AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ’ ಆಯ್ತು ಈಗ ವಿಶೇಷ ದಿನದಂದು ‘ಉಪೇಂದ್ರ’ ಸಿನಿಮಾ ಮರು ಬಿಡುಗಡೆ

Upendra: ಉಪೇಂದ್ರ ನಟಿಸಿ ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಇದೀಗ ಉಪೇಂದ್ರ ನಟಿಸಿ ನಿರ್ದೇಶಿಸಿದ್ದ ಮತ್ತೊಂದು ಹಿಟ್ ಸಿನಿಮಾ ‘ಉಪೇಂದ್ರ’ ವಿಶೇಷ ದಿನದಂದು ಮರು ಬಿಡುಗಡೆ ಆಗಲಿಕ್ಕಿದೆ.

‘ಎ’ ಆಯ್ತು ಈಗ ವಿಶೇಷ ದಿನದಂದು ‘ಉಪೇಂದ್ರ’ ಸಿನಿಮಾ ಮರು ಬಿಡುಗಡೆ
ಉಪೇಂದ್ರ
ಮಂಜುನಾಥ ಸಿ.
|

Updated on: Sep 06, 2024 | 5:03 PM

Share

ಕೆಲ ತಿಂಗಳ ಹಿಂದೆ ಉಪೇಂದ್ರ ನಟಿಸಿ ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ ಮರು ಬಿಡುಗಡೆ ಆಗಿ ಕ್ರೇಜ್ ಹುಟ್ಟಿಸಿತ್ತು. ಉಪೇಂದ್ರ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು, ಕನ್ನಡದ ‘ಕಲ್ಟ್’ ಸಿನಿಮಾಗಳಲ್ಲಿ ಒಂದು ಎನ್ನಬಹುದ ‘ಎ’ ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ನೋಡಿ ಖುಷಿ ಪಟ್ಟಿದ್ದರು. ‘ಎ’ ಸಿನಿಮಾದ ಮರು ಬಿಡುಗಡೆಯ ಅಬ್ಬರ ಕಂಡು ಇನ್ನೂ ಕೆಲವು ಹಳೆ ಕನ್ನಡ ಸಿನಿಮಾಗಳನ್ನು ಬಿಡುಗಡೆ ಮಾಡಲಾಯ್ತಾದರೂ ಅವ್ಯಾವೂ ಅಂಥಹಾ ಒಳ್ಳೆಯ ಪ್ರದರ್ಶನ ಕಾಣಲಿಲ್ಲ. ಈಗ ಮತ್ತೊಮ್ಮೆ ಉಪೇಂದ್ರ ನಟಿಸಿ ನಿರ್ದೇಶಿಸಿರುವ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ.

ಇದೇ ತಿಂಗಳಿನ 18 ನಟ, ನಿರ್ದೇಶಕ ಉಪೇಂದ್ರ ಅವರ ಹುಟ್ಟುಹಬ್ಬ. ಅವರ ಜನ್ಮದಿನದ ವಿಶೇಷವಾಗಿ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. 1999 ರಲ್ಲಿ ಬಿಡುಗಡೆ ಆಗಿದ್ದು ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತ್ತು. ವಿಚಿತ್ರ ಕತೆ, ನಿರೂಪಣಾ ಶೈಲಿ ಹೊಂದಿದ್ದ ‘ಉಪೇಂದ್ರ’ ಸಿನಿಮಾ ಯುವ ಪ್ರೇಕ್ಷಕರನ್ನು ಬಹುವಾಗಿ ಸೆಳೆದಿತ್ತು. ಅಲ್ಲದೆ ಭಿನ್ನ ರೀತಿಯ ಕತೆ ಹೇಳುವ ಉಪೇಂದ್ರ ಅವರ ಶೈಲಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದನ್ನೂ ಓದಿ:ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ

‘ಉಪೇಂದ್ರ’ ಸಿನಿಮಾನಲ್ಲಿ ನಾಯಕ ಉಪೇಂದ್ರ ನಾನು ಹೆಸರಿನ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದಲ್ಲಿ ರವೀನಾ ಟಂಡನ್, ಪ್ರೇಮಾ ಹಾಗೂ ದಾಮಿನಿ ನಾಯಕಿಯರಾಗಿ ನಟಿಸಿದ್ದರು. ವ್ಯಕ್ತಿಯೊಬ್ಬನ ಜೀವನದಲ್ಲಿ ಹಣ, ಜವಾಬ್ದಾರಿ ಹಾಗೂ ಪ್ರೀತಿ ಎಷ್ಟು ಮುಖ್ಯ ಹಾಗೂ ಅವುಗಳು ವಹಿಸುವ ಪಾತ್ರಗಳ ಬಗ್ಗೆ ಕತೆಯ ಮೂಲಕ ಉಪೇಂದ್ರ ಹೇಳಿದ್ದರು. ಮಾರಿಮುತ್ತು ವಿಲನ್ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾಕ್ಕೆ ಆಗಿನ ಕಾಲದಲ್ಲಿ ಕೆಲವರು ವಿರೋಧ ಸಹ ಮಾಡಿದ್ದರು. ಏನೇ ಆದರೂ ಈ ಸಿನಿಮಾ ಹಿಟ್ ಆಗಿದ್ದಲ್ಲದೆ ಆಗಿನ ಕಾಲಕ್ಕೆ ಸುಮಾರು 10 ಕೋಟಿ ಕಲೆಕ್ಷನ್ ಸಹ ಮಾಡಿತ್ತು.

ಇದೀಗ ‘ಉಪೇಂದ್ರ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿದ್ದು, ಉಪೇಂದ್ರ ಜನ್ಮದಿನವೂ ಹತ್ತಿರ ಇರುವ ಕಾರಣ, ಇದೇ ದಿನ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾವನ್ನು ಶಿಲ್ಪಾ ಶ್ರೀನಿವಾಸ್ ನಿರ್ಮಾಣ ಮಾಡಿದ್ದರು, ಗುರುಕಿರಣ್ ನಿರ್ದೇಶನ ಮಾಡಿದ್ದರು. ಉಪೇಂದ್ರ, ಪೂರ್ಣ ಪ್ರಮಾಣದ ನಾಯಕನಾಗಿ ನಟಿಸಿದ ಎರಡನೇ ಸಿನಿಮಾ ಇದಾಗಿತ್ತು. ಅಕ್ಟೋಬರ್ 22, 1999 ರಂದು ಈ ಸಿನಿಮಾ ಬಿಡುಗಡೆ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ