AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ಗೆ ಉಪೇಂದ್ರ ಅತಿಥಿ; ಸಮಯ, ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ

Vikrant Rona pre-release event: ಹೈದರಾಬಾದ್​ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಕಿಚ್ಚ ಸುದೀಪ್​ ಅವರು ಬೆಂಗಳೂರಿನ ಇವೆಂಟ್​ನಲ್ಲಿ ಭಾಗಿ ಆಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಪೇಂದ್ರ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

Vikrant Rona: ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ಗೆ ಉಪೇಂದ್ರ ಅತಿಥಿ; ಸಮಯ, ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ
ಕಿಚ್ಚ ಸುದೀಪ್, ಉಪೇಂದ್ರ
TV9 Web
| Edited By: |

Updated on:Jul 26, 2022 | 1:22 PM

Share

ಬಿಡುಗಡೆಗೂ ಮುನ್ನವೇ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಧೂಳೆಬ್ಬಿಸುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ. ದೇಶಾದ್ಯಂತ ‘ವಿಕ್ರಾಂತ್​ ರೋಣ’ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಹಲವು ಭಾಷೆಗಳಲ್ಲಿ ಈ ಚಿತ್ರ ರಿಲೀಸ್​ ಆಗಲಿರುವುದರಿಂದ ಕಿಚ್ಚ ಸುದೀಪ್​ (Kichcha Sudeep) ಅವರು ಅನೇಕ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸೋಮವಾರ ಸಂಜೆ (ಜುಲೈ 25) ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯಿತು. ಮಂಗಳವಾರ (ಜುಲೈ 26) ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ​‘ವಿಕ್ರಾಂ​ತ್​ ರೋಣ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯುತ್ತಿದೆ. ಹೈದರಾಬಾದ್​ನಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ಬೆಂಗಳೂರಿನಲ್ಲಿ ‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರು ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರುತ್ತಿರುವುದು ವಿಶೇಷ.

ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ‘ಲುಲು ಗ್ಲೋಬಲ್​ ಮಾಲ್​’ನಲ್ಲಿ ಇಂದು ಸಂಜೆ 6.30ಕ್ಕೆ ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಹೈದರಾಬಾದ್​ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಸುದೀಪ್​ ಅವರು ಬೆಂಗಳೂರಿನ ಇವೆಂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ಉಪೇಂದ್ರ ಏನು ಮಾತನಾಡಲಿದ್ದಾರೆ ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಸುದೀಪ್​ ಮತ್ತು ಉಪೇಂದ್ರ ನಡುವೆ ಉತ್ತಮ ಸ್ನೇಹ ಇದೆ. ‘ಮುಕುಂದ ಮುರಾರಿ’ ಚಿತ್ರದಲ್ಲಿ ಅವರಿಬ್ಬರು ನಟಿಸಿದ್ದರು. ಈಗ ‘ಕಬ್ಜ’ ಚಿತ್ರದಲ್ಲೂ ಈ ಸ್ಟಾರ್​ ಕಲಾವಿದರು ಒಂದಾಗುತ್ತಿದ್ದಾರೆ. ಉಪ್ಪಿ ಆಗಮನದಿಂದ ‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್ ಇವೆಂಟ್​ ಕಳೆಗಟ್ಟಲಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿ ಆಗಿದ್ದರು.

ನಿರ್ಮಾಪಕ ಜಾಕ್​ ಮಂಜು ಅವರು ‘ವಿಕ್ರಾಂತ್​ ರೋಣ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಬೃಹತ್​ ಸೆಟ್​ಗಳನ್ನು ಹಾಕಿ ಶೂಟಿಂಗ್​ ಮಾಡಲಾಗಿದೆ. 3ಡಿ ವರ್ಷನ್​ನಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿರುವುದು ಹೈಪ್​ ಹೆಚ್ಚಲು ಕಾರಣ ಆಗಿದೆ. ಅನೂಪ್​ ಭಂಡಾರಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸುದೀಪ್​ ಜೊತೆ ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​, ನಿರೂಪ್​ ಭಂಡಾರಿ ನಟಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್ ಸಂಗೀತ ನೀಡಿರುವ ಹಾಡುಗಳು ಧೂಳೆಬ್ಬಿಸುತ್ತಿವೆ.

ಎಲ್ಲ ಚಿತ್ರಮಂದಿರಗಳ ಎದುರು ಸುದೀಪ್​ ಅವರ ಕಟೌಟ್​ ರಾರಾಜಿಸುತ್ತಿವೆ. ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯಗಳಲ್ಲೂ ಈ ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಲಾಗುತ್ತಿದೆ. ಚೆನ್ನೈನ ‘ಸತ್ಯಂ ಸಿನಿಮಾಸ್​’ ಎದುರು ಕಿಚ್ಚನ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ.

Published On - 1:17 pm, Tue, 26 July 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?