ಕೆರೆ ಬೇಟೆ: ‘ಮಲೆನಾಡ ಗೊಂಬೆಗೆ’ ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ

Kere Bete: ‘ಕೆರೆ ಬೇಟೆ’ ಸಿನಿಮಾ ತಮ್ಮ ಪೋಸ್ಟರ್, ಟೀಸರ್​ಗಳಿಂದ ಸಖತ್ ಗಮನ ಸೆಳೆದಿದೆ. ಇದೀಗ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು ಹಾಡು ನೋಡಿದ ಉಪೇಂದ್ರ ಭೇಷ್ ಎಂದಿದ್ದಾರೆ.

ಕೆರೆ ಬೇಟೆ: 'ಮಲೆನಾಡ ಗೊಂಬೆಗೆ' ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ
Follow us
|

Updated on: Feb 03, 2024 | 10:52 PM

‘ಕೆರೆಬೇಟೆ’ ಸ್ಯಾಂಡಲ್ ವುಡ್​ನಲ್ಲಿ (Sandalwood) ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಿದ್ದ ಸಿನಿಮಾ ತಂಡ ಇದೀಗ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ವಿಶೇಷ ಅಂದರೆ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ರಿಲೀಸ್ ಮಾಡಿದ್ದಾರೆ. ‘ಮಲೆನಾಡ ಬೊಂಬೆ’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಹಾಡು ನೋಡಿ ರಿಯಲ್ ಸ್ಟಾರ್ ಉಪೇಂದ್ರ ಕೂಡ ಫಿದಾ ಆಗಿದ್ದಾರೆ. ಮಲೆನಾಡಿನ ಸುತ್ತಮುತ್ತವೇ ಈ ಹಾಡಿನ ಚಿತ್ರೀಕರಣ ಮಾಡಿರುವುದು ವಿಶೇಷ.

‘ಕೆರೆಬೇಟೆ’ ನಿರ್ದೇಶಕ ರಾಜ್ ಗುರು ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ನಾಯಕ ಗೌರಿಶಂಕರ್ ಮತ್ತು ನಾಯಕಿ ಬಿಂಧು ಶಿವರಾಮ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ರೋಮ್ಯಾಂಟಿಕ್ ಹಾಡು ಇದಾಗಿದೆ. ಅಂದಹಾಗೆ ಈ ಸುಂದರ ಹಾಡಿಗೆ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೇ…’ ಹಾಡಿನ ಖ್ಯಾತಿಯ ಪ್ರಮೋದ್ ಮರುವಂತೆ ಸಾಹಿತ್ಯ ರಚಿಸಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಸಾಯಿ ವಿಘ್ನೇಶ್ ಮತ್ತು ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.

ಇದನ್ನೂ ಓದಿ:ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣ ಗಣರಾಜ್ಯೋತ್ಸವ, ಉಪೇಂದ್ರ ವಿಶೇಷ ಅತಿಥಿ

ಈ ಹಾಡಿನ ಚಿತ್ರೀಕರಣದ ಅನುಭವ ತೆರೆದಿಟ್ಟ ಸಿನಿಮಾ ತಂಡ. ‘ಈ ಹಾಡನ್ನು ತುಂಬಾ ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಅತಿಯಾದ ಮಳೆಯಿಂದ ಅನೇಕ ಬಾರಿ ಚಿತ್ರಿಕರಣ ನಿಲ್ಲಿಸಲಾಗಿತ್ತು. ಮನುಷ್ಯರೇ ಓಡಾಡದೇ ಇರುವ ಜಾಗದಲ್ಲಿ ಶೂಟಿಂಗ್ ಮಾಡಿದ್ದೇವೆ. ಪ್ರಾಣಿಗಳ ಭಯ ಕೂಡ ಇತ್ತು. ಮಲೆನಾಡಿನ ತುಂಬಾ ರಿಮೋಟ್ ಏರಿಯಾದಲ್ಲಿ ನಾಲ್ಕು ದಿನಗಳ ಕಾಲ ಈ ಹಾಡನ್ನು ಸೆರೆಹಿಡಿದಿದ್ದೇವೆ. ಈ ಹಾಡಿಗಾಗಿ ಹರಸಾಹಸ ಪಟ್ಟಿದ್ದೇವೆ’ ಎನ್ನುತ್ತಾರೆ.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಇದೀಗ ಹಾಡಿನ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮುಂದಿನ ತಿಂಗಳು ಅಂದರೆ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೀಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​