AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಬೇಟೆ: ‘ಮಲೆನಾಡ ಗೊಂಬೆಗೆ’ ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ

Kere Bete: ‘ಕೆರೆ ಬೇಟೆ’ ಸಿನಿಮಾ ತಮ್ಮ ಪೋಸ್ಟರ್, ಟೀಸರ್​ಗಳಿಂದ ಸಖತ್ ಗಮನ ಸೆಳೆದಿದೆ. ಇದೀಗ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು ಹಾಡು ನೋಡಿದ ಉಪೇಂದ್ರ ಭೇಷ್ ಎಂದಿದ್ದಾರೆ.

ಕೆರೆ ಬೇಟೆ: 'ಮಲೆನಾಡ ಗೊಂಬೆಗೆ' ಮನಸೋತ ಮನೆಹಾಳನಿಗೆ ಭೇಷ್ ಎಂದ ರಿಯಲ್ ಸ್ಟಾರ್ ಉಪ್ಪಿ
ಮಂಜುನಾಥ ಸಿ.
|

Updated on: Feb 03, 2024 | 10:52 PM

Share

‘ಕೆರೆಬೇಟೆ’ ಸ್ಯಾಂಡಲ್ ವುಡ್​ನಲ್ಲಿ (Sandalwood) ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಿದ್ದ ಸಿನಿಮಾ ತಂಡ ಇದೀಗ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ವಿಶೇಷ ಅಂದರೆ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ರಿಲೀಸ್ ಮಾಡಿದ್ದಾರೆ. ‘ಮಲೆನಾಡ ಬೊಂಬೆ’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಹಾಡು ನೋಡಿ ರಿಯಲ್ ಸ್ಟಾರ್ ಉಪೇಂದ್ರ ಕೂಡ ಫಿದಾ ಆಗಿದ್ದಾರೆ. ಮಲೆನಾಡಿನ ಸುತ್ತಮುತ್ತವೇ ಈ ಹಾಡಿನ ಚಿತ್ರೀಕರಣ ಮಾಡಿರುವುದು ವಿಶೇಷ.

‘ಕೆರೆಬೇಟೆ’ ನಿರ್ದೇಶಕ ರಾಜ್ ಗುರು ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ನಾಯಕ ಗೌರಿಶಂಕರ್ ಮತ್ತು ನಾಯಕಿ ಬಿಂಧು ಶಿವರಾಮ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ರೋಮ್ಯಾಂಟಿಕ್ ಹಾಡು ಇದಾಗಿದೆ. ಅಂದಹಾಗೆ ಈ ಸುಂದರ ಹಾಡಿಗೆ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೇ…’ ಹಾಡಿನ ಖ್ಯಾತಿಯ ಪ್ರಮೋದ್ ಮರುವಂತೆ ಸಾಹಿತ್ಯ ರಚಿಸಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಸಾಯಿ ವಿಘ್ನೇಶ್ ಮತ್ತು ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.

ಇದನ್ನೂ ಓದಿ:ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣ ಗಣರಾಜ್ಯೋತ್ಸವ, ಉಪೇಂದ್ರ ವಿಶೇಷ ಅತಿಥಿ

ಈ ಹಾಡಿನ ಚಿತ್ರೀಕರಣದ ಅನುಭವ ತೆರೆದಿಟ್ಟ ಸಿನಿಮಾ ತಂಡ. ‘ಈ ಹಾಡನ್ನು ತುಂಬಾ ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಅತಿಯಾದ ಮಳೆಯಿಂದ ಅನೇಕ ಬಾರಿ ಚಿತ್ರಿಕರಣ ನಿಲ್ಲಿಸಲಾಗಿತ್ತು. ಮನುಷ್ಯರೇ ಓಡಾಡದೇ ಇರುವ ಜಾಗದಲ್ಲಿ ಶೂಟಿಂಗ್ ಮಾಡಿದ್ದೇವೆ. ಪ್ರಾಣಿಗಳ ಭಯ ಕೂಡ ಇತ್ತು. ಮಲೆನಾಡಿನ ತುಂಬಾ ರಿಮೋಟ್ ಏರಿಯಾದಲ್ಲಿ ನಾಲ್ಕು ದಿನಗಳ ಕಾಲ ಈ ಹಾಡನ್ನು ಸೆರೆಹಿಡಿದಿದ್ದೇವೆ. ಈ ಹಾಡಿಗಾಗಿ ಹರಸಾಹಸ ಪಟ್ಟಿದ್ದೇವೆ’ ಎನ್ನುತ್ತಾರೆ.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಇದೀಗ ಹಾಡಿನ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮುಂದಿನ ತಿಂಗಳು ಅಂದರೆ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೀಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು