AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

V Ravichandran: ‘ಒನ್​ ಆ್ಯಂಡ್​ ಓನ್ಲಿ ರವಿಚಂದ್ರನ್​’ (1n1ly Ravichandran) ಎಂಬುದು ಅವರ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಗಳ ಹೆಸರು. ಮೊದಲ ದಿನವೇ ಅವರು ಅಭಿಮಾನಿಗಳ ಜೊತೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!
ವಿ. ರವಿಚಂದ್ರನ್​
ಮದನ್​ ಕುಮಾರ್​
| Edited By: |

Updated on:Apr 13, 2021 | 4:02 PM

Share

ಯುಗಾದಿ ಹಬ್ಬ ಎಂದರೆ ಹೊಸ ವರ್ಷದ ಆರಂಭ. ಈ ಶುಭ ಸಂದರ್ಭದಲ್ಲಿ ಏನಾದರೂ ಹೊಸದನ್ನು ಪ್ರಾರಂಭಿಸುವ ನಿರ್ಣಯ ಅನೇಕರದ್ದು. ಅದೇ ರೀತಿ ಕ್ರೇಜಿ ಸ್ಟಾರ್​ ರವಿಚಂದ್ರನ್​ ಅವರು ಸೋಶಿಯಲ್​ ಮೀಡಿಯಾದ ಜಗತ್ತಿನಲ್ಲಿ ಈಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಇನ್​ಸ್ಟಾಗ್ರಾಮ್​, ಫೇಸ್​ಬುಕ್​, ಟ್ವಿಟರ್ ಮತ್ತು ಯೂಟ್ಯೂಬ್​ನಲ್ಲಿ ಅಧಿಕೃತ ಖಾತೆಗಳನ್ನು ತೆರೆದಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ.

ರವಿಚಂದ್ರನ್​ ಅವರು ಸೋಶಿಯಲ್​ ಮೀಡಿಯಾಗೆ ಕಾಲಿಡುತ್ತಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಯುಗಾದಿ ಹಬ್ಬಕ್ಕೆ ಸರಿಯಾಗಿ ಅವರು ಅಧಿಕೃತ ಖಾತೆಗಳನ್ನು ಆರಂಭಿಸಿದ್ದಾರೆ. ಒನ್​ ಆ್ಯಂಡ್​ ಓನ್ಲಿ ರವಿಚಂದ್ರನ್​ (1n1ly Ravichandran) ಎಂಬುದು ಅವರ ಅಧಿಕೃತ ಖಾತೆಗಳ ಹೆಸರು. ಮೊದಲ ದಿನವೇ ಅವರು ಅಭಿಮಾನಿಗಳ ಜೊತೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎಲ್ಲರಿಂದಲೂ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

‘ಒನ್​ ಆ್ಯಂಡ್​ ಓನ್ಲಿ ರವಿಚಂದ್ರನ್​’ ಯೂಟ್ಯೂಬ್​ ಖಾತೆಯಲ್ಲಿ ಕೆಲವು ವಿಡಿಯೋಗಳನ್ನು ಕ್ರೇಜಿ ಸ್ಟಾರ್​ ರಿಲೀಸ್​ ಮಾಡಿದ್ದಾರೆ. ಅದರಲ್ಲಿ ತಮ್ಮ ಫ್ಯಾಮಿಲಿ ಬಗ್ಗೆ, ಕೊರೊನಾ ಮುನ್ನಚ್ಚರಿಕೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಧೂಮಪಾನದ ಬಗ್ಗೆಯೂ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ತುಂಬ ಇಷ್ಟವಾಗಿದೆ. ನಿಜ ಜೀವನದಲ್ಲಿ ರವಿಚಂದ್ರನ್​ ಸಿಗರೇಟ್​ ಸೇದುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಹಲವರ ಮನದಲ್ಲಿ ಇರಬಹುದು. ಅದಕ್ಕೆ ಈ ವಿಡಿಯೋದಲ್ಲಿ ಉತ್ತರ ಸಿಕ್ಕಿದೆ.

ಧೂಮಪಾನ ಆರೋಗ್ಯಕ್ಕೆ ಹಾನಿಕರ. ಅದರಿಂದ ಸಾವು ಸಂಭವಿಸುತ್ತದೆ. ಈ ಮಾತನ್ನು ಎಲ್ಲ ಸಿಗರೇಟ್​ ಪ್ಯಾಕ್​ ಮೇಲೆ ಬರೆದಿರುತ್ತಾರೆ. ಸಿನಿಮಾಗೆ ಹೋದರೆ ಮೊದಲು ತೋರಿಸೋದೇ ಇದು. ಆದರೂ ಯಾರೂ ಸಿಗರೇಟ್​ ಸೇದೋದು ಕಡಿಮೆ ಮಾಡಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯವೂ ಕಡಿಮೆ ಆಗಿಲ್ಲ. ಯಾಕೆಂದರೆ ನಮ್ಮಲ್ಲಿ ಒಂದು ಗುಣ ಇದೆ. ನಾವು ಎಲ್ಲದಕ್ಕೂ ಚಾನ್ಸ್​ ತಗೊಳ್ತೀವಿ. ತಪ್ಪು ಅಂತ ಗೊತ್ತಿದ್ದರೂ ತಪ್ಪು ಮಾಡುವ ಗುಣ ನಮ್ಮಲ್ಲಿ ಇದೆ. ಅಬ್ಬಬ್ಬಾ ಎಂದರೆ ಕ್ಷಮೆ ಕೇಳಿ ಸರಿಮಾಡಿಕೊಳ್ಳಬಹುದು ಎಂದುಕೊಳ್ಳುತ್ತೇನೆ. ಕೊರೊನಾ ಜೊತೆ ಚಾನ್ಸ್​ ತಗೋಬೇಡಿ. ಒಳ್ಳೇದಲ್ಲ. ನಾನು ಸಿಗರೇಟ್​ ಸೇದೋದು ಸಿನಿಮಾದಲ್ಲಿ ಮಾತ್ರ. ಪಾತ್ರಗಳಿಗಾಗಿ ಮಾತ್ರ’ ಎಂದು ರವಿಚಂದ್ರನ್​ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಹಿರಿಯ ಸ್ಟಾರ್ ಕಲಾವಿದರು ಸೋಶಿಯಲ್​ ಮೀಡಿಯಾ ಬಳಸುತ್ತಿದ್ದಾರೆ. ಶಿವರಾಜ್​ಕುಮಾರ್​, ರಮೇಶ್​ ಅರವಿಂದ್​, ಜಗ್ಗೇಶ್​, ಸುಧಾರಾಣಿ ಮುಂತಾದವರು ಈ ವಿಚಾರದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಹಾಗಿದ್ದರೂ ರವಿಚಂದ್ರನ್​ ಅವರು ಇಷ್ಟು ದಿನ ಸೋಶಿಯಲ್​ ಮೀಡಿಯಾಗೆ ಕಾಲಿಟ್ಟಿರಲಿಲ್ಲ ಎಂದು ಅವರ ಫ್ಯಾನ್ಸ್​ ಸ್ವಲ್ಪ ಬೇಸರ ಮಾಡಿಕೊಂಡಿದ್ದರು. ಆದರೆ ಆ ಬೇಸರಕ್ಕೆ ಈಗ ಪೂರ್ಣವಿರಾಮ ಬಿದ್ದಿದೆ.

ಇದನ್ನೂ ಓದಿ: ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಅಂತೂ ದೊಡ್ಡ ನಿರ್ಧಾರ ತೆಗೆದುಕೊಂಡ ರವಿಚಂದ್ರನ್​!​ ಇನ್ಮುಂದೆ ನಕಲಿಗಳ ಆಟ ನಡೆಯೋದಿಲ್ಲ

(V Ravichandran enters social media with One and Only Ravichandran official account)

Published On - 12:30 pm, Tue, 13 April 21

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು