AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran Birthday: ರವಿಚಂದ್ರನ್​ಗೆ ಈ ಬಾರಿಯ ಜನ್ಮದಿನ ಸ್ವಲ್ಪ ವಿಶೇಷ, ಸ್ವಲ್ಪ ದುಃಖ

ಬಾಲನಟನಾಗಿ ಗುರುತಿಸಿಕೊಂಡ ರವಿಚಂದ್ರನ್ ಅವರು ನಂತರ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಪಡೆದರು. 1982ರಲ್ಲಿ ಅವರು ಹೀರೋ ಆಗಿ ಬಡ್ತಿ ಪಡೆದರು. ಸುಮಾರು ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿ ಅವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Ravichandran Birthday: ರವಿಚಂದ್ರನ್​ಗೆ ಈ ಬಾರಿಯ ಜನ್ಮದಿನ ಸ್ವಲ್ಪ ವಿಶೇಷ, ಸ್ವಲ್ಪ ದುಃಖ
ರವಿಚಂದ್ರನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 30, 2022 | 7:10 AM

Share

ಕನ್ನಡದಲ್ಲಿ ‘ಪ್ರೇಮಲೋಕ’ (Premaloka Movie) ಸೃಷ್ಟಿ ಮಾಡಿದ ವಿ.ರವಿಚಂದ್ರನ್ (V Ravichandran) ಅವರು ಇಂದು (ಮೇ 30) 61ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಎಲ್ಲರೂ ಕ್ರೇಜಿಸ್ಟಾರ್​ಗೆ ಬರ್ತ್​ಡೇ ಶುಭಾಶಯ ತಿಳಿಸುತ್ತಿದ್ದಾರೆ. ಅವರಿಗೆ ಈ ಬಾರಿಯ ಜನ್ಮದಿನ ಸ್ವಲ್ಪ ವಿಶೇಷ, ಸ್ವಲ್ಪ ದುಃಖ ತರುವಂತಹದ್ದಾಗಿದೆ. ಅದಕ್ಕೆ ಕಾರಣ ಏನು ಎಂಬುದಕ್ಕೆ ಇಲ್ಲಿದೆ ಉತ್ತರ.

ಬಣ್ಣದ ಲೋಕದಲ್ಲಿ ಬಾಲನಟನಾಗಿ ಗುರುತಿಸಿಕೊಂಡ ರವಿಚಂದ್ರನ್ ಅವರು ನಂತರ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಪಡೆದರು. 1982ರಲ್ಲಿ ಅವರು ಹೀರೋ ಆಗಿ ಬಡ್ತಿ ಪಡೆದರು. ಸುಮಾರು ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿ ಅವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ, ‘ರವಿ ಬೋಪಣ್ಣ’ ಹಾಗೂ ‘ಕ್ರಾಂತಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದಿಂದ ಅಪ್​ಡೇಟ್​ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಫ್ಯಾನ್ಸ್ ಇದ್ದಾರೆ.

ಇದನ್ನೂ ಓದಿ: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

ಇದನ್ನೂ ಓದಿ
Image
ಜೀ5ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಜತೆ ಪ್ರಸಾರಕ್ಕೆ ಸಜ್ಜಾದ ಕನ್ನಡದ ‘ತಲೆದಂಡ’, ‘ಮುಗಿಲ್​ ಪೇಟೆ’ ಸಿನಿಮಾಗಳು
Image
ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..
Image
‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​
Image
ಮಗ ಮನುರಂಜನ್​ ಸಿನಿಮಾ ‘ಮುಗಿಲ್​ಪೇಟೆ​’ ಹಾಡಿಹೊಗಳಿದ ರವಿಚಂದ್ರನ್​

ವಿಶೇಷ ಬರ್ತ್​ಡೇ

ರವಿಚಂದ್ರನ್ ಅವರು ಇತ್ತೀಚೆಗೆ ನಟಿಸಿದ ಯಾವ ಸಿನಿಮಾ ಕೂಡ ಅಷ್ಟು ದೊಡ್ಡ ಯಶಸ್ಸು ಪಡೆಯಲಿಲ್ಲ. ಆದರೆ, ಇತ್ತೀಚೆಗೆ ತೆರೆಗೆ ಬಂದ ‘ದೃಶ್ಯ 2’ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತು. ಇದು ಅವರಿಗೆ ಖುಷಿ ನೀಡಿದೆ. ಅವರ ಅಭಿಮಾನಿಗಳೂ ಈ ವಿಚಾರದಲ್ಲಿ ಸಂಭ್ರಮಿಸುತ್ತಿದ್ದಾರೆ. ಹೀಗಾಗಿ, ಅವರಿಗೆ ಈ ವರ್ಷದ ಬರ್ತ್​​ಡೇ ವಿಶೇಷವಾಗಿದೆ. ಇನ್ನು, ಅವರು ಕಲಾವಿದನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡು ನಾಲ್ಕು ದಶಕ ಕಳೆದಿದೆ. ಈ ಕಾರಣಕ್ಕೂ ಅವರಿಗೆ ಜನ್ಮದಿನ ಸ್ಪೆಷಲ್.

ತಾಯಿ ಕಳೆದುಕೊಂಡ ದುಃಖ

ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಈ ವರ್ಷ ಫೆ.28ರಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಕೊನೆಯುಸಿರು ಎಳೆದರು. ಈ ಕಾರಣಕ್ಕೆ ತಾಯಿ ಇಲ್ಲದೆ ಅವರು ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದೆ. ಇದು ಅವರಿಗೆ ತೀವ್ರ ನೋವು ತಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ