Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಗೆ ನಿಮ್ಮ ಮುಂದೆ ಬರ್ತಿದೆ ‘ಯುಐ’ ಸಿನಿಮಾ; ಎಲ್ಲಿ? ಎಷ್ಟು ಗಂಟೆಗೆ?

ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರವು ಮಾರ್ಚ್​ 30ರಂದು ಟಿವಿಯಲ್ಲಿ ಪ್ರಸಾರ ಕಾಣುತ್ತಿದೆ. ಯೇಟರ್‌ನಲ್ಲಿ ಯಶಸ್ವಿಯಾದ ಈ ಚಿತ್ರ ಒಟಿಟಿಗೆ ಬಿಡುಗಡೆಯಾಗದೆ ನೇರವಾಗಿ ಟಿವಿಯಲ್ಲಿ ಪ್ರಸಾರವಾಗುತ್ತಿದೆ. ಚಿತ್ರದಲ್ಲಿ ಸಮಾಜದ ವಿವಿಧ ಅಂಶಗಳನ್ನು ಪ್ರಸ್ತಾಪಿಸಲಾಗಿದೆ. "ಟ್ರೋಲ್" ಹಾಡು ವಿಶೇಷ ಆಕರ್ಷಣೆಯಾಗಿದೆ. ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ’ ಸಿನಿಮಾ ಕೂಡ ಅದೇ ದಿನ ಪ್ರಸಾರ ಕಾಣುತ್ತಿದೆ.

ಯುಗಾದಿಗೆ ನಿಮ್ಮ ಮುಂದೆ ಬರ್ತಿದೆ ‘ಯುಐ’ ಸಿನಿಮಾ; ಎಲ್ಲಿ? ಎಷ್ಟು ಗಂಟೆಗೆ?
ಯುಐ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Mar 26, 2025 | 9:17 AM

‘ಯುಐ’ ಚಿತ್ರವನ್ನು (UI) ಥಿಯೇಟರ್​ನಲ್ಲಿ ನೋಡಿದ ಕೆಲವರು ಮೆಚ್ಚಿಕೊಂಡರು. ಈ ಚಿತ್ರ ಉಪೇಂದ್ರ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಈ ಚಿತ್ರ ಒಟಿಟಿಗೆ ಇನ್ನೂ ಲಗ್ಗೆ ಇಟ್ಟಿಲ್ಲ. ಸಿನಿಮಾ ಒಟಿಟಿಗೆ ಯಾವಾಗ ಬರುತ್ತದೆ ಎಂದು ಕಾದು ಪ್ರೇಕ್ಷಕರು ಸುಸ್ತಾಗಿದ್ದಾರೆ. ಆಗಲೇ ಈ ಸಿನಿಮಾ ಟಿವಿಗೆ ಬರುತ್ತಿದೆ. ಹೌದು, ಟಿವಿಯಲ್ಲಿ ಈ ಚಿತ್ರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಯುಗಾದಿಗೆ ಸರಿಯಾಗಿ ಈ ಸಿನಿಮಾ ನಿಮ್ಮ ಮುಂದೆ ಬರುತ್ತಿದೆ. ಈ ಚಿತ್ರವನ್ನು ಎಲ್ಲಿ ವೀಕ್ಷಿಸಬಹುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಉಪೇಂದ್ರ ನಿರ್ದೇಶನದ ಸಿನಿಮಾಗಳು ಎಂದರೆ ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಉಪ್ಪಿ ನಿರ್ದೇಶನ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಕೋರಿಕೆ. ಹೀಗಾಗಿ ಹಲವು ವರ್ಷಗಳ ಬಳಿಕ ‘ಯುಐ’ ಚಿತ್ರವನ್ನು ಉಪ್ಪಿ ಘೋಷಣೆ ಮಾಡಿದರು. ಈ ಚಿತ್ರ ಕಳೆದ ಡಿಸೆಂಬರ್ 20ರಂದು ಥಿಯೇಟರ್​ನಲ್ಲಿ ಬಿಡುಗಡೆ ಆಯಿತು. ಈಗ ದೊಡ್ಡ ಗ್ಯಾಪ್ ಬಳಿಕ ಟಿವಿಗೆ ಬರುತ್ತಿದೆ.

ಇದನ್ನೂ ಓದಿ
Image
ಭೂಮಿ ಮೇಲಿನ ಮೂರು ವಿಶೇಷ ಪ್ರದೇಶಗಳಲ್ಲಿ ಮನೆ ಹೊಂದಿದ್ದಾರೆ ಪ್ರಕಾಶ್ ರಾಜ್
Image
ಪೊಲೀಸರ ದಾರಿ ತಪ್ಪಿಸಿಲ್ಲ; ರಬ್ಬರ್ ಮಚ್ಚು ಕೊಟ್ಟಿದ್ದಕ್ಕೆ ರಜತ್ ಸ್ಪಷ್ಟನೆ
Image
ವಿನಯ್, ರಜತ್​ಗೆ ಹೆಚ್ಚಿದ ಸಂಕಷ್ಟ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
Image
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ

ಯುಗಾದಿ ಪ್ರಯುಕ್ತ ಮಾರ್ಚ್ 30ರಂದು ‘ಯುಐ’ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ. ಭಾನುವಾರ ಸಂಜೆ 4.30ರಿಂದ ಸಿನಿಮಾ ಪ್ರಸಾರ ಆರಂಭಿಸುತ್ತದೆ. ‘ಯುಐ’ ಸಿನಿಮಾ ಭಿನ್ನವಾಗಿದೆ. ಈ ಚಿತ್ರದಲ್ಲಿ ಹಲವು ವಿಚಾರಗಳನ್ನು ಉಪೇಂದ್ರ ಹೇಳಿದ್ದಾರೆ. ಈ ಚಿತ್ರದ ಒಂದು ದೃಶ್ಯ ಮಿಸ್ ಮಾಡಿಕೊಂಡರೂ ಕಥೆ ಅರ್ಥ ಆಗದೇ ಇರಬಹುದು. ಹೀಗಾಗಿ, ಸಂಪೂರ್ಣವಾಗಿ ಟಿವಿ ಮುಂದೆ ಕುಳಿತಿದ್ದರೆ ಮಾತ್ರ ಸಿನಿಮಾ ಅರ್ಥ ಆಗಲಿದೆ.

View this post on Instagram

A post shared by Zee Kannada (@zeekannada)

ಕಥೆ ಏನು?

‘ಯುಐ’ ಚಿತ್ರದ ಕಥೆ ಏನು ಎಂಬುದನ್ನು ವಿವರಿಸುವುದು ಕಷ್ಟ ಆಗಬಹುದು. ಹೀಗಾಗಿ, ಅದನ್ನು ಸಿನಿಮಾ ನೋಡಿಯೇ ತಿಳಿದುಕೊಳ್ಳಬೇಕು. ಸಮಾಜದ ಹುಳುಕುಗಳನ್ನು ಅವರು ಹೇಳುವ ಪ್ರಯತ್ನ ಮಾಡಿದ್ದಾರೆ. ಅವರದ್ದೇ ಆದ ಪಕ್ಷ ಪ್ರಜಾಕೀಯದ ಐಡಿಯಾಲಜಿಗಳು ಚಿತ್ರದಲ್ಲಿ ಇವೆ. ‘ಟ್ರೋಲ್..’ ಸಾಂಗ್​ ಕೂಡ ಗಮನ ಸೆಳೆದಿದೆ. ಉಪೇಂದ್ರ ಜೊತೆ ಸಾಧು ಕೋಕಿಲ, ರೀಷ್ಮಾ ನಾಣಯ್ಯ, ರವಿ ಶಂಕರ್ ನಟಿಸಿದ್ದಾರೆ. ಇತ್ತೀಚೆಗೆ ನಿಧನ ಹೊಂದಿದ ಗುರು ಪ್ರಸಾದ್ ಕೂಡ ಚಿತ್ರದಲ್ಲಿ ಇದ್ದಾರೆ.

ಇದನ್ನೂ ಓದಿ: ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬರ್ತಿದೆ ‘ಭೀಮ’ ಸಿನಿಮಾ

ಕಲರ್ಸ್​ನಲ್ಲಿ ಭೀಮ

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ’ ಸಿನಿಮಾ ಕೂಡ ಮಾರ್ಚ್​ 30ರಂದು ಪ್ರಸಾರ ಕಾಣುತ್ತಿದೆ. ‘ಯುಐ’ ಚಿತ್ರ 4.30ಕ್ಕೆ ಪ್ರಸಾರ ಆರಂಭಿಸಿದರೆ ‘ಭೀಮ’ ಸಿನಿಮಾ ಸಂಜೆ 7.30ಕ್ಕೆ ಪ್ರಸಾರ ಆಗುತ್ತದೆ. ಕಲರ್ಸ್​ನಲ್ಲಿ ‘ಭೀಮ’ ವೀಕ್ಷಣೆಗೆ ಲಭ್ಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:16 am, Wed, 26 March 25

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ