Urvashi Rautela: ‘ಕಾಂತಾರ 2’ ಚಿತ್ರದಲ್ಲಿ ಊರ್ವಶಿ ರೌಟೇಲಾ ನಟಿಸೋದು ನಿಜವಲ್ಲ; ಫೋಟೋ ಹಿಂದಿನ ಸತ್ಯ ಇಲ್ಲಿದೆ

|

Updated on: Feb 12, 2023 | 3:07 PM

Kantara 2 | Rishab Shetty: ಒಂದೇ ಒಂದು ಫೋಟೋ ಹಂಚಿಕೊಳ್ಳುವ ಮೂಲಕ ಊರ್ವಶಿ ರೌಟೇಲಾ ಅವರು ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದರು. ಆ ಫೋಟೋದ ಅಸಲಿಯತ್ತು ಏನು ಎಂಬುದು ಈಗ ಬಯಲಾಗಿದೆ.

Urvashi Rautela: ‘ಕಾಂತಾರ 2’ ಚಿತ್ರದಲ್ಲಿ ಊರ್ವಶಿ ರೌಟೇಲಾ ನಟಿಸೋದು ನಿಜವಲ್ಲ; ಫೋಟೋ ಹಿಂದಿನ ಸತ್ಯ ಇಲ್ಲಿದೆ
ಊರ್ವಶಿ ರೌಟೇಲಾ, ರಿಷಬ್ ಶೆಟ್ಟಿ
Follow us on

ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸೆನ್ಸೇಷನ್​ ಕ್ರಿಯೇಟ್​ ಮಾಡಿದ್ದಾರೆ. ರಿಷಭ್​ ಪಂತ್​ ಜೊತೆ ಅವರ ಹೆಸರು ತಳುಕು ಹಾಕಿಕೊಂಡಾಗಿನಿಂದಲೂ ಹಲವು ಬಗೆಯ ಸುದ್ದಿಗಳು ಕೇಳಿಬರಲಾರಂಭಿಸಿದವು. ಅಚ್ಚರಿ ಎಂದರೆ ಇತ್ತೀಚೆಗೆ ರಿಷಭ್​ ಪಂತ್​ ಬದಲಿಗೆ ರಿಷಬ್​ ಶೆಟ್ಟಿಯ ಕಾರಣದಿಂದ ಊರ್ವಶಿ ರೌಟೇಲಾ ಹೆಸರು ಮತ್ತೆ ಮುನ್ನೆಲೆಗೆ ಬಂತು. ಅದಕ್ಕೆಲ್ಲ ಕಾರಣ ಆಗಿದ್ದು ಒಂದೇ ಒಂದು ಫೋಟೋ. ರಿಷಬ್​ ಶೆಟ್ಟಿ (Rishab Shetty) ಮತ್ತು ಊರ್ವಶಿ ರೌಟೇಲಾ ಅವರು ಜೊತೆಯಾಗಿ ನಿಂತಿರುವ ಫೋಟೋ ವೈರಲ್​ ಆಯಿತು. ‘ಕಾಂತಾರ 2’ (Kantara 2) ಚಿತ್ರದಲ್ಲಿ ಊರ್ವಶಿ ನಟಿಸುತ್ತಾರೆ ಎಂಬ ಗಾಸಿಪ್​ ಕೂಡ ಹಬ್ಬಿತು. ಆದರೆ ಅದು ನಿಜವಲ್ಲ ಎಂಬುದು ಈಗ ತಿಳಿದುಬಂದಿದೆ. ಪ್ರಚಾರಕ್ಕಾಗಿ ಊರ್ವಶಿ ಅವರು ಇಷ್ಟೆಲ್ಲ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ರಿಷಬ್​ ಶೆಟ್ಟಿ ನಟಿಸಿ ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ‘ಕಾಂತಾರ 2’ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಬಹುತೇಕ ಅದೇ ತಂಡವೇ ಮತ್ತೊಮ್ಮೆ ಒಂದಾಗಲಿದೆ. ಜೊತೆಗೆ ಬೇರೆ ಕಲಾವಿದರು ಕೂಡ ಪಾತ್ರವರ್ಗಕ್ಕೆ ಸೇರ್ಪಡೆ ಆಗಲಿದ್ದಾರೆ. ರಿಷಬ್​ ಶೆಟ್ಟಿ ಜೊತೆಗಿನ ಫೋಟೋ ಹಂಚಿಕೊಂಡು ‘ಕಾಂತಾರ 2 ಲೋಡಿಂಗ್​..’ ಎಂದು ಊರ್ವಶಿ ರೌಟೇಲಾ ಅವರು ಕ್ಯಾಪ್ಷನ್​ ನೀಡಿದ್ದರಿಂದ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದಾರೆ ಎಂದೇ ಊಹಿಸಲಾಗಿತ್ತು. ಆದರೆ ಅದು ನಿಜವಲ್ಲ.

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: ‘ಕಾಂತಾರ’ ತಂಡದವರಿಗೆ ಎಷ್ಟು ಬಾರಿ ಪೇಮೆಂಟ್ ಸಿಕ್ಕಿದೆ? ಅಸಲಿ ವಿಚಾರ ತಿಳಿಸಿದ ರಿಷಬ್ ಶೆಟ್ಟಿ

ಕೆಲವು ಮಾಧ್ಯಮಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ‘ಕಾಂತಾರ 2 ಚಿತ್ರದಲ್ಲಿ ಊರ್ವಶಿ ನಟಿಸುತ್ತಾರೆ ಎಂಬ ಸುದ್ದಿ ಸಂಪೂರ್ಣ ಆಧಾರ ರಹಿತವಾದದ್ದು. ರಿಷಬ್​ ಶೆಟ್ಟಿ ಅವರನ್ನು ಭೇಟಿ ಮಾಡಬೇಕು ಅಂತ ಊರ್ವಶಿ ಮನವಿ ಮಾಡಿಕೊಂಡಿದ್ದರು. ಆ ಸಂದರ್ಭದ ಫೋಟೋವನ್ನು ಈಗ ಅವರು ಇಂಥ ಕ್ಯಾಪ್ಷನ್​ ಮೂಲಕ ಪೋಸ್ಟ್​ ಮಾಡಿದ್ದರಿಂದ ಗಾಳಿಸುದ್ದಿ ಹುಟ್ಟಿಕೊಂಡಿತು’ ಎಂದು ‘ಹೊಂಬಾಳೆ ಫಿಲ್ಮ್ಸ್​’​ ಮೂಲಗಳು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

‘ಕಾಂತಾರ’ ಚಿತ್ರಕ್ಕೆ ಪ್ರೀಕ್ವೆಲ್​ ಮಾಡಲು ರಿಷಬ್​ ಶೆಟ್ಟಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. ಜೊತೆಗೆ ಲೊಕೇಷನ್​ ಹುಡುಕಾಟವೂ ಜೋರಾಗಿದೆ. ಈ ಕಥೆಯಲ್ಲಿನ ದೃಶ್ಯಗಳ ಚಿತ್ರೀಕರಣಕ್ಕೆ ಮಳೆಯ ಅವಶ್ಯಕತೆ ಇರುವುದರಿಂದ ಜೂನ್​ ತಿಂಗಳಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆಯೇ ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಲು ನಿರ್ಮಾಪಕ ವಿಜಯ್​ ಕಿರಗಂದೂರು ಸಜ್ಜಾಗಿದ್ದರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:07 pm, Sun, 12 February 23