್ತೆ ನಿರ್ದೇಶಕನ ಟೋಪಿ ತೊಟ್ಟಿದ್ದಾರೆ. ಸಿನಿಮಾದಲ್ಲಿ ಭವಿಷ್ಯದ ಕತೆ ಹೇಳಲಾಗಿದೆ. ಈ ಸಿನಿಮಾ ಕೇವಲ ದಡ್ಡರಿಗೆ ಮಾತ್ರ ಎಂಬ ಅಡಿಪಟ್ಟಿಯನ್ನೂ ಸಹ ಉಪೇಂದ್ರ ನೀಡಿದ್ದಾರೆ. ಸಿನಿಮಾಕ್ಕೆ ಲಹರಿ ವೇಲು ಮತ್ತು ಕೆಪಿ ಶ್ರೀಕಾಂತ್ ಬಂಡವಾಳ ಹೂಡಿದ್ದು, ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 am, Sat, 21 December 24

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!