AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್​, ಶ್ರುತಿ, ಉಪೇಂದ್ರ ಜನ್ಮದಿನ; ಚಿತ್ರರಂಗದ ಸಾಧಕರಿಗೆ ಅಭಿಮಾನಿಗಳ ಶುಭಾಶಯ

Upendra Vishnuvardhan Shruthi Birthday: ‘ಸಾಹಸ ಸಿಂಹ’ ವಿಷ್ಣುವರ್ಧನ್​, ಹಿರಿಯ ನಟಿ ಶ್ರುತಿ, ‘ರಿಯಲ್​ ಸ್ಟಾರ್​’ ಉಪೇಂದ್ರ ಅವರಿಗೆ ಇಂದು (ಸೆ.18) ಹುಟ್ಟುಹಬ್ಬದ ಸಂಭ್ರಮ. ಈ ಪ್ರಯುಕ್ತ ಎಲ್ಲರಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.

ವಿಷ್ಣುವರ್ಧನ್​, ಶ್ರುತಿ, ಉಪೇಂದ್ರ ಜನ್ಮದಿನ; ಚಿತ್ರರಂಗದ ಸಾಧಕರಿಗೆ ಅಭಿಮಾನಿಗಳ ಶುಭಾಶಯ
ವಿಷ್ಣುವರ್ಧನ್, ಶ್ರುತಿ, ಉಪೇಂದ್ರ
TV9 Web
| Edited By: |

Updated on:Sep 18, 2022 | 6:36 AM

Share

ಕನ್ನಡ ಚಿತ್ರರಂಗದ ಪಾಲಿಗೆ ಸೆಪ್ಟೆಂಬರ್​ 18 ಎಂದರೆ ತುಂಬ ಸ್ಪೆಷಲ್​. ಯಾಕೆಂದರೆ, ಇಂದು ಉಪೇಂದ್ರ (Upendra), ವಿಷ್ಣುವರ್ಧನ್​, ಶ್ರುತಿ (Shruthi) ಅವರ ಜನ್ಮದಿನ. ಸ್ಯಾಂಡಲ್​ವುಡ್​ನಲ್ಲಿ ಈ ತಾರೆಯರು ಮಾಡಿದ ಸಾಧನೆ ಅಪಾರ. ಒಂದೇ ದಿನ ಈ ಮೂವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಸೆಲೆಬ್ರಿಟಿಗಳು ಮತ್ತು ಸ್ನೇಹಿತರು ಕೂಡ ವಿಶ್​ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಶುಭಾಶಯದ ಸಂದೇಶಗಳು ಹರಿದು ಬರುತ್ತಿವೆ. ಚಂದನವನದಲ್ಲಿ ವಿಷ್ಣುವರ್ಧನ್​ (Vishnuvardhan), ಉಪೇಂದ್ರ ಹಾಗೂ ಶ್ರುತಿ ಅವರು ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಆ ಮೂಲಕ ಅವರು ಹಲವರಿಗೆ ಸ್ಫೂರ್ತಿ ಆಗಿದ್ದಾರೆ.

ಉಪೇಂದ್ರ ಅವರ ಪಾಲಿಗೆ ಈ ವರ್ಷದ ಬರ್ತ್​ಡೇ ಹೆಚ್ಚು ವಿಶೇಷವಾಗಿದೆ. ಅವರ ನಟಿಸಿರುವ ‘ಕಬ್ಜ’ ಸಿನಿಮಾದ ಟೀಸರ್​ ಬಿಡುಗಡೆ ಆಗಿದೆ. ಜನ್ಮದಿನಕ್ಕಿಂತ ಒಂದು ದಿನ ಮುಂಚೆ ಬಿಡುಗಡೆ ಆಗಿರುವ ಈ ಟೀಸರ್​ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೇ, ಅವರು ನಟಿಸಿ, ನಿರ್ದೇಶನ ಮಾಡುತ್ತಿರುವ ‘ಯುಐ’ ಚಿತ್ರತಂಡದಿಂದ ಇಂದು ವಿಶೇಷ ವಿಡಿಯೋ ರಿಲೀಸ್​ ಆಗಲಿದೆ. ನಿರ್ದೇಶಕನಾಗಿ, ನಟನಾಗಿ ಉಪೇಂದ್ರ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ. ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ತಮ್ಮ ಮನೆ ಎದುರು ಜಮಾಯಿಸುವ ಅಭಿಮಾನಿಗಳನ್ನು ಇಂದು ಉಪ್ಪಿ ಭೇಟಿ ಮಾಡಲಿದ್ದಾರೆ.

ಕನ್ನಡ ಚಿತ್ರರಂಗ ಎಂದಿಗೂ ಮರೆಯದಂತಹ ವ್ಯಕ್ತಿತ್ವ ವಿಷ್ಣುವರ್ಧನ್​ ಅವರದ್ದು. ‘ಸಾಹಸ ಸಿಂಹ’ ಎಂದೇ ಫೇಮಸ್​ ಆದ ಅವರು ಒಂದಕ್ಕಿಂತ ಒಂದು ಡಿಫರೆಂಟ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡರು. ಇಂದು ಭೌತಿಕವಾಗಿ ಅವರು ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ ಜನರು ಅವರ ಮೇಲೆ ಇಟ್ಟಿರುವ ಅಭಿಮಾನ ಶಾಶ್ವತ. ಬೆಂಗಳೂರಿನ ಅಭಿಮಾನ್​ ಸ್ಟುಡಿಯೋದಲ್ಲಿ ಅವರ ಸಮಾಧಿ ಇದೆ. ಹುಟ್ಟುಹಬ್ಬದ ಪ್ರಯುಕ್ತ ಅಲ್ಲಿ ವಿಷ್ಣುವರ್ಧನ್​ ಅವರ ಹಲವು ಕಟೌಟ್​ಗಳನ್ನು ನಿಲ್ಲಿಸಲಾಗಿದೆ. ಆ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ.

ಇದನ್ನೂ ಓದಿ
Image
Upendra: ‘ಈ ಕೆಲಸ ಮಾಡಿ, ನಮ್ಮ ಮನೆಗೆ ಬನ್ನಿ’; ಫ್ಯಾನ್ಸ್​ಗೆ ಆಹ್ವಾನ ನೀಡಿದ ಉಪೇಂದ್ರ: ಏನಿದು ಟಾಸ್ಕ್​?
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ
Image
‘ಗಂಧದ ಗುಡಿ’ ಬಳಿಕ ರಾಜ್​ಕುಮಾರ್​-ವಿಷ್ಣುವರ್ಧನ್​ ಏಕೆ ಒಟ್ಟಾಗಿ ನಟಿಸಲಿಲ್ಲ? ಕಾರಣ ನೀಡಿದ ಹಿರಿಯ ನಟ
Image
‘ವಿಷ್ಣುವರ್ಧನ್​-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್​

ಹಿರಿಯ ನಟಿ ಶ್ರುತಿ ಅವರು ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಎಮೋಷನಲ್​ ಸಿನಿಮಾಗಳ ಮೂಲಕ ಅವರು ಒಂದು ಕಾಲದಲ್ಲಿ ಇಡೀ ಕರುನಾಡಿನ ಪ್ರೇಕ್ಷಕರನ್ನು ತಮ್ಮತ್ತ ಸೆಳೆದುಕೊಂಡಿದ್ದರು. ಹಾಗಂತ ಅವರು ಅಷ್ಟಕ್ಕೇ ಸೀಮಿತವಾಗಲಿಲ್ಲ. ಕಾಮಿಡಿ ಪಾತ್ರಗಳನ್ನೂ ಮಾಡಿ ಸೈ ಎನಿಸಿಕೊಂಡರು. ಈ ಅಪ್ಪಟ ಕಲಾವಿದೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಎಲ್ಲರೂ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಪೋಷಕ ಪಾತ್ರಗಳನ್ನು ಮಾಡುತ್ತ ಶ್ರುತಿ ಅವರು ಹತ್ತಾರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:30 am, Sun, 18 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?