AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ’ ಆಯ್ತು ಈಗ ವಿಶೇಷ ದಿನದಂದು ‘ಉಪೇಂದ್ರ’ ಸಿನಿಮಾ ಮರು ಬಿಡುಗಡೆ

Upendra: ಉಪೇಂದ್ರ ನಟಿಸಿ ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಇದೀಗ ಉಪೇಂದ್ರ ನಟಿಸಿ ನಿರ್ದೇಶಿಸಿದ್ದ ಮತ್ತೊಂದು ಹಿಟ್ ಸಿನಿಮಾ ‘ಉಪೇಂದ್ರ’ ವಿಶೇಷ ದಿನದಂದು ಮರು ಬಿಡುಗಡೆ ಆಗಲಿಕ್ಕಿದೆ.

‘ಎ’ ಆಯ್ತು ಈಗ ವಿಶೇಷ ದಿನದಂದು ‘ಉಪೇಂದ್ರ’ ಸಿನಿಮಾ ಮರು ಬಿಡುಗಡೆ
ಉಪೇಂದ್ರ
ಮಂಜುನಾಥ ಸಿ.
|

Updated on: Sep 06, 2024 | 5:03 PM

Share

ಕೆಲ ತಿಂಗಳ ಹಿಂದೆ ಉಪೇಂದ್ರ ನಟಿಸಿ ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ ಮರು ಬಿಡುಗಡೆ ಆಗಿ ಕ್ರೇಜ್ ಹುಟ್ಟಿಸಿತ್ತು. ಉಪೇಂದ್ರ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು, ಕನ್ನಡದ ‘ಕಲ್ಟ್’ ಸಿನಿಮಾಗಳಲ್ಲಿ ಒಂದು ಎನ್ನಬಹುದ ‘ಎ’ ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ನೋಡಿ ಖುಷಿ ಪಟ್ಟಿದ್ದರು. ‘ಎ’ ಸಿನಿಮಾದ ಮರು ಬಿಡುಗಡೆಯ ಅಬ್ಬರ ಕಂಡು ಇನ್ನೂ ಕೆಲವು ಹಳೆ ಕನ್ನಡ ಸಿನಿಮಾಗಳನ್ನು ಬಿಡುಗಡೆ ಮಾಡಲಾಯ್ತಾದರೂ ಅವ್ಯಾವೂ ಅಂಥಹಾ ಒಳ್ಳೆಯ ಪ್ರದರ್ಶನ ಕಾಣಲಿಲ್ಲ. ಈಗ ಮತ್ತೊಮ್ಮೆ ಉಪೇಂದ್ರ ನಟಿಸಿ ನಿರ್ದೇಶಿಸಿರುವ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ.

ಇದೇ ತಿಂಗಳಿನ 18 ನಟ, ನಿರ್ದೇಶಕ ಉಪೇಂದ್ರ ಅವರ ಹುಟ್ಟುಹಬ್ಬ. ಅವರ ಜನ್ಮದಿನದ ವಿಶೇಷವಾಗಿ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. 1999 ರಲ್ಲಿ ಬಿಡುಗಡೆ ಆಗಿದ್ದು ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತ್ತು. ವಿಚಿತ್ರ ಕತೆ, ನಿರೂಪಣಾ ಶೈಲಿ ಹೊಂದಿದ್ದ ‘ಉಪೇಂದ್ರ’ ಸಿನಿಮಾ ಯುವ ಪ್ರೇಕ್ಷಕರನ್ನು ಬಹುವಾಗಿ ಸೆಳೆದಿತ್ತು. ಅಲ್ಲದೆ ಭಿನ್ನ ರೀತಿಯ ಕತೆ ಹೇಳುವ ಉಪೇಂದ್ರ ಅವರ ಶೈಲಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದನ್ನೂ ಓದಿ:ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾದಿಂದ ಉಪೇಂದ್ರ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆ

‘ಉಪೇಂದ್ರ’ ಸಿನಿಮಾನಲ್ಲಿ ನಾಯಕ ಉಪೇಂದ್ರ ನಾನು ಹೆಸರಿನ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದಲ್ಲಿ ರವೀನಾ ಟಂಡನ್, ಪ್ರೇಮಾ ಹಾಗೂ ದಾಮಿನಿ ನಾಯಕಿಯರಾಗಿ ನಟಿಸಿದ್ದರು. ವ್ಯಕ್ತಿಯೊಬ್ಬನ ಜೀವನದಲ್ಲಿ ಹಣ, ಜವಾಬ್ದಾರಿ ಹಾಗೂ ಪ್ರೀತಿ ಎಷ್ಟು ಮುಖ್ಯ ಹಾಗೂ ಅವುಗಳು ವಹಿಸುವ ಪಾತ್ರಗಳ ಬಗ್ಗೆ ಕತೆಯ ಮೂಲಕ ಉಪೇಂದ್ರ ಹೇಳಿದ್ದರು. ಮಾರಿಮುತ್ತು ವಿಲನ್ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾಕ್ಕೆ ಆಗಿನ ಕಾಲದಲ್ಲಿ ಕೆಲವರು ವಿರೋಧ ಸಹ ಮಾಡಿದ್ದರು. ಏನೇ ಆದರೂ ಈ ಸಿನಿಮಾ ಹಿಟ್ ಆಗಿದ್ದಲ್ಲದೆ ಆಗಿನ ಕಾಲಕ್ಕೆ ಸುಮಾರು 10 ಕೋಟಿ ಕಲೆಕ್ಷನ್ ಸಹ ಮಾಡಿತ್ತು.

ಇದೀಗ ‘ಉಪೇಂದ್ರ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿದ್ದು, ಉಪೇಂದ್ರ ಜನ್ಮದಿನವೂ ಹತ್ತಿರ ಇರುವ ಕಾರಣ, ಇದೇ ದಿನ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾವನ್ನು ಶಿಲ್ಪಾ ಶ್ರೀನಿವಾಸ್ ನಿರ್ಮಾಣ ಮಾಡಿದ್ದರು, ಗುರುಕಿರಣ್ ನಿರ್ದೇಶನ ಮಾಡಿದ್ದರು. ಉಪೇಂದ್ರ, ಪೂರ್ಣ ಪ್ರಮಾಣದ ನಾಯಕನಾಗಿ ನಟಿಸಿದ ಎರಡನೇ ಸಿನಿಮಾ ಇದಾಗಿತ್ತು. ಅಕ್ಟೋಬರ್ 22, 1999 ರಂದು ಈ ಸಿನಿಮಾ ಬಿಡುಗಡೆ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ