AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ಗೆ ಉಪೇಂದ್ರ ಅತಿಥಿ; ಸಮಯ, ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ

Vikrant Rona pre-release event: ಹೈದರಾಬಾದ್​ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಕಿಚ್ಚ ಸುದೀಪ್​ ಅವರು ಬೆಂಗಳೂರಿನ ಇವೆಂಟ್​ನಲ್ಲಿ ಭಾಗಿ ಆಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಪೇಂದ್ರ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

Vikrant Rona: ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ಗೆ ಉಪೇಂದ್ರ ಅತಿಥಿ; ಸಮಯ, ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ
ಕಿಚ್ಚ ಸುದೀಪ್, ಉಪೇಂದ್ರ
TV9 Web
| Updated By: ಮದನ್​ ಕುಮಾರ್​|

Updated on:Jul 26, 2022 | 1:22 PM

Share

ಬಿಡುಗಡೆಗೂ ಮುನ್ನವೇ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಧೂಳೆಬ್ಬಿಸುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ. ದೇಶಾದ್ಯಂತ ‘ವಿಕ್ರಾಂತ್​ ರೋಣ’ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಹಲವು ಭಾಷೆಗಳಲ್ಲಿ ಈ ಚಿತ್ರ ರಿಲೀಸ್​ ಆಗಲಿರುವುದರಿಂದ ಕಿಚ್ಚ ಸುದೀಪ್​ (Kichcha Sudeep) ಅವರು ಅನೇಕ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸೋಮವಾರ ಸಂಜೆ (ಜುಲೈ 25) ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯಿತು. ಮಂಗಳವಾರ (ಜುಲೈ 26) ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ​‘ವಿಕ್ರಾಂ​ತ್​ ರೋಣ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯುತ್ತಿದೆ. ಹೈದರಾಬಾದ್​ನಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ಬೆಂಗಳೂರಿನಲ್ಲಿ ‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರು ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರುತ್ತಿರುವುದು ವಿಶೇಷ.

ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ‘ಲುಲು ಗ್ಲೋಬಲ್​ ಮಾಲ್​’ನಲ್ಲಿ ಇಂದು ಸಂಜೆ 6.30ಕ್ಕೆ ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಹೈದರಾಬಾದ್​ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಸುದೀಪ್​ ಅವರು ಬೆಂಗಳೂರಿನ ಇವೆಂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ಉಪೇಂದ್ರ ಏನು ಮಾತನಾಡಲಿದ್ದಾರೆ ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಸುದೀಪ್​ ಮತ್ತು ಉಪೇಂದ್ರ ನಡುವೆ ಉತ್ತಮ ಸ್ನೇಹ ಇದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರಿಬ್ಬರು ನಟಿಸಿದ್ದರು. ಈಗ ‘ಕಬ್ಜ’ ಚಿತ್ರದಲ್ಲೂ ಈ ಸ್ಟಾರ್​ ಕಲಾವಿದರು ಒಂದಾಗುತ್ತಿದ್ದಾರೆ. ಉಪ್ಪಿ ಆಗಮನದಿಂದ ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ ಕಳೆಗಟ್ಟಲಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿ ಆಗಿದ್ದರು.

ನಿರ್ಮಾಪಕ ಜಾಕ್​ ಮಂಜು ಅವರು ‘ವಿಕ್ರಾಂತ್​ ರೋಣ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳನ್ನು ಹಾಕಿ ಶೂಟಿಂಗ್​ ಮಾಡಲಾಗಿದೆ. 3ಡಿ ವರ್ಷನ್​ನಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿರುವುದು ಹೈಪ್​ ಹೆಚ್ಚಲು ಕಾರಣ ಆಗಿದೆ. ಅನೂಪ್​ ಭಂಡಾರಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸುದೀಪ್​ ಜೊತೆ ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​, ನಿರೂಪ್​ ಭಂಡಾರಿ ನಟಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್ ಸಂಗೀತ ನೀಡಿರುವ ಹಾಡುಗಳು ಧೂಳೆಬ್ಬಿಸುತ್ತಿವೆ.

ಎಲ್ಲ ಚಿತ್ರಮಂದಿರಗಳ ಎದುರು ಸುದೀಪ್​ ಅವರ ಕಟೌಟ್​ ರಾರಾಜಿಸುತ್ತಿವೆ. ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯಗಳಲ್ಲೂ ಈ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಲಾಗುತ್ತಿದೆ. ಚೆನ್ನೈನ ‘ಸತ್ಯಂ ಸಿನಿಮಾಸ್​’ ಎದುರು ಕಿಚ್ಚನ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ.

Published On - 1:17 pm, Tue, 26 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!