AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಲ್ಲಿ ಬರಲಿದೆ ‘ಯುಐ’; ‘ಮಾರ್ಟಿನ್’ ಜೊತೆ ಸ್ಪರ್ಧೆಗೆ ಇಳಿದ್ರಾ ಉಪ್ಪಿ?

‘ಯುಐ’ ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುತೂಹಲ ಅಭಿಮಾನಿಗಳಿಗೆ ಇತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಉಪೇಂದ್ರ ಅವರು ‘ಯುಐ’ ಚಿತ್ರದ ರಿಲೀಸ್ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಟೋಬರ್​ನಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಅಕ್ಟೋಬರ್​ನಲ್ಲಿ ಬರಲಿದೆ ‘ಯುಐ’; ‘ಮಾರ್ಟಿನ್’ ಜೊತೆ ಸ್ಪರ್ಧೆಗೆ ಇಳಿದ್ರಾ ಉಪ್ಪಿ?
ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on: Aug 18, 2024 | 8:15 AM

Share

ಉಪೇಂದ್ರ ನಟನೆಯ ‘ಯುಐ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಚಿತ್ರದಿಂದ ಅವರು ದೊಡ್ಡ ಗೆಲುವು ಕಾಣುವ ಭರವಸೆಯಲ್ಲಿ ಇದ್ದಾರೆ. ಈ ಚಿತ್ರದ ಗ್ರಾಫಿಕ್ಸ್ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಟೋಬರ್​ನಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

‘ಯುಐ’ ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುತೂಹಲ ಅಭಿಮಾನಿಗಳಿಗೆ ಇತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಉಪೇಂದ್ರ ಅವರು ‘ಯುಐ’ ಚಿತ್ರದ ರಿಲೀಸ್ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಟೋಬರ್​ನಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರ ಕೇಳಿ ಉಪ್ಪಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಅಕ್ಟೋಬರ್​ನಲ್ಲಿ ‘ಮಾರ್ಟಿನ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೇ ತಿಂಗಳಲ್ಲಿ ‘ಯುಐ’ ಕೂಡ ರಿಲೀಸ್ ಆಗಲಿದೆ. ಈಗಾಗಲೇ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ರಂದು ರಿಲೀಸ್ ಆಗಲಿದೆ ಎಂದು ತಂಡ ತಿಳಿಸಿದೆ. ಹೀಗಾಗಿ, ‘ಯುಐ’ ಅಕ್ಟೋಬರ್ ಅಂತ್ಯಕ್ಕೆ ಬಿಡುಗಡೆ ಆಗಬಹುದು ಎಂದು ಕೆಲವರು ಊಹಿಸಿದ್ದಾರೆ.

ಇದನ್ನೂ ಓದಿ: ‘ಯುಐ’ ಅಂತರಾಷ್ಟ್ರೀಯ ಸ್ಪರ್ಷ, ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್

‘ಯುಐ’ ಸಿನಿಮಾದ ಪೋಸ್ಟರ್​ಗಳು ಮಾತ್ರ ಈವರೆಗೆ ರಿಲೀಸ್ ಆಗಿವೆ. ಈ ಚಿತ್ರದಲ್ಲಿ ಬಹುತೇಕ ದೃಶ್ಯಗಳು ಗ್ರಾಫಿಕ್ಸ್​ನಿಂದ ಕೂಡಿರಲಿದೆ ಎಂದು ಉಪೇಂದ್ರ ಮಾಹಿತಿ ನೀಡಿದ್ದಾರೆ. ಈ ಸಿನಿಮಾದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ