AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಸಿನಿಮಾ ಅದ್ದೂರಿ ಬಿಡುಗಡೆ: ಚಿತ್ರದ ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಇದೆ ನೋಡಿ..

ನಟ ಉಪೇಂದ್ರ ಅವರು ‘ಯುಐ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದ ಸಖತ್ ಹೈಪ್ ಸೃಷ್ಟಿ ಆಗಿದೆ. ಇಂದು (ಡಿಸೆಂಬರ್​ 20) ಗ್ರ್ಯಾಂಡ್​ ಆಗಿ ‘ಯುಐ’ ಸಿನಿಮಾ ಬಿಡುಗಡೆ ಆಗಿದೆ. ಸದಾ ಡಿಫರೆಂಟ್​ ಆಗಿ ಸಿನಿಮಾ ಮಾಡುವ ಉಪೇಂದ್ರ ಅವರು ಈ ಬಾರಿ ಕೆಲವು ಗಂಭೀರವಾದ ವಿಚಾರಗಳನ್ನು ಇಟ್ಟುಕೊಂಡು ಪ್ರೇಕ್ಷಕರ ಎದುರು ಬಂದಿದ್ದಾರೆ. ಸಿನಿಮಾದ ಫಸ್ಟ್​ ಹಾಫ್​ ವಿಮರ್ಶೆ ಇಲ್ಲಿದೆ..

‘ಯುಐ’ ಸಿನಿಮಾ ಅದ್ದೂರಿ ಬಿಡುಗಡೆ: ಚಿತ್ರದ ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಇದೆ ನೋಡಿ..
Upendra
ಮದನ್​ ಕುಮಾರ್​
| Edited By: |

Updated on:Dec 20, 2024 | 10:01 AM

Share

ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ಖಂಡಿತವಾಗಿಯೂ ಡಿಫರೆಂಟ್​ ಆಗಿರುತ್ತದೆ ಎಂಬ ನಂಬಿಕೆ ಅಭಿಮಾನಿಗಳದ್ದು. ಮೊದಲ ಸಿನಿಮಾದಿಂದಲೂ ಉಪೇಂದ್ರ ಆ ನಂಬಿಕೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ‘ಯುಐ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಇಂದಿನ ಕೆಲವು ಗಂಭೀರ ಸಮಸ್ಯೆಗಳ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ ಎಂಬ ಸುಳಿವನ್ನು ಟ್ರೇಲರ್​ ಮೂಲಕ ನೀಡಲಾಗಿತ್ತು. ಇಂದು (ಡಿ.20) ಮುಂಜಾನೆಯೇ ಅಭಿಮಾನಿಗಳು ‘ಯುಐ’ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಈ ಸಿನಿಮಾದ ಫಸ್ಟ್​ ಹಾಫ್​ನಲ್ಲಿ ಹೈಲೈಟ್​ ಆಗಿರುವ ಅಂಶಗಳ ಬಗ್ಗೆ ಇಲ್ಲಿದೆ ವಿವರ..

  1. A, ಶ್ ರೀತಿ ‘ಯುಐ’ನಲ್ಲೂ ಸಿನಿಮಾದೊಳಗೊಂದು ಸಿನಿಮಾ ತೋರಿಸುತ್ತಿರುವ ಉಪೇಂದ್ರ. ಓಪನಿಂಗ್ ಸೀನ್ ತುಂಬ ಡಿಫರೆಂಟ್ ಆಗಿದೆ.
  2. ನಿರ್ದೇಶಕನಾಗಿಯೇ ಉಪೇಂದ್ರ ಪಾತ್ರ ಪರಿಚಯ. ‘ನೀವು ದಡ್ಡರಾಗಿದ್ರೆ ಮಾತ್ರ ಪೂರ್ತಿ ಸಿನಿಮಾ ನೋಡಿ’ ಎಂದು ಸವಾಲು ಹಾಕಿದ ಉಪೇಂದ್ರ.
  3. ಫ್ಯಾನ್ಸ್ ನಿರೀಕ್ಷಿಸೋದಕ್ಕಿಂತ ಡಿಫರೆಂಟ್ ಆಗಿ ಎಂಟ್ರಿ ನೀಡುವ ಹೀರೋ. ಪ್ರೇಕ್ಷಕರು ಆ್ಯಕ್ಷನ್ ಬಯಸುವಂತಹ ಸೀನ್‌ನಲ್ಲಿ ಶಾಂತಿ ಪಾಠ ಮಾಡುವ ಹೀರೋ.
  4. ಎರಡು ಬೇರೆ ಬೇರೆ ಶೇಡ್‌ನಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಸತ್ಯ ಮತ್ತು ಕಲ್ಕಿ ಭಗವಾನ್ ಪಾತ್ರದಲ್ಲಿ ಉಪೇಂದ್ರ ನಟನೆ ಮಾಡಿದ್ದಾರೆ.
  5. ಅಸಮಾನತೆ, ಬಡತನ ಇತ್ಯಾದಿ ಸಮಸ್ಯೆಗಳ ಹಿನ್ನೆಲೆಯಲ್ಲಿ ‘ಯುಐ’ ಸಿನಿಮಾ ಕಥೆ ಸಾಗುತ್ತದೆ. ಅಲ್ಲಲ್ಲಿ ಪ್ರೇಕ್ಷಕರಿಗೆ ಗೊಂದಲವನ್ನೂ ಮೂಡಿಸುತ್ತದೆ.
  6. ಚಿಕ್ಕದೊಂದು ಪಾತ್ರದಲ್ಲಿ ‘ಮಠ’ ಗುರುಪ್ರಸಾದ್ ನಟಿಸಿದ್ದಾರೆ. ಫಸ್ಟ್ ಹಾಫ್‌ನಲ್ಲಿ ಹೀರೋಯಿನ್ ರೀಷ್ಮಾ ನಾಣಯ್ಯ ಪಾತ್ರ ಹೆಚ್ಚು ಹೈಲೈಟ್ ಆಗಿಲ್ಲ.
  7. ಉಪೇಂದ್ರ ಅವರ ಪ್ರಜಾಕೀಯದ ವಿಚಾರಗಳೇ ‘ಯುಐ’ ಕಥೆ ಆದಂತಿದೆ. ಪ್ರಸ್ತುತ ರಾಜಕೀಯ, ಸಾಮಾಜಿಕ ಸಮಸ್ಯೆಗಳಿಗೆ ಫಿಲ್ಮೀ ಟಚ್ ನೀಡಿದ ಉಪೇಂದ್ರ.
  8. ಮನರಂಜನೆಗಿಂತಲೂ ಗಂಭೀರವಾದ ವಿಷಯಗಳ ಮಂಡನೆಗೆ ಉಪೇಂದ್ರ ಹೆಚ್ಚು ಗಮನ ನೀಡಿದ್ದಾರೆ. ಹಾಗಾಗಿ ಇದು ಮಾಮೂಲಿ ಸಿನಿಮಾಗಳಿಗಿಂತ ಭಿನ್ನವಾಗಿದೆ.
  9. ಮಾಮೂಲಿ ಲವ್, ಸೆಂಟಿಮೆಂಟ್, ಆ್ಯಕ್ಷನ್, ರೊಮ್ಯಾನ್ಸ್ ಹೊರತುಪಡಿಸಿ ಬೇರೆ ರೀತಿಯಲ್ಲಿ ಸಿನಿಮಾ ಕಟ್ಟಿಕೊಡಲು ಉಪೇಂದ್ರ ಪ್ರಯತ್ನಿಸಿದ್ದಾರೆ.
  10. ‘ಯುಐ’ ಎಂದರೆ ಏನು ಎಂಬ ಪ್ರಶ್ನೆ ಎಲ್ಲರಿಗೂ ಇದೆ‌. ಆದರೆ ಫಸ್ಟ್‌ಹಾಫ್‌ನಲ್ಲಿ ಅದಕ್ಕೆ ಉತ್ತರ ಸಿಗಲ್ಲ. ಉತ್ತರ ಸಿಗಬೇಕಿದ್ದರೆ ಸೆಕೆಂಡ್ ಹಾಫ್‌ಗೆ ಕಾಯಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:28 pm, Thu, 19 December 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು