AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್

ಉಪೇಂದ್ರ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿರುತ್ತಾರೆ. ಅವರು ಟೀಸರ್ ಬೇಕೆ ಬೇಕು ಎಂದು ಹಠ ಹಿಡಿದು ಕೂರುತ್ತಾರೆ. ಇದಕ್ಕೆ ಉಪ್ಪಿ ಕೂಡ ಒಪ್ಪುತ್ತಾರೆ. ಟೀಸರ್​ನ ಥಿಯೇಟರ್​ನಲ್ಲಿ ನೋಡುವ ಅವಕಾಶವನ್ನು ಉಪೇಂದ್ರ ಮಾಡಿಕೊಡುತ್ತಿದ್ದಾರೆ.

ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Sep 11, 2023 | 2:10 PM

Share

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಅವರು ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುಐ’ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಮತ್ತಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಉಪೇಂದ್ರ ಚಿತ್ರದ ಬಗ್ಗೆ ಬಿಗ್ ಅಪ್​ಡೇಟ್ ಒಂದನ್ನು ನೀಡಿದ್ದಾರೆ. ‘ಯುಐ’ ಚಿತ್ರದ (UI Movie) ಟೀಸರ್ ಸೆಪ್ಟೆಂಬರ್ 18ರಂದು ರಿಲೀಸ್ ಆಗಲಿದೆ. ಇದರ ಜೊತೆಗೆ ಒಂದು ಸರ್​ಪ್ರೈಸ್ ಕೂಡ ಇದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಹೊಸ ವಿಡಿಯೋ ರಿಲೀಸ್ ಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಮೊದಲು ‘ಯುಐ’ ಚಿತ್ರದ ಟೀಸರ್ ಬಿಡುಗಡೆ ಮಾಡಲ್ಲ ಎಂದು ಉಪೇಂದ್ರ ಹೇಳಿದ್ದರು. ಹಾಗಂತ ಅವರು ಗಂಭೀರವಾಗಿ ಇದನ್ನು ಹೇಳಿರಲಿಲ್ಲ. ನಿರ್ಮಾಪಕರು ಉಪೇಂದ್ರ ಮನೆಗೆ ಬಂದು ಟೀಸರ್ ಬಿಡುಗಡೆ ಮಾಡೋಣ ಎನ್ನುತ್ತಾರೆ. ಆದರೆ, ಇದಕ್ಕೆ ಉಪ್ಪಿ ಒಪ್ಪುವುದಿಲ್ಲ. ಈ ವಿಡಿಯೋನ ಮುಂದುವರಿದ ಭಾಗ ಇಂದು (ಸೆಪ್ಟೆಂಬರ್ 11) ರಿಲೀಸ್ ಆಗಿದೆ.

ಉಪೇಂದ್ರ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿರುತ್ತಾರೆ. ಅವರು ಟೀಸರ್ ಬೇಕೆ ಬೇಕು ಎಂದು ಹಠ ಹಿಡಿದು ಕೂರುತ್ತಾರೆ. ಇದಕ್ಕೆ ಉಪ್ಪಿ ಕೂಡ ಒಪ್ಪುತ್ತಾರೆ. ಟೀಸರ್​ನ ಥಿಯೇಟರ್​ನಲ್ಲಿ ನೋಡುವ ಅವಕಾಶವನ್ನು ಉಪೇಂದ್ರ ಮಾಡಿಕೊಡುತ್ತಿದ್ದಾರೆ. ಅರ್ಥಾತ್ ಸೆಪ್ಟೆಂಬರ್ 18ರಂದು ಮಧ್ಯಾಹ್ನ 3 ಗಂಟೆಗೆ ಊರ್ವಶಿ ಥಿಯೇಟರ್​ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಭಿಮಾನಿಗಳಿಗೆ ದೊಡ್ಡ ಪರದೆಯಲ್ಲಿ ಟೀಸರ್ ನೋಡುವ ಅವಕಾಶ ದೊರೆತಿದೆ. ‘ಸ್ಟಾರ್ಸ್​ ದೇವರ ಮಾತು ಕೇಳ್ತಾರೋ ಇಲ್ಲವೋ, ಅಭಿಮಾನಿ ದೇವರ ಮಾತನ್ನಂತೂ ಕೇಳುತ್ತಾರೆ’ ಎಂಬ ಕೆಪಿ ಶ್ರೀಕಾಂತ್ ಡೈಲಾಗ್ ಗಮನ ಸೆಳೆದಿದೆ.

ಇದನ್ನೂ ಓದಿ: ‘ಪಬ್ಲಿಸಿಟಿ ಏಕೆ ಮಾಡಬೇಕು? ‘ಯುಐ’ ಫಸ್ಟ್ ಲುಕ್ ರಿವೀಲ್ ಮಾಡಲು ಉಪೇಂದ್ರಗಿಲ್ಲ ಆಸಕ್ತಿ

‘ಯುಐ’ ಚಿತ್ರವನ್ನು ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಉಪೇಂದ್ರ ಅವರು ನಿರ್ದೇಶನಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರು ನಟಿಸಿದ್ದಾರೆ ಕೂಡ. ಸಿನಿಮಾ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:10 pm, Mon, 11 September 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!