AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್’ ಚಿತ್ರದಲ್ಲೇಕೆ ಬರ್ತಾರೆ ಉಪೇಂದ್ರ? ಆ ಟ್ವಿಸ್ಟ್ ಕೊಡಲು ಇತ್ತು ಕಾರಣ  

18 ಲಕ್ಷದಲ್ಲಿ ‘ಶ್​’ ಸಿನಿಮಾ ರೆಡಿ ಆಗಿತ್ತು. ಈ ಸಿನಿಮಾದಲ್ಲಿ ನಟಿಸೋಕೆ ಕಾಶಿನಾಥ್ ಒಪ್ಪಿಕೊಂಡರು. ಆ ರೀತಿ ಆದಾಗ ಮೂಡಿಬಂದಿದ್ದು ‘ಶ್​’ ಸಿನಿಮಾ. ಈ ಚಿತ್ರ ಹಾರರ್​ ಶೈಲಿಯಲ್ಲಿ ಇತ್ತು. ಆಗಿನ ಕಾಲದಲ್ಲಿ ಸೂಪರ್ ಹಿಟ್ ಆದ ಈ ಚಿತ್ರಕ್ಕೆ ಭರ್ಜರಿ ಮೆಚ್ಚುಗೆ ಸಿಕ್ಕಿತ್ತು. ಈಗಲೂ ಅನೇಕರ ಫೇವರಿಟ್ ಆಗಿ ಈ ಸಿನಿಮಾ ಇದೆ.

‘ಶ್’ ಚಿತ್ರದಲ್ಲೇಕೆ ಬರ್ತಾರೆ ಉಪೇಂದ್ರ? ಆ ಟ್ವಿಸ್ಟ್ ಕೊಡಲು ಇತ್ತು ಕಾರಣ  
ಉಪೇಂದ್ರ (ಚಿತ್ರ ಕೃಪೆ: ಎಸ್​ಜಿವಿ)
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Dec 10, 2024 | 7:47 AM

Share

‘ಶ್’ ಸಿನಿಮಾ ಈಗಲೂ ಪ್ರೇಕ್ಷಕರಿಗೆ ಸಖತ್ ಇಷ್ಟ. ಈ ಸಿನಿಮಾ ಅನೇಕರ ಫೇವರಿಟ್ ಎನಿಸಿಕೊಂಡಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಉಪೇಂದ್ರ ಅವರು. ಈ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಕೂಡ ಮಾಡಿದ್ದರು. ಅವರ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿತ್ತು. ಅತಿಥಿಯಾಗಿ ಬಂದು ಹೋಗುವ ಅವರು ಸಾಕಷ್ಟು ಗಮನ ಸೆಳೆದಿದ್ದರು. ಈ ಪಾತ್ರವನ್ನು ತರಬೇಕು ಎನ್ನುವ ಕಾನ್ಸೆಪ್ಟ್ ಬಂದಿದ್ದು ಹೇಗೆ ಎಂಬ ಬಗ್ಗೆ ಉಪೇಂದ್ರ ಹೇಳಿಕೊಂಡಿದ್ದರು.

ಕಾಶಿನಾಥ್ ಅವರು ‘ಶ್​’ ಚಿತ್ರದಲ್ಲಿ ಡೈರೆಕ್ಟರ್ ಪಾತ್ರ ಮಾಡಿದ್ದಾರೆ. ಅವರು ಶೂಟಿಂಗ್​ಗೆ ತೆರಳುತ್ತಾರೆ. ಮಧ್ಯಂತರ ಸಂದರ್ಭದಲ್ಲಿ ಉಪೇಂದ್ರ ಅವರು ಪೊಲೀಸ್ ಅಧಿಕಾರಿಯಾಗಿ ಎಂಟ್ರಿ ಕೊಡುತ್ತಾರೆ. ‘ಕಾಶಿನಾಥ್ ನಕಲಿ ಡೈರೆಕ್ಟರ್’ ಎಂದು ಹೇಳುತ್ತಾರೆ. ಅಲ್ಲಿಗೆ ಮಧ್ಯಂತರ. ಆ ಬಳಿಕ ಟ್ಯಾಲೆಂಟ್ ತೋರಿಸಲು ಈ ರೀತಿ ಮಾಡಿದೆ ಎಂದು ಉಪೇಂದ್ರ ಹೇಳುವಾಗ ಅವರಿಗೆ ಏಟುಗಳು ಬೀಳುತ್ತವೆ. ಈ ದೃಶ್ಯ ಇಟ್ಟಿದ್ದು ಏಕೆ ಎಂಬುದನ್ನು ಉಪೇಂದ್ರ ಹೇಳಿದ್ದರು.

‘ಮಧ್ಯಂತರಕ್ಕೆ ಒಂದು ಜರ್ಕ್ ಬೇಕಿತ್ತು. ಆಗ ಈ ಐಡಿಯಾ ಬಂತು. ಬಂದು ಯಾರನ್ನಾದರೂ ಅರೆಸ್ಟ್ ಮಾಡಿದ್ರೆ ಹೇಗೆ? ಕಾಶಿನಾಥ್​ನ ಅರೆಸ್ಟ್ ಮಾಡಿ ಅದಕ್ಕೆ ಲಾಜಿಕ್ ಕೊಟ್ವಿ. ನಂತರ ಟ್ಯಾಲೆಂಟ್ ತೋರಿಸೋಕೆ ಬಂದೆ ಅಂತ ಹೇಳಿದೆವು. ಆ ಪಾತ್ರದಲ್ಲಿ ನಾನೇ ನಟಿಸುತ್ತೇನೆ ಎಂದು ಮುಂದೆಬಂದೆ’ ಎಂದಿದ್ದಾರೆ ಉಪೇಂದ್ರ. ಶಂಕರ್​ನಾಗ್ ಅವರಿಂದ ಸ್ಫೂರ್ತಿ ಪಡೆದು ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದರು ಉಪೇಂದ್ರ.

18 ಲಕ್ಷದಲ್ಲಿ ‘ಶ್​’ ಸಿನಿಮಾ ರೆಡಿ ಆಗಿತ್ತು. ಈ ಸಿನಿಮಾದಲ್ಲಿ ನಟಿಸೋಕೆ ಕಾಶಿನಾಥ್ ಒಪ್ಪಿಕೊಂಡರು. ಆ ರೀತಿ ಆದಾಗ ಮೂಡಿಬಂದಿದ್ದು ‘ಶ್​’ ಸಿನಿಮಾ. ಈ ಚಿತ್ರ ಹಾರರ್​ ಶೈಲಿಯಲ್ಲಿ ಇತ್ತು. ಆಗಿನ ಕಾಲದಲ್ಲಿ ಸೂಪರ್ ಹಿಟ್ ಆದ ಈ ಚಿತ್ರಕ್ಕೆ ಭರ್ಜರಿ ಮೆಚ್ಚುಗೆ ಸಿಕ್ಕಿತ್ತು. ಈಗಲೂ ಅನೇಕರ ಫೇವರಿಟ್ ಆಗಿ ಈ ಸಿನಿಮಾ ಇದೆ.

ಇದನ್ನೂ ಓದಿ: ಶಿವಣ್ಣ-ಉಪೇಂದ್ರರ ಸಿನಿಮಾ ತಂಡ ಸೇರಿದ ಹಾಲಿವುಡ್ ತಂತ್ರಜ್ಞರು

ಉಪೇಂದ್ರ ಅವರು ‘ಯುಐ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಡಿಸೆಂಬರ್ 20ರಂದು ರಿಲೀಸ್ ಆಗಲಿದೆ. ಈ ಚಿತ್ರ ಪ್ರಚಾರದಲ್ಲಿ ಅವರು ಬ್ಯುಸಿ ಇದ್ದಾರೆ. ಈ ಚಿತ್ರ ಭವಿಷ್ಯದಲ್ಲಿ ಸಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 7:45 am, Tue, 10 December 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ