ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್

ಉಪೇಂದ್ರ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿರುತ್ತಾರೆ. ಅವರು ಟೀಸರ್ ಬೇಕೆ ಬೇಕು ಎಂದು ಹಠ ಹಿಡಿದು ಕೂರುತ್ತಾರೆ. ಇದಕ್ಕೆ ಉಪ್ಪಿ ಕೂಡ ಒಪ್ಪುತ್ತಾರೆ. ಟೀಸರ್​ನ ಥಿಯೇಟರ್​ನಲ್ಲಿ ನೋಡುವ ಅವಕಾಶವನ್ನು ಉಪೇಂದ್ರ ಮಾಡಿಕೊಡುತ್ತಿದ್ದಾರೆ.

ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್
ಉಪೇಂದ್ರ
Follow us
|

Updated on:Sep 11, 2023 | 2:10 PM

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಅವರು ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುಐ’ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಮತ್ತಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಉಪೇಂದ್ರ ಚಿತ್ರದ ಬಗ್ಗೆ ಬಿಗ್ ಅಪ್​ಡೇಟ್ ಒಂದನ್ನು ನೀಡಿದ್ದಾರೆ. ‘ಯುಐ’ ಚಿತ್ರದ (UI Movie) ಟೀಸರ್ ಸೆಪ್ಟೆಂಬರ್ 18ರಂದು ರಿಲೀಸ್ ಆಗಲಿದೆ. ಇದರ ಜೊತೆಗೆ ಒಂದು ಸರ್​ಪ್ರೈಸ್ ಕೂಡ ಇದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಹೊಸ ವಿಡಿಯೋ ರಿಲೀಸ್ ಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಮೊದಲು ‘ಯುಐ’ ಚಿತ್ರದ ಟೀಸರ್ ಬಿಡುಗಡೆ ಮಾಡಲ್ಲ ಎಂದು ಉಪೇಂದ್ರ ಹೇಳಿದ್ದರು. ಹಾಗಂತ ಅವರು ಗಂಭೀರವಾಗಿ ಇದನ್ನು ಹೇಳಿರಲಿಲ್ಲ. ನಿರ್ಮಾಪಕರು ಉಪೇಂದ್ರ ಮನೆಗೆ ಬಂದು ಟೀಸರ್ ಬಿಡುಗಡೆ ಮಾಡೋಣ ಎನ್ನುತ್ತಾರೆ. ಆದರೆ, ಇದಕ್ಕೆ ಉಪ್ಪಿ ಒಪ್ಪುವುದಿಲ್ಲ. ಈ ವಿಡಿಯೋನ ಮುಂದುವರಿದ ಭಾಗ ಇಂದು (ಸೆಪ್ಟೆಂಬರ್ 11) ರಿಲೀಸ್ ಆಗಿದೆ.

ಉಪೇಂದ್ರ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿರುತ್ತಾರೆ. ಅವರು ಟೀಸರ್ ಬೇಕೆ ಬೇಕು ಎಂದು ಹಠ ಹಿಡಿದು ಕೂರುತ್ತಾರೆ. ಇದಕ್ಕೆ ಉಪ್ಪಿ ಕೂಡ ಒಪ್ಪುತ್ತಾರೆ. ಟೀಸರ್​ನ ಥಿಯೇಟರ್​ನಲ್ಲಿ ನೋಡುವ ಅವಕಾಶವನ್ನು ಉಪೇಂದ್ರ ಮಾಡಿಕೊಡುತ್ತಿದ್ದಾರೆ. ಅರ್ಥಾತ್ ಸೆಪ್ಟೆಂಬರ್ 18ರಂದು ಮಧ್ಯಾಹ್ನ 3 ಗಂಟೆಗೆ ಊರ್ವಶಿ ಥಿಯೇಟರ್​ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಭಿಮಾನಿಗಳಿಗೆ ದೊಡ್ಡ ಪರದೆಯಲ್ಲಿ ಟೀಸರ್ ನೋಡುವ ಅವಕಾಶ ದೊರೆತಿದೆ. ‘ಸ್ಟಾರ್ಸ್​ ದೇವರ ಮಾತು ಕೇಳ್ತಾರೋ ಇಲ್ಲವೋ, ಅಭಿಮಾನಿ ದೇವರ ಮಾತನ್ನಂತೂ ಕೇಳುತ್ತಾರೆ’ ಎಂಬ ಕೆಪಿ ಶ್ರೀಕಾಂತ್ ಡೈಲಾಗ್ ಗಮನ ಸೆಳೆದಿದೆ.

ಇದನ್ನೂ ಓದಿ: ‘ಪಬ್ಲಿಸಿಟಿ ಏಕೆ ಮಾಡಬೇಕು? ‘ಯುಐ’ ಫಸ್ಟ್ ಲುಕ್ ರಿವೀಲ್ ಮಾಡಲು ಉಪೇಂದ್ರಗಿಲ್ಲ ಆಸಕ್ತಿ

‘ಯುಐ’ ಚಿತ್ರವನ್ನು ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಉಪೇಂದ್ರ ಅವರು ನಿರ್ದೇಶನಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರು ನಟಿಸಿದ್ದಾರೆ ಕೂಡ. ಸಿನಿಮಾ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:10 pm, Mon, 11 September 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ