AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್

ಉಪೇಂದ್ರ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿರುತ್ತಾರೆ. ಅವರು ಟೀಸರ್ ಬೇಕೆ ಬೇಕು ಎಂದು ಹಠ ಹಿಡಿದು ಕೂರುತ್ತಾರೆ. ಇದಕ್ಕೆ ಉಪ್ಪಿ ಕೂಡ ಒಪ್ಪುತ್ತಾರೆ. ಟೀಸರ್​ನ ಥಿಯೇಟರ್​ನಲ್ಲಿ ನೋಡುವ ಅವಕಾಶವನ್ನು ಉಪೇಂದ್ರ ಮಾಡಿಕೊಡುತ್ತಿದ್ದಾರೆ.

ಅಭಿಮಾನಿಗಳು ಹೇಳಿದಂತೆ ಕೇಳಿದ ಉಪೇಂದ್ರ; ಸೆಪ್ಟೆಂಬರ್ 18ಕ್ಕೆ ‘ಯುಐ’ ಚಿತ್ರದ ಟೀಸರ್
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Sep 11, 2023 | 2:10 PM

Share

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಅವರು ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುಐ’ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಮತ್ತಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಉಪೇಂದ್ರ ಚಿತ್ರದ ಬಗ್ಗೆ ಬಿಗ್ ಅಪ್​ಡೇಟ್ ಒಂದನ್ನು ನೀಡಿದ್ದಾರೆ. ‘ಯುಐ’ ಚಿತ್ರದ (UI Movie) ಟೀಸರ್ ಸೆಪ್ಟೆಂಬರ್ 18ರಂದು ರಿಲೀಸ್ ಆಗಲಿದೆ. ಇದರ ಜೊತೆಗೆ ಒಂದು ಸರ್​ಪ್ರೈಸ್ ಕೂಡ ಇದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಹೊಸ ವಿಡಿಯೋ ರಿಲೀಸ್ ಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಮೊದಲು ‘ಯುಐ’ ಚಿತ್ರದ ಟೀಸರ್ ಬಿಡುಗಡೆ ಮಾಡಲ್ಲ ಎಂದು ಉಪೇಂದ್ರ ಹೇಳಿದ್ದರು. ಹಾಗಂತ ಅವರು ಗಂಭೀರವಾಗಿ ಇದನ್ನು ಹೇಳಿರಲಿಲ್ಲ. ನಿರ್ಮಾಪಕರು ಉಪೇಂದ್ರ ಮನೆಗೆ ಬಂದು ಟೀಸರ್ ಬಿಡುಗಡೆ ಮಾಡೋಣ ಎನ್ನುತ್ತಾರೆ. ಆದರೆ, ಇದಕ್ಕೆ ಉಪ್ಪಿ ಒಪ್ಪುವುದಿಲ್ಲ. ಈ ವಿಡಿಯೋನ ಮುಂದುವರಿದ ಭಾಗ ಇಂದು (ಸೆಪ್ಟೆಂಬರ್ 11) ರಿಲೀಸ್ ಆಗಿದೆ.

ಉಪೇಂದ್ರ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿರುತ್ತಾರೆ. ಅವರು ಟೀಸರ್ ಬೇಕೆ ಬೇಕು ಎಂದು ಹಠ ಹಿಡಿದು ಕೂರುತ್ತಾರೆ. ಇದಕ್ಕೆ ಉಪ್ಪಿ ಕೂಡ ಒಪ್ಪುತ್ತಾರೆ. ಟೀಸರ್​ನ ಥಿಯೇಟರ್​ನಲ್ಲಿ ನೋಡುವ ಅವಕಾಶವನ್ನು ಉಪೇಂದ್ರ ಮಾಡಿಕೊಡುತ್ತಿದ್ದಾರೆ. ಅರ್ಥಾತ್ ಸೆಪ್ಟೆಂಬರ್ 18ರಂದು ಮಧ್ಯಾಹ್ನ 3 ಗಂಟೆಗೆ ಊರ್ವಶಿ ಥಿಯೇಟರ್​ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಭಿಮಾನಿಗಳಿಗೆ ದೊಡ್ಡ ಪರದೆಯಲ್ಲಿ ಟೀಸರ್ ನೋಡುವ ಅವಕಾಶ ದೊರೆತಿದೆ. ‘ಸ್ಟಾರ್ಸ್​ ದೇವರ ಮಾತು ಕೇಳ್ತಾರೋ ಇಲ್ಲವೋ, ಅಭಿಮಾನಿ ದೇವರ ಮಾತನ್ನಂತೂ ಕೇಳುತ್ತಾರೆ’ ಎಂಬ ಕೆಪಿ ಶ್ರೀಕಾಂತ್ ಡೈಲಾಗ್ ಗಮನ ಸೆಳೆದಿದೆ.

ಇದನ್ನೂ ಓದಿ: ‘ಪಬ್ಲಿಸಿಟಿ ಏಕೆ ಮಾಡಬೇಕು? ‘ಯುಐ’ ಫಸ್ಟ್ ಲುಕ್ ರಿವೀಲ್ ಮಾಡಲು ಉಪೇಂದ್ರಗಿಲ್ಲ ಆಸಕ್ತಿ

‘ಯುಐ’ ಚಿತ್ರವನ್ನು ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಉಪೇಂದ್ರ ಅವರು ನಿರ್ದೇಶನಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರು ನಟಿಸಿದ್ದಾರೆ ಕೂಡ. ಸಿನಿಮಾ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:10 pm, Mon, 11 September 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!